Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ ರಾಜ್ಯದಲ್ಲಿ ‘ಅಕ್ರಮ ವಲಸಿಗರನ್ನು’...

ಪ್ರತಿ ರಾಜ್ಯದಲ್ಲಿ ‘ಅಕ್ರಮ ವಲಸಿಗರನ್ನು’ ಪತ್ತೆ ಹಚ್ಚಿ ಗಡಿಪಾರು ಮಾಡುವಂತೆ ಅಧಿಕಾರಿಗಳಿಗೆ ಅಮಿತ್ ಶಾ ನಿರ್ದೇಶನ

14 Nov 2022 5:35 PM IST
share
ಪ್ರತಿ ರಾಜ್ಯದಲ್ಲಿ ‘ಅಕ್ರಮ ವಲಸಿಗರನ್ನು’ ಪತ್ತೆ ಹಚ್ಚಿ ಗಡಿಪಾರು ಮಾಡುವಂತೆ ಅಧಿಕಾರಿಗಳಿಗೆ ಅಮಿತ್ ಶಾ ನಿರ್ದೇಶನ

ಹೊಸದಿಲ್ಲಿ,ನ.14: ಪ್ರತಿ ರಾಜ್ಯದಲ್ಲಿಯ ‘ಅಕ್ರಮ ವಲಸಿಗರನ್ನು’ (Illegal Migrants) ಪತ್ತೆ ಹಚ್ಚಿ ಬಂಧಿಸುವಂತೆ ಮತ್ತು ಅವರನ್ನು ಗಡಿಪಾರು ಮಾಡುವಂತೆ ಹಾಗೂ ನೆರೆಯ ದೇಶಗಳು ಅವರನ್ನು ಸ್ವೀಕರಿಸದಿದ್ದರೂ ನಿರ್ದೇಶಿತ ದಾಳಿಗಳನ್ನು ಮುಂದುವರಿಸುವಂತೆ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಉನ್ನತ ಗುಪ್ತಚರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು thewire.in ವರದಿ ಮಾಡಿದೆ.

ನ.9ರಂದು ಎಲ್ಲ ರಾಜ್ಯಗಳ ಅಧೀನ ಗುಪ್ತಚರ ಘಟಕ (ಎಸ್‌ಐಬಿ)ಗಳೊಂದಿಗೆ ನಡೆಸಿದ ಸಭೆಯಲ್ಲಿ ಶಾ, ಪ್ರತಿ ರಾಜ್ಯದಲ್ಲಿ ಸುಮಾರು 100 ‘ನುಸುಳುಕೋರ’ರನ್ನು ಗುರುತಿಸುವಂತೆ,ಅವರ ದಾಖಲೆಗಳನ್ನು ಪರಿಶೀಲಿಸುವಂತೆ ಮತ್ತು ಸಾಧ್ಯವಾದರೆ ಅವರನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಬಲ್ಲ ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.

ದೇಶದಲ್ಲಿ ‘ಅಕ್ರಮ ವಲಸಿಗರು’ ಅಥವಾ ‘ನುಸುಳುಕೋರರ ’ಪ್ರವೇಶದ ಕುರಿತು ಶಾ ಎಚ್ಚರಿಕೆ ನೀಡಿರುವುದು ಇದು ಮೊದಲ ಸಲವೇನಲ್ಲ.
ಎನ್‌ಡಿಎ ಸರಕಾರವು ‘ನುಸುಳುಕೋರರನ್ನು’ ಗುರುತಿಸುವ ಮತ್ತು ಅವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಶಾ 2018ರಲ್ಲಿ ಹೇಳಿದ್ದರು.

ಬಳಿಕ 2019ರಲ್ಲಿ ಅಸ್ಸಾಮಿನಲ್ಲಿ ಎನ್‌ಆರ್‌ಸಿಯಿಂದ (NRC) 19 ಲಕ್ಷಕ್ಕೂ ಅಧಿಕ ಜನರು ಹೊರಗುಳಿದ ಬಳಿಕವೂ ಈ ಪ್ರಕ್ರಿಯೆ ದೇಶಾದ್ಯಂತ ಮುಂದುವರಿಯಲಿದೆ ಎಂದು ಶಾ ತಿಳಿಸಿದ್ದರು.

ಎನ್‌ಆರ್‌ಸಿ ಕಾನೂನುಬದ್ಧ ಭಾರತೀಯ ಪ್ರಜೆಗಳ ದಾಖಲೆಯಾಗಿದ್ದು. ಇಂತಹ ದತ್ತಾಂಶ ಕೋಶವನ್ನು ಅಸ್ಸಾಮಿನಲ್ಲಿ ಮಾತ್ರ ನಿರ್ವಹಿಸಲಾಗಿದೆ.

ನ.9ರ ಸಭೆಯಲ್ಲಿ ಪಂಜಾಬಿನಲ್ಲಿ ಸಿಕ್ಖರು ಕ್ರೈಸ್ತಧರ್ಮಕ್ಕೆ ಮತಾಂತರಗೊಳ್ಳುತ್ತಿರುವ ಘಟನೆಗಳನ್ನು ಪ್ರಸ್ತಾಪಿಸಿದ್ದ ಶಾ, ಕ್ರೈಸ್ತ ಗುಂಪುಗಳಿಂದ ಧಾರ್ಮಿಕ ಮತಾಂತರಗಳ ಬಗ್ಗೆ ಗಮನ ಹರಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಯೋರ್ವರು ತಿಳಿಸಿದರು.

ಇದನ್ನೂ ಓದಿ: ವಿದ್ಯುನ್ಮಾನ ಸಾಧನಗಳ ಜಪ್ತಿ ಕುರಿತು ಅರ್ಜಿಗೆ ಉತ್ತರಿಸದ ಕೇಂದ್ರಕ್ಕೆ ದಂಡ ವಿಧಿಸಿದ ಸುಪ್ರೀಂಕೋರ್ಟ್

share
Next Story
X