ಜಮ್ಮು-ಕಾಶ್ಮೀರ: ಗಡಿಯಲ್ಲಿ ನುಸುಳಲು ಯತ್ನ; ಓರ್ವ ಶಂಕಿತ ಉಗ್ರನ ಹತ್ಯೆ
ಶ್ರೀನಗರ, ನ. 19: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗುರುವಾರ ಹಾಗೂ ಶುಕ್ರವಾರದ ನಡುವಿನ ರಾತ್ರಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಸುಳಲು ಯತ್ನಿಸಿದ ಶಂಕಿತ ಉಗ್ರನೋರ್ವನನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಉಗ್ರನ ಮೃತದೇಹ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳೊಂದಿಗೆ ಶನಿವಾರ ಪತ್ತೆಯಾಗಿದೆ.
ಕೆಲವು ವಾರಗಳ ಹಿಂದೆ ಭಾರತೀಯ ಸೇನೆ ಜಮ್ಮು ಹಾಗೂ ಕಾಶ್ಮೀರದ ಪೂಂಛ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಮೂವರು ಉಗ್ರರನ್ನು ಹತ್ಯೆಗೈದಿತ್ತು.
Next Story