ರಾಷ್ಟ್ರಪತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವನ ಪರವಾಗಿ ಕ್ಷಮೆ ಕೋರಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ತಮ್ಮ ಸಚಿವರ ಹೇಳಿಕೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿ, ಕ್ಷಮೆಯಾಚಿಸಿದ್ದಾರೆ. ವೈಯಕ್ತಿಕ ಪ್ರತಿಕ್ರಿಯೆಗಳನ್ನು ಮಾಡುವುದು ತನ್ನ ಪಕ್ಷದ ಸಂಸ್ಕೃತಿಯಲ್ಲ ಎಂದು ಹೇಳಿದ ಅವರು, ಶಾಸಕರ ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಮತ್ತು ತಮ್ಮ ಪಕ್ಷವೂ ಕ್ಷಮೆಯಾಚಿಸಿದೆ ಎಂದು ತಿಳಿಸಿದ್ದಾರೆ.
"ನಾವು ಅಧ್ಯಕ್ಷರನ್ನು ತುಂಬಾ ಗೌರವಿಸುತ್ತೇವೆ. ಅವರು ತುಂಬಾ ಉತ್ತಮ ಮಹಿಳೆ, (ಅಂತಹ) ಹೇಳಿಕೆಗಳಿಗಾಗಿ ನಾನು ಕ್ಷಮೆಯಾಚಿಸುತ್ತೇನೆ" ಎಂದು ಬ್ಯಾನರ್ಜಿ ಹೇಳಿದ್ದಾರೆ. "ಅಖಿಲ್ (ಗಿರಿ) ತಪ್ಪು ಮಾಡಿದ್ದಾರೆ; ನಾನು ಆ ಹೇಳಿಕೆಗಳನ್ನು ಖಂಡಿಸುತ್ತೇನೆ ಮತ್ತು ನಾನು ಕ್ಷಮೆಯಾಚಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
"ಸೌಂದರ್ಯವು ನೀವು ಹೇಗೆ ಕಾಣುತ್ತೀರಿ ಎಂಬುದರ ಮೇಲೆ ಅಲ್ಲ, ನೀವು ಒಳಗಿನಿಂದ ಹೇಗೆ ಇದ್ದೀರಿ ಎಂಬುದರ ಮೇಲೆ ಇದೆ" ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಪ.ಬಂ ವಿರೋಧ ಪಕ್ಷದ ನಾಯಕನನ್ನು ವಿರೋಧಿಸುವ ಭರದಲ್ಲಿ ರಾಜ್ಯದ ಸಚಿವ ಅಖಿಲ್ ಗಿರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬಗ್ಗೆ ಕೇವಲವಾಗಿ ಮಾತನಾಡಿದ್ದರು.