ಸಿಪಿಐ(ಎಂ) ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ
-

PHOTO: PTI
ತಿರುವನಂತಪುರಂ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಹಿರಿಯ ನಾಯಕ ಮತ್ತು ಪಕ್ಷದ ಕೇರಳ ಘಟಕದ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರು ಅಕ್ಟೋಬರ್ 1 ರಂದು ಚೆನ್ನೈನಲ್ಲಿ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು ಮತ್ತು ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚಿನವರೆಗೂ ಅವರು ರಾಜ್ಯ ಕಾರ್ಯದರ್ಶಿ ಹುದ್ದೆಯಲ್ಲಿದ್ದರು. ಅವರ ಅನಾರೋಗ್ಯದಿಂದಾಗಿ ಕರ್ತವ್ಯಗಳನ್ನು ನಿರ್ವಹಿಸಲು ಕಷ್ಟಕರವಾದಾಗ ಅವರು ತಮ್ಮ ಸ್ಥಾನವನ್ನು ತ್ಯಜಿಸಿದರು. ಕೊಡಿಯೇರಿ ಸಿಪಿಐ(ಎಂ) ಪಾಲಿಟ್ಬ್ಯೂರೋ ಸದಸ್ಯರೂ ಆಗಿದ್ದರು.
ಆಗಸ್ಟ್ ಅಂತ್ಯದಲ್ಲಿ, ಕೊಡಿಯೇರಿ ಅವರು ಸತತ ಮೂರು ಅವಧಿಗೆ ಪಕ್ಷದ ಕಾರ್ಯದರ್ಶಿ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪಕ್ಷಕ್ಕೆ ಮನವಿ ಮಾಡಿದ್ದರು. ನಂತರ ಅವರನ್ನು ಚಿಕಿತ್ಸೆಗಾಗಿ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೆಪ್ಟೆಂಬರ್ 9 ರಂದು ಕೊಡಿಯೇರಿ ಅವರನ್ನು ಭೇಟಿ ಮಾಡಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂಬ ಊಹಾಪೋಹಗಳನ್ನು ಹುಟ್ಟುಹಾಕಿತ್ತು.
ಅವರ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಎಂವಿ ಗೋವಿಂದನ್ ಆಯ್ಕೆಯಾಗಿದ್ದಾರೆ. ಕೊಡಿಯೇರಿ ಅವರು ತಮ್ಮ ಸಹೋದ್ಯೋಗಿ ಎ. ವಿಜಯರಾಘವನ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದ ನಂತರ ನವೆಂಬರ್, 2020 ರಲ್ಲಿ ಆರೋಗ್ಯ ಸಮಸ್ಯೆಗಳಿಂದಾಗಿ ಕೆಲಸದಿಂದ ತಾತ್ಕಾಲಿಕ ವಿರಾಮವನ್ನು ಪಡೆದರು. ಡಿಸೆಂಬರ್ 2021 ರಲ್ಲಿ, ತಿಂಗಳ ಚಿಕಿತ್ಸೆಯ ನಂತರ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಮತ್ತೆ ಸೇರಿದ ಒಂದು ದಿನದ ಬಳಿಕ, ಆಂಕೊಲಾಜಿಸ್ಟ್ಗಳು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಕೊಡಿಯೇರಿ ತಮ್ಮ ಅನಾರೋಗ್ಯದ ಬಗ್ಗೆ ಹೇಳಿಕೊಂದಿದ್ದರು.
ಕಣ್ಣೂರು ಜಿಲ್ಲೆಯ ತಲಶ್ಶೇರಿಯ ಕೊಡಿಯೇರಿ ಗ್ರಾಮದಲ್ಲಿ ಜನಿಸಿದ ಅವರು, 1970ರಲ್ಲಿ ಹದಿಹರೆಯದಲ್ಲಿದ್ದಾಗಲೇ ಸಿಪಿಐ(ಎಂ) ಸೇರಿದ್ದರು. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ಸೇರಿದಂತೆ ಪಕ್ಷದ ವಿವಿಧ ಪ್ರಮುಖ ಸಂಘಟನೆಗಳಲ್ಲಿ ನಾಯಕತ್ವ ವಹಿಸಿದ್ದರು. 1975-77ರ ತುರ್ತು ಪರಿಸ್ಥಿತಿಯಲ್ಲಿ, ಕೊಡಿಯೇರಿಯವರು ತಮ್ಮ 20ನೇ ವಯಸ್ಸಿನಲ್ಲಿದ್ದಾಗ 16 ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದರು.
ಸಿಪಿಐ(ಎಂ)ನ ಕಣ್ಣೂರು ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಐದು ಬಾರಿ ತಲಶ್ಶೇರಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1982, 1987, 2001, 2006 ಮತ್ತು 2011. 2006 ರಲ್ಲಿ ಎಡ ಪ್ರಜಾಸತ್ತಾತ್ಮಕ ರಂಗವು ಅಧಿಕಾರಕ್ಕೆ ಬಂದಾಗ ಅವರು ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.