‘40 ಪರ್ಸೆಂಟ್ ಕಮಿಷನ್ ಸಿಎಂಗೆ ಸುಸ್ವಾಗತ’: ಬ್ಯಾನರ್ ಹಾಕಿ ಕರ್ನಾಟಕ ಮುಖ್ಯಮಂತ್ರಿ ಗುರಿಯಾಗಿಸಿದ ಟಿಆರ್ ಎಸ್
photo- twitter@KeypadGuerilla
ಹೈದರಾಬಾದ್: ಸಿಕಂದರಾಬಾದ್ ನ ಪರೇಡ್ ಮೈದಾನದ ಬಳಿ ‘40% ಕಮಿಷನ್ ಸಿಎಂಗೆ ಸುಸ್ವಾಗತ’ ಎಂಬ ಬ್ಯಾನರ್ ಹಾಕುವ ಮೂಲಕ ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದು, ಇಂದು ಪರೇಡ್ ಮೈದಾನದಲ್ಲಿ ಹೈದರಾಬಾದ್ ಲಿಬರೇಶನ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ಸಮಯದಲ್ಲಿ ಈ ಬ್ಯಾನರ್ ಹಾಕಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ಸರಕಾರದ ವಿರುದ್ಧ ಗುತ್ತಿಗಾರರ ಸಂಘದ ಅಧ್ಯಕ್ಷ 40% ಕಮಿಷನ್ ಆರೋಪ ಮಾಡಿದ್ದು ದೇಶಾದ್ಯಂತ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಟೀಕೆಗೆ ಕಾರಣವಾಗಿದೆ.
ಇದನ್ನೂ ಓದಿ: ಕಲಬುರಗಿ: ಸಿಎಂ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನ
#BREAKING @trspartyonline targets #Karnataka CM by putting up *Welcome to 40% commission CM* banner near parade grounds. Union home minister Amit Shah will be flagging off #HyderabadLiberationDay event at Parade grounds today. #Telangana pic.twitter.com/VbPXY5kHIy
— Imran Khan (@KeypadGuerilla) September 17, 2022