ಮಹಿಳೆಯನ್ನು ನಿಂದಿಸಿ, ಹಲ್ಲೆಗೈದ ಬಿಜೆಪಿ ಸದಸ್ಯನೆನ್ನಲಾದ ವ್ಯಕ್ತಿಯ ವಿರುದ್ಧ ಬುಲ್ಡೋಝರ್ ಕಾರ್ಯಾಚರಣೆ
-

ಹೊಸದಿಲ್ಲಿ: ನೊಯ್ಡಾ(Noida)ದ ಸೆಕ್ಟರ್-93 ಬಿ ಯಲ್ಲಿರುವ ವಸತಿ ಸಮುಚ್ಛಯದಲ್ಲಿ ಗಿಡ ನೆಡುವ ವಿಚಾರದ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ನಿಂದಿಸಿ ಹಲ್ಲೆಗೈದ ಆರೋಪ ಹೊತ್ತ ಬಿಜೆಪಿ(BJP) ಕಿಸಾನ್ ಮೋರ್ಚಾ ಸದಸ್ಯನೆಂದು ತನ್ನನ್ನು ಪರಿಚಯಿಸುವ ವ್ಯಕ್ತಿಯೊಬ್ಬನ ಅಕ್ರಮ ನಿರ್ಮಾಣಗಳನ್ನು ಇಂದು ಬುಲ್ಡೋಝರ್(Bulldozer)ಗಳ ಮೂಲಕ ನೆಲಸಮಗೊಳಿಸಲಾಗಿದೆ.
ಆರೋಪಿ ಶ್ರೀಕಾಂತ್ ತ್ಯಾಗಿಯ ಅಕ್ರಮ ನಿರ್ಮಾಣಗಳನ್ನು ಗ್ರ್ಯಾಂಡ್ ಒಮೇಕ್ಸ್ ಸೊಸೈಟಿಯಲ್ಲಿ ಇಂದು ನೆಲಸಮಗೊಳಿಸಲಾಗಿದೆ. ಈ ಸಂದರ್ಭ ಗದ್ದಲ ಸೃಷ್ಟಿಸಿದ ತ್ಯಾಗಿಯ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು ಆತನ ವಿರುದ್ಧ ಗೂಂಡಾ ಕಾಯಿದೆಯನ್ನೂ ಹೇರಲಾಗಿದೆ.
ಮಹಿಳೆ ಮತ್ತು ತ್ಯಾಗಿಯ ನಡುವೆ ನಡೆದ ಜಗಳದ ವೀಡಿಯೋ ವೈರಲ್ ಆಗಿತ್ತಲ್ಲದೆ ಅದರಲ್ಲಿ ಆರೋಪಿಯು ಮಹಿಳೆಗೆ ನಿಂದಿಸಿ ಹಲ್ಲೆಗೈಯ್ಯುತ್ತಿರುವುದು ಕಾಣಿಸುತ್ತದೆ.
ಇದರ ಬೆನ್ನಲ್ಲೇ ತ್ಯಾಗಿಯ ಬೆಂಬಲಿಗರು ವಸತಿ ಸಮುಚ್ಛಯಕ್ಕೆ ಆಗಮಿಸಿ ಘೋಷಣೆಗಳನ್ನು ಕೂಗಿ ಮಹಿಳೆಯ ವಿಳಾಸವನ್ನು ಕೇಳಿದ್ದರು.
ತ್ಯಾಗಿ ತನ್ನನ್ನು ಬಿಜೆಪಿ ಕಿಸಾನ್ ಮೋರ್ಚಾ ಸದಸ್ಯನೆಂದು ಪರಿಚಯಿಸುತ್ತಿದ್ದು ಹಿರಿಯ ಪಕ್ಷ ನಾಯಕರೊಂದಿಗೆ ತಾನಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾನೆ.
ಆದರೆ ಆತನಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಮಹಿಳೆಯನ್ನು ನಿಂದಿಸಿದ ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಂಡಿದ್ದಕ್ಕಾಗಿ ದಿಲ್ಲಿ ಬಿಜೆಪಿ ವಕ್ತಾರ ಖೇಮ್ಚಂದ್ ಶರ್ಮ ಅವರು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
ಈ ಪ್ರಕರಣದ ನಂತರ ಕರ್ತವ್ಯ ನಿಭಾಯಿಸಲು ನಿರ್ಲಕ್ಷ್ಯ ತೋರಿದ ನೊಯ್ಡಾ ಫೇಸ್ 2 ಠಾಣೆಯ ಠಾಣಾಧಿಕಾರಿ ಸುಜಿತ್ ಉಪಾಧ್ಯಾಯ ಅವರನ್ನು ಅಮಾನತುಗೊಳಿಸಲಾಗಿದೆ.
ಆರೋಪಿಯನ್ನು ಬಂಧಿಸಬೇಕು ಮತ್ತು ಸಂತ್ರಸ್ತ ಮಹಿಳೆಗೆ ಪೊಲೀಸ್ ರಕ್ಷಣೆಯೊದಗಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ.
ಇದನ್ನೂ ಓದಿ: ಕೇಂದ್ರ ಸೇವೆಗೆ ಹೋಗಲು ಬಯಸದ ಹಿರಿಯ ಐಪಿಎಸ್ ಅಧಿಕಾರಿಗಳು !
Illegal construction/encroachments at the goon Srikant Tyagi’s house in a Noida condominium being brought down,right now.
— Rajesh Kalra (@rajeshkalra) August 8, 2022
Given his high-handedness, propensity to drop names and vulgar language against the lady & residents, he should be behind bars. pic.twitter.com/8b4ba9ZXAO
Srikant Tyagi's illegally constructed area demolished by Noida Authority - Bulldozer Action against #SrikantTyagi #GrandOmaxe pic.twitter.com/RxUf9pCTJr
— Utkarsh Singh (@utkarshs88) August 8, 2022
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.