Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2020 ರಲ್ಲಿ ಬಡತನಕ್ಕೆ ಜಾರಿದ 5.6 ಕೋಟಿ...

2020 ರಲ್ಲಿ ಬಡತನಕ್ಕೆ ಜಾರಿದ 5.6 ಕೋಟಿ ಭಾರತೀಯರು: ವಿಶ್ವ ಬ್ಯಾಂಕ್‌ ವರದಿ

ವಾರ್ತಾಭಾರತಿವಾರ್ತಾಭಾರತಿ6 Oct 2022 4:23 PM IST
share
2020 ರಲ್ಲಿ ಬಡತನಕ್ಕೆ ಜಾರಿದ 5.6 ಕೋಟಿ ಭಾರತೀಯರು: ವಿಶ್ವ ಬ್ಯಾಂಕ್‌ ವರದಿ

ಹೊಸದಿಲ್ಲಿ: ಕೋವಿಡ್‌ ಸಾಂಕ್ರಾಮಿಕ ಮೊದಲು ಕಾಣಿಸಿಕೊಂಡ ವರ್ಷವಾದ 2020 ರಲ್ಲಿ ಒಟ್ಟು 5.6  ಕೋಟಿ ಭಾರತೀಯರು ಬಡತನಕ್ಕೆ (poverty) ಜಾರಿದ್ದಾರೆ ಎಂದು ಬುಧವಾರ ಬಿಡುಗಡೆಗೊಂಡ ವಿಶ್ವ ಬ್ಯಾಂಕ್‌ (World Bank) ವರದಿ ಹೇಳಿದೆ. ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಇಕಾನಮಿ(Centre for Monitoring Indian Economy) ನಡೆಸಿದ ಸಮೀಕ್ಷೆಯ ಅಂಕಿಅಂಶ ಆಧರಿಸಿ ಈ ವರದಿ ತಯಾರಿಸಲಾಗಿದೆ ಎಂದು scroll.in ವರದಿ ಮಾಡಿದೆ.

ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಇಕಾನಮಿ ಇದರ ಕನ್ಸೂಮರ್‌ ಪಿರಮಿಡ್ಸ್‌ ಹೌಸ್‌ಹೋಲ್ಡ್ಸ್‌ ಸರ್ವೇ ವರದಿಯನ್ನು ಇನ್ನಷ್ಟೇ ಅಂತಿಮಗೊಳಿಸಬೇಕಾಗಿದ್ದರೂ ಅದರ ಅಂಕಿಅಂಶಗಳನ್ನು ವಿಶ್ವ ಬ್ಯಾಂಕ್‌ ತನ್ನ 'ಪವರ್ಟಿ ಎಂಡ್‌ ಶೇರ್ಡ್‌ ಪ್ರಾಸ್ಪರಿಟಿ 2020' ಎಂಬ ಜಾಗತಿಕ ಬಡತನ ಅಂದಾಜುಗಳನ್ನು ಹೊಂದಿದ ವರದಿಯಲ್ಲಿ ಬಳಸಿದೆ.

ಭಾರತವು 2011 ರಿಂದ ಬಡತನ ಕುರಿತ ಅಧಿಕೃತ ಅಂಕಿಅಂಶಗಳನ್ನು ಬಿಡುಗಡೆಗೊಳಿಸದೇ ಇರುವುದರಿಂದ ಅಗತ್ಯವಿದ್ದೆಡೆ ಸಿಎಂಐಇ ಸಮೀಕ್ಷೆಯ ದತ್ತಾಂಶಗಳನ್ನು ಬಳಸಿಕೊಳ್ಳಲಾಗಿದೆ ಎಂದು ವಿಶ್ವ ಬ್ಯಾಂಕ್‌ ಹೇಳಿದೆ.

ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಯಲ್ಲಿ ಪ್ರಸ್ತುಪಡಿಸಿದ ಮಾಹಿತಿಯಲ್ಲಿ ಭಾರತದಲ್ಲಿ 2020 ರಲ್ಲಿ 2.3 ಕೋಟಿ ಜನರು ಬಡತನಕ್ಕೆ ಜಾರಿದ್ದಾರೆ ಎಂದು ಹೇಳಿದ್ದರೂ ತನ್ನ ಅಂದಾಜು ಅದಕ್ಕಿಂತ ಹೆಚ್ಚಾಗಿದೆ ಎಂದು ವಿಶ್ವ ಬ್ಯಾಂಕ್‌ ಹೇಳಿದೆ.

ಐಎಂಎಫ್‌ ವರದಿಯನ್ನು ಅರ್ಥಶಾಸ್ತ್ರಜ್ಞರಾದ ಸುರ್ಜಿತ್‌ ಭಲ್ಲಾ, ಕರಣ್‌ ಭಾಸಿನ್ ಮತ್ತು ಅರವಿಂದ್‌ ವಿರ್ಮಾನಿ ಸಿದ್ಧಪಡಿಸಿದ್ದರು.

ಜಾಗತಿಕವಾಗಿ ಬಡತನ ಪ್ರಮಾಣ 2019 ರಲ್ಲಿ ಇದ್ದ ಶೇ 8.4 ರಿಂದ 2020 ರಲ್ಲಿ ಶೇ 9.3 ಗೆ ಏರಿಕೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ತನ್ನ ವರದಿಯಲ್ಲಿ ಹೇಳಿದೆ.

ಭಾರತದಲ್ಲಿ ಗ್ರಾಮೀಣ ಭಾಗಗಳಲ್ಲಿ 2011 ರಿಂದೀಚೆಗೆ ಬಡತನ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದೂ ವರದಿಯಲ್ಲಿ ತಿಳಿಸಲಾಗಿದೆ.

2019-20 ರಲ್ಲಿ ಭಾರತದ ಶೇ. 12 ರಷ್ಟು ಗ್ರಾಮೀಣ ಭಾಗದ ಜನತೆ ಹಾಗೂ ನಗರ ಭಾಗಗಳ ಶೇ. 6 ರಷ್ಟು ಮಂದಿ ಬಡತನದಲ್ಲಿದ್ದರೆಂದು ವಿಶ್ವ ಬ್ಯಾಂಕ್‌ ವರದಿ ತಿಳಿಸಿದೆ.

ಕೋವಿಡ್‌ ಸಾಂಕ್ರಾಮಿಕದಿಂದ ಕಷ್ಟದಲ್ಲಿದ್ದ ಪ್ರತಿಯೊಬ್ಬರನ್ನೂ ತಲುಪಲು ಸರ್ಕಾರಕ್ಕೆ ಕಷ್ಟವಾಗಿದ್ದರಿಂದ ಬಡತನದ ಸಮಸ್ಯೆ ಇನ್ನಷ್ಟು ಹೆಚ್ಚಾಯಿತು, ಆದರೂ ಸರ್ಕಾರವು ಗ್ರಾಮೀಣ ಭಾಗಗಳ ಶೇ. 85 ರಷ್ಟು ಹಾಗೂ ನಗರ ಭಾಗಗಳ ಶೇ. 69 ರಷ್ಟು ಮಂದಿಗೆ ತನ್ನ ಸಾಂಕ್ರಾಮಿಕ ಸಂದರ್ಭದ ವಿವಿಧ ಯೋಜನೆಗಳಿಂದ ಸಹಾಯ ಮಾಡಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X