ಮುಂದಿನ ವರ್ಷದ ಅಂತ್ಯಕ್ಕೆ ರಾಮಮಂದಿರ ನಿರ್ಮಾಣ ಪೂರ್ಣ: ಚಂಪತ್ ರೈ
ಸುಲ್ತಾನ್ಪುರ: ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ.
ಬಳಿಕ ಮಂದಿರದಲ್ಲಿ ಜನರಿಗೆ ರಾಮಲಲ್ಲಾನ ದರ್ಶನ ಪಡೆಯಲು ಸಾಧ್ಯವಾಗುತ್ತದೆ ಎಂದು ಶುಕ್ರವಾರ ರಕ್ಷಾ ಬಂಧನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ತಿಳಿಸಿದ್ದಾರೆ.
"ಸುಲ್ತಾನ್ಪುರ ಅಯೋಧ್ಯೆಗೆ ಸಮೀಪದಲ್ಲಿರುವುದರಿಂದ, ಮುಂದಿನ ವರ್ಷ ಡಿಸೆಂಬರ್ನಲ್ಲಿ ಶ್ರೀರಾಮ ಲಲ್ಲಾನ 'ದರ್ಶನ'ವನ್ನು ಹೊಂದಲು ನಾನು ಇಲ್ಲಿನ ಜನರಿಗೆ ಆಹ್ವಾನವನ್ನು ನೀಡುತ್ತಿದ್ದೇನೆ" ಎಂದು ಅವರು ಹೇಳಿದ್ದಾರೆ.
ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 2023ರ ಡಿಸೆಂಬರ್ನಲ್ಲಿ ಭಕ್ತಾದಿಗಳ ದರ್ಶನಕ್ಕೆ ದೇವಾಲಯ ಸಿದ್ಧವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನಿರ್ಮಾಣ ಕಾರ್ಯದಲ್ಲಿ ಕಬ್ಬಿಣವನ್ನು ಬಳಸುತ್ತಿಲ್ಲ ಎಂದು ಪ್ರತಿಪಾದಿಸಿದ ರೈ, ದೇವಾಲಯದ ವಿನ್ಯಾಸವು ಜನರು ಆಶ್ಚರ್ಯಚಕಿತರಾಗುವಂತಿದೆ ಎಂದು ಹೇಳಿದ್ದಾರೆ.
Next Story