Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅ.11ರಂದು ಪೂಜಾಸ್ಥಳಗಳ ಕಾಯ್ದೆ ವಿರುದ್ಧದ...

ಅ.11ರಂದು ಪೂಜಾಸ್ಥಳಗಳ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ9 Sept 2022 9:30 PM IST
share
ಅ.11ರಂದು ಪೂಜಾಸ್ಥಳಗಳ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂ

ಹೊಸದಿಲ್ಲಿ,ಸೆ.9: 1991ರ ಪೂಜಾಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯದ ಮೂವರು ನ್ಯಾಯಾಧೀಶರ ಪೀಠವು ಅ.11ರಂದು ನಡೆಸಲಿದೆ.

ಎರಡು ವಾರಗಳಲ್ಲಿ ಅರ್ಜಿಗಳಿಗೆ ಉತ್ತರವನ್ನು ಸಲ್ಲಿಸುವಂತೆ ಶುಕ್ರವಾರ ಕೇಂದ್ರಕ್ಕೆ ಸೂಚಿಸಿದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು,ಅರ್ಜಿಗಳಿಗೆ ಸಂಬಂಧಿಸಿದಂತೆ ಕಳೆದ ವರ್ಷ ಹೊರಡಿಸಲಾಗಿದ್ದ ನೋಟಿಸಿಗೆ ಕೇಂದ್ರ ಸರಕಾರವು ಈವರೆಗೆ ಯಾವುದೇ ಉತ್ತರವನ್ನು ಸಲ್ಲಿಸಿಲ್ಲ ಎನ್ನುವುದನ್ನು ಗಮನಿಸಿತು.

ಪೂಜಾಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸಿರುವ ಮುಖ್ಯ ಅರ್ಜಿಗಳಲ್ಲಿ ಮಧ್ಯಪ್ರವೇಶಕ್ಕೆ ಮತ್ತು ಐದು ಪುಟಗಳಿಗೆ ಮೀರದಂತೆ ಹೇಳಿಕೆಗಳನ್ನು ಸಲ್ಲಿಸಲೂ ಪೀಠವು ಅರ್ಜಿದಾರರಿಗೆ ಅವಕಾಶವನ್ನು ನೀಡಿತು.

ಕೆಲವು ಅರ್ಜಿಗಳು ಮತ್ತು ವಿಷಯದ ಕುರಿತು ಸಲ್ಲಿಸಲಾಗಿರುವ ಮಧ್ಯಪ್ರವೇಶ ಅರ್ಜಿಗಳ ಕುರಿತೂ ಸರ್ವೋಚ್ಚ ನ್ಯಾಯಾಲಯವು ಕೇಂದ್ರಕ್ಕೆ ನೋಟಿಸನ್ನು ಹೊರಡಿಸಿತು.

ಪೂಜಾಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿಯು, ಆಕ್ರಮಣಕಾರರಿಂದ ಧ್ವಂಸಗೊಂಡ ತಮ್ಮ ಪೂಜಾ ಮತ್ತು ಯಾತ್ರಾಸ್ಥಳಗಳನ್ನು ಮರುಸ್ಥಾಪಿಸುವ ಹಿಂದುಗಳು,ಜೈನರು,ಬೌದ್ಧರು ಮತ್ತು ಸಿಕ್ಖರ ಹಕ್ಕುಗಳನ್ನು ಕಾಯ್ದೆಯು ಕಸಿದುಕೊಳ್ಳುತ್ತದೆ ಎಂದು ಪ್ರತಿಪಾದಿಸಿದೆ.

ಕಾಶಿ ಅರಸು ಮನೆತನದ ಮಹಾರಾಜಕುಮಾರಿ ಕೃಷ್ಣಪ್ರಿಯಾ,ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ,ಮಾಜಿ ಸಂಸದ ಚಿಂತಾಮಣಿ ಮಾಳವೀಯ,ನಿವೃತ್ತ ಸೇನಾಧಿಕಾರಿ ಅನಿಲ ಕಬೋತ್ರಾ,ವಕೀಲ ಚಂದ್ರಶೇಖರ,ವಾರಣಾಸಿ ನಿವಾಸಿ ರುದ್ರ ವಿಕ್ರಮ ಸಿಂಗ್,ಧಾರ್ಮಿಕ ನಾಯಕ ಸ್ವಾಮಿ ಜಿತೇಂದ್ರಾನಂದ ಸರಸ್ವತಿ,ಮಥುರಾ ನಿವಾಸಿ ಧಾರ್ಮಿಕ ಗುರು ದೇವಕಿನಂದನ ಠಾಕೂರ್ ಮತ್ತಿತರರು ಈ ಅರ್ಜಿಗಳಲ್ಲಿ ಸಲ್ಲಿಸಿದ್ದಾರೆ.

ಕಾಯ್ದೆಯನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯರ ಅರ್ಜಿ ಸೇರಿದಂತೆ ಎರಡು ಅರ್ಜಿಗಳ ಕುರಿತು ಸವೋಚ್ಚ ನ್ಯಾಯಾಲಯವು ಈ ಹಿಂದೆ ಕೇಂದ್ರಕ್ಕೆ ನೋಟಿಸ್‌ಗಳನ್ನು ಹೊರಡಿಸಿತ್ತು. ಹಿಂದು ಅರ್ಜಿದಾರರ ಅರ್ಜಿಗಳನ್ನು ಪ್ರಶ್ನಿಸಿ ಜಮೀಯತ್ ಉಲಮಾ-ಇ-ಹಿಂದ್ ಕೂಡ ಅರ್ಜಿಯನ್ನು ಸಲ್ಲಿಸಿದ್ದು,ಕಾಯ್ದೆಯ ವಿರುದ್ಧದ ಅರ್ಜಿಗಳನ್ನು ಅಂಗೀಕರಿಸಿದರೆ ಅದು ಭಾರತದಾದ್ಯಂತದ ಅಸಂಖ್ಯಾತ ಮಸೀದಿಗಳ ವಿರುದ್ಧ ದಾವೆಗಳ ಮಹಾಪೂರಕ್ಕೆ ಕಾರಣವಾಗುತ್ತದೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X