Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀಲಂಕಾದಲ್ಲಿ ನಿಲುಗಡೆಯಾಗಿರುವ ತನ್ನ...

ಶ್ರೀಲಂಕಾದಲ್ಲಿ ನಿಲುಗಡೆಯಾಗಿರುವ ತನ್ನ ಹಡಗಿನಿಂದ ಯಾವುದೇ ದೇಶದ ಭದ್ರತೆಗೆ ಅಪಾಯವಿಲ್ಲ ಎಂದ ಚೀನಾ

ವಾರ್ತಾಭಾರತಿವಾರ್ತಾಭಾರತಿ17 Aug 2022 12:08 PM IST
share
ಶ್ರೀಲಂಕಾದಲ್ಲಿ ನಿಲುಗಡೆಯಾಗಿರುವ ತನ್ನ ಹಡಗಿನಿಂದ ಯಾವುದೇ ದೇಶದ ಭದ್ರತೆಗೆ ಅಪಾಯವಿಲ್ಲ ಎಂದ ಚೀನಾ

ಬೀಜಿಂಗ್: ತನ್ನ ಹಡಗು ಶ್ರೀಲಂಕಾದ(Srilanka) ಬಂದರಿನಲ್ಲಿ ಲಂಗರು ಹಾಕಿರುವುದು ಯಾವುದೇ  ದೇಶದ ಭದ್ರತೆಯನ್ನು ಬಾಧಿಸುವುದಿಲ್ಲ ಹಾಗೂ ಈ ಹಡಗಿಗೆ ಯಾವುದೇ ಮೂರನೇ ಪಕ್ಷ ಅಡ್ಡಿಯುಂಟು ಮಾಡಬಾರದು ಎಂದು ಚೀನಾ(china) ಹೇಳಿದೆ.

ಚೀನಾದ ಗೂಢಚಾರಿಕೆ ಹಡಗು ಎಂದು ತಿಳಿಯಲಾಗಿರುವ `ಯುವಾನ್ ವಾಂಗ್ 5'(yuwan wang) ಮಂಗಳವಾರ ಶ್ರೀಲಂಕಾದ ಹಂಬನ್‍ಟೋಟಾ ಬಂದರನ್ನು ಪ್ರವೇಶಿಸಿದೆ. ಈ ಹಡಗಿನ ಮೂಲಕ ಚೀನಾವು ಭಾರತದ ದಕ್ಷಿಣ ಭಾಗಗಳಲ್ಲಿರುವ ಪ್ರಮುಖ ಸ್ಥಳಗಳ ಮೇಲೆ ಗೂಢಚಾರಿಕೆ ನಡೆಸಬಹುದೆಂಬ ಕಳವಳವನ್ನು ಭಾರತ ವ್ಯಕ್ತಪಡಿಸಿದ ಹೊರತಾಗಿಯೂ ತನ್ನ ಬಂದರು ಪ್ರವೇಶಿಸಲು ಶ್ರೀಲಂಕಾ ಈ ಹಡಗಿಗೆ ಅನುಮತಿಸಿದೆ.

ತಮ್ಮ ದೇಶದ ಹಡಗಿನಿಂದ ಭದ್ರತೆಯ ಅಪಾಯವಿದೆಯೆಂಬ ಆರೋಪಗಳನ್ನು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್‍ಬಿನ್ ಮಂಗಳವಾರ ಅಲ್ಲಗಳೆದಿದ್ದಾರೆ.

``ಹಡಗಿನ ವೈಜ್ಞಾನಿಕ ಸಂಶೋಧನಾ ಚಟುವಟಿಕೆಗಳು ಅಂತಾರಾಷ್ಟ್ರೀಯ  ಕಾನೂನು ಮತ್ತು ಪದ್ಧತಿಗಳಿಗೆ ಅನುಸಾರವಾಗಿದೆ ಹಾಗೂ ಹಡಗು ಶ್ರೀಲಂಕಾ  ಸರಕಾರದ ಸಹಕಾರದೊಂದಿಗೆ ಅಲ್ಲಿನ ಬಂದರಿನಲ್ಲಿ ನಿಲುಗಡೆಯಾಗಿದೆ,'' ಎಂದು ಅವರು ಹೇಳಿದ್ದಾರೆ.

ಈ ಹಡಗು ಶ್ರೀಲಂಕಾದಲ್ಲಿ ನಿಲುಗಡೆಯಾಗಿರುವ ಕುರಿತು ಭಾರತದ ಕಳವಳದ ಬಗ್ಗೆ ಶ್ರೀಲಂಕಾದಲ್ಲಿರುವ ಚೀನಾ ರಾಯಭಾರಿ ಖ್ವಿ ಝೆನ್‍ಹೊಂಗ್ ಅವರನ್ನು ಕೇಳಿದಾಗ "ನನಗೆ ತಿಳಿದಿಲ್ಲ, ನೀವು ಭಾರತೀಯ ಸ್ನೇಹಿತರನ್ನು ಕೇಳಬೇಕು... ಪ್ರಾಯಶಃ ಇದುವೇ ಜೀವನ" ಎಂದು ಹೇಳಿದ್ದರು.

ಆಗಸ್ಟ್ 8ರಂದು ಭಾರತದ ಹೆಸರನ್ನು ಉಲ್ಲೇಖಿಸದೇ ಪ್ರತಿಕ್ರಿಯಿಸಿದ್ದ ಚೀನಾ ಇತರ ದೇಶಗಳು ಶ್ರೀಲಂಕಾದ ಮೇಲೆ ಒತ್ತಡ ಹೇರಿ ಅದರ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸುವುದು ಸಂಪೂರ್ಣವಾಗಿ ಅಸಮರ್ಥನೀಯ ಎಂದು ಹೇಳಿತ್ತು. ಇದರ ಬೆನ್ನಲ್ಲೇ ಈ ಆರೋಪ ತಿರಸ್ಕರಿಸಿದ್ದ ಭಾರತ, ಆ ಹಡಗಿಗೆ ಅನುಮತಿ ನೀಡದಂತೆ ಶ್ರೀಲಂಕಾದ ಮೇಲೆ ಒತ್ತಡ ಹೇರುವುದಿಲ್ಲ ಎಂದು ತಿಳಿಸಿತ್ತು.

ಶ್ರೀಲಂಕಾದ ಜಲ ಪ್ರದೇಶದಲ್ಲಿ ಯಾವುದೇ ಸಂಶೋಧನಾ ಚಟುವಟಿಕೆಗಳನ್ನು ನಡೆಸುವುದಿಲ್ಲ ಎಂಬ ಷರತ್ತಿನೊಂದಿಗೆ ಹಡಗಿಗೆ ಶ್ರೀಲಂಕಾದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ ಎಂದು ಹಂಬನ್‍ತೋಟ ಬಂದರು ಅಧಿಕಾರಿಗಳು ಹೇಳಿದ್ದಾರೆ.

ಭಾರತ ಅಧಿಕೃತವಾಗಿ ಈ ಹಡಗಿಗೆ ಆಕ್ಷೇಪ ಸೂಚಿಸಿಲ್ಲವಾದರೂ ಭಾರತದ ಭದ್ರತೆ ಮತ್ತು ಆರ್ಥಿಕ ಆಸಕ್ತಿಗಳ ಮೇಲೆ ಪರಿಣಾಮ ಬೀರುವ ಯಾವುದೇ ಬೆಳವಣಿಗೆಯ ಮೇಲೆ ನಿಗಾ ಇಡುತ್ತಿರುವುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X