ರಸಗೊಬ್ಬರಗಳ ಜಾಗತಿಕ ಬೆಲೆ ಏರಿಕೆಯ ನಡುವೆಯೂ ಭಾರತವು ರೈತರನ್ನು ರಕ್ಷಿಸಿದೆ: ನಿರ್ಮಲಾ ಸೀತಾರಾಮನ್
-

NIRMALA SITARAMAN(PHOTO:PTI)
ವಾಶಿಂಗ್ಟನ್,ಅ.12: ರಸಗೊಬ್ಬರಗಳ ಜಾಗತಿಕ ದರದಲ್ಲಿ ಏರಿಕೆಯ ಹೊರತಾಗಿಯೂ ಭಾರತವು ತನ್ನ ರೈತರಿಗೆ ಹೆಚ್ಚುವರಿ ಸಬ್ಸಿಡಿಗಳನ್ನು ಒದಗಿಸುವ ಮೂಲಕ ಅವರಿಗೆ ಹೊರೆಯಾಗದಂತೆ ನೋಡಿಕೊಳ್ಳು ಮೂಲಕ ಅವರ ರಕ್ಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ತಿಳಿಸಿದ್ದಾರೆ.
ವಾಶಿಂಗ್ಟನ್ನಲ್ಲಿ ಮಂಗಳವಾರ ಬ್ರೂಕಿಂಗ್ ಇನ್ಸ್ಟಿಟ್ಯೂಟ್ ಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ರಸಗೊಬ್ಬರ ಹಾಗೂ ಇಂಧನ ಬೆಲೆ ಏರಿಕೆ ಮಾತ್ರವಲ್ಲದೆ ಅವುಗಳನ್ನು ರೈತರಿಗೆ ಸಮರ್ಪಕವಾಗಿ ದೊರೆಯುವಂತೆ ಮಾಡುವುದು ಕೂಡಾ ಭಾರತ ಸರಕಾರಕ್ಕೆ ಸವಾಲಾಗಿ ಪರಿಣಮಿಸಿತ್ತು ಎಂದವರು ಹೇಳಿದರು.
ರಸಗೊಬ್ಬರಗಳ ಲಭ್ಯತೆಯ ಕೊರತೆ ಹಾಗೂ ಅವುಗಳ ಬೆಲೆಯೇರಿಕೆಯ ದರಗಳು ಏರಿಕೆಯಾದ ಹಿನ್ನೆಲೆಯಲ್ಲಿ ಜಗತ್ತಿನ ಕೆಲವು ಭಾಗಗಳು ತೀವ್ರವಾದ ಆಹಾರದ ಅಭದ್ರತೆಯನ್ನು ಎದುರಿಸುತ್ತಿದೆಯೆಂದು ನಿರ್ಮಲಾ ಅವರು ಖ್ಯಾತ ಅರ್ಥಶಾಸ್ತ್ರಜ್ಞ ಈಶ್ವರ ಪ್ರಸಾದ್ ಅವರ ಜೊತೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಹೇಳಿದರು.
ಕಳೆದ ವರ್ಷ ರಸಗೊಬ್ಬರಗಳ ಆಮದಿಗೆ ನಾವು 10 ಪಟ್ಟು ಅಧಿಕ ದರವನ್ನು ನೀಡಬೇಕಾಗಿತ್ತು. ಭಾರತೀಯ ರೈತರು ದೊಡ್ಡ ಮಟ್ಟದ ಹಿಡುವಳಿದಾರರಲ್ಲದ ಕಾರಣ ಅವರಿಗೆ ಯೋಗ್ಯ ದರದಲ್ಲಿ ರಸಗೊಬ್ಬರಗಳ ಅವಶ್ಯಕತೆಯಿದೆ. ಹೀಗಾಗಿ ರೈತರಲ್ಲಿ ನಾವು ಆಮದು ಮಾಡಿದ ದರದಲ್ಲೇ ನಿಮಗೆ ರಸಗೊಬ್ಬರಗಳನ್ನು ಪೂರೈಕೆ ಮಾಡುತ್ತೇವೆ, ಅದರ ಹೊರೆಯನ್ನು ನೀವೇ ಹೊರಬೇಕು ಎಂದು ಹೇಳುವಂತಿಲ್ಲವೆಂದು ಸಚಿವೆ ಹೇಳಿದರು.
