ಪ್ರಧಾನಿ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಗೆ ಕೆಸಿಆರ್, ನಿತೀಶ್ ಕುಮಾರ್ ಗೈರು
Photo:PTI
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿಈಗ ನಡೆಯುತ್ತಿರುವ ಸರಕಾರದ ಚಿಂತಕರ ಚಾವಡಿ ನೀತಿ ಆಯೋಗದ (NITI Aayog )ಏಳನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi )ವಹಿಸಿದ್ದಾರೆ.
ಸಭೆಗೆ ಇಬ್ಬರು ಪ್ರಮುಖ ನಾಯಕರಾದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಭೆಯಿಂದ ಹೊರಗುಳಿದಿದ್ದಾರೆ.
ಜುಲೈ 2019 ರ ಬಳಿಕ ಆಡಳಿತ ಮಂಡಳಿಯ ಮೊದಲ ವೈಯಕ್ತಿಕ ಸಭೆ ಇದಾಗಿದೆ. ನೀತಿ ಆಯೋಗದ ಉನ್ನತ ಸಂಸ್ಥೆಯಾದ ಕೌನ್ಸಿಲ್, ಎಲ್ಲಾ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು ಹಾಗೂ ಹಲವಾರು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ. ಪ್ರಧಾನ ಮಂತ್ರಿಗಳು ನೀತಿ ಆಯೋಗದ ಅಧ್ಯಕ್ಷರಾಗಿದ್ದಾರೆ.
Next Story