ಭಾರತೀಯ ರೈತರಿಗಾಗಿ ಸರಕಾರವು ರಸಗೊಬ್ಬರಗಳನ್ನು ಯೋಗ್ಯ ದರದಲ್ಲಿ ವಿತರಿಸಲು ತನ್ನ ಬೊಕ್ಕಸದಿಂದ ಹೆಚ್ಚುವರಿ ಹಣವನ್ನು ಖರ್ಚು ಮಾಡಬೇಕಾಯಿತು ಎಂದು ಆಕೆ ಹೇಳಿದರು.
ಅಂತಾರಾಷ್ಟ್ರೀಯ ದರಗಳಲ್ಲಿ ಏರಿಕೆಯಾಗಿರುವ ಹೊರತಾಗಿಯೂ ಭಾರತೀಯ ರೈತನು 2018,201,2020ರಲ್ಲಿ ಪಾವತಿಸಿಷ್ಟೇ ಹಣವನ್ನು ರಸಗೊಬ್ಬರಗಳ ಖರೀದಿಗೆ ಈಗಲೂ ಪಾವತಿಸುತ್ತಾನೆ.
2020-21ರ ಹಣಕಾಸು ವರ್ಷದಲ್ಲಿ 81,125 ಕೋಟಿ ರೂ. ನಷ್ಟಿದ್ದ ಬಜೆಟ್ ಸಬ್ಸಿಡಿಯನ್ನು ಹಾಲಿ ವಿತ್ತ ವರ್ಷದಲ್ಲಿ 2,15,222 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ಅಂತಾರಾಷ್ಟ್ರೀಯ ರೇಟಿಂಗ್ ಏಜೆನ್ಸಿ ಕೇರ್ ಏಡ್ಜ್, ರಸಗೊಬ್ಬರ ಇಲಾಖೆಯ ಹೇಳಿಕೆಗಳನ್ನು ಉಲ್ಲೇಖಿಸಿದೆ.
ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16ರವರೆಗೆ ಅಮೆರಿಕದ ಅಧಿಕೃತ ಭೇಟಿಯಲ್ಲಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹಾಗೂ ವಿಶ್ವಬ್ಯಾಂಕ್ನ ವಾರ್ಷಿಕ ಸಮಾವೇಶ, ಜಿ20 ವಿತ್ತ ಸಚಿವರು ಹಾಗೂ ಸೆಂಟ್ರಲ್ ಬ್ಯಾಂಕ್ ಗವರ್ನರ್ (ಎಫ್ಎಂಸಿಬಿಜಿ) ಸಮ್ಮೇಳನದಲ್ಲಿಯೂ ಅವರು ಪಾಲ್ಗೊಳ್ಳಲಿದ್ದಾರೆ.
ವಿತ್ತ ಸಚಿವೆ ಅವರು ತನ್ನ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಜಪಾನ್, ದಕ್ಷಿಣ ಕೊರಿಯ, ಸೌದಿ ಆರೇಬಿಯ, ಆಸ್ಟ್ರೇಲಿಯ, ಭೂತಾನ್, ನ್ಯೂಝಿಲ್ಯಾಂಡ್,ಈಜಿಪ್ಟ್, ಜರ್ಮನಿ, ಮಾರಿಷಸ್, ಯುಎಇ. ಇರಾನ್ ಹಾಗೂ ನೆದರ್ಲ್ಯಾಂಡ್ಸ್ ಸೇರಿದಂತೆ ಹಲವಾರು ದೇಶಗಳ ಪ್ರತಿನಿಧಿಗಳ ಜೊತೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.