ಶ್ರದ್ಧಾ ವಾಲ್ಕರ್ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾ ಮೇಲೆ ಪೊಲೀಸರ ಸಮ್ಮುಖದಲ್ಲೇ ಗುಂಪು ದಾಳಿ
ಹೊಸದಿಲ್ಲಿ: ಶ್ರದ್ಧಾ ವಾಲ್ಕರ್ ಹತ್ಯೆಯ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಮೇಲೆ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಗಳ ಗುಂಪು ದಾಳಿ ಮಾಡಿದೆ ಎಂದು ndtv.com ವರದಿ ಮಾಡಿದೆ.
ಆರೋಪಿ ಆಪ್ತಾಬ್ ಇದ್ದ ಪೊಲೀಸ್ ವಾಹನದ ಮೇಲೆ ಇಬ್ಬರು ಆಯುಧಗಳನ್ನು ಹಿಡಿದು ದಾಳಿ ನಡೆಸಿದ ಘಟನೆ ರೋಹಿಣಿ ವಿಧಿವಿಜ್ಞಾನ ಪ್ರಯೋಗಾಲಯದ ಹೊರಗೆ ನಡೆದಿದೆಯೆಂದು ವರದಿ ಹೇಳಿದೆ.
ಪಶ್ಚಿಮ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಪೊಲೀಸ್ ವ್ಯಾನ್ ನಲ್ಲಿ ಆತನನ್ನು ಮರಳಿ ಜೈಲಿಗೆ ಕರೆದೊಯ್ಯುವಾಗ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಎಫ್ಎಸ್ಎಲ್ ಕಟ್ಟಡದ ಹೊರಭಾಗದಲ್ಲಿ ಈ ದಾಳಿ ನಡೆದಿದೆ. ಕತ್ತಿ ಹಿಡಿದಿದ್ದ ಹದಿನೈದು ಮಂದಿ ವ್ಯಾನ್ ಮೇಲೆ ಹತ್ತಿ ದಾಳಿ ನಡೆಸಿದ್ದಾರೆ. ಉದ್ರಿಕ್ತ ಗುಂಪು ಬಲಪಂಥೀಯ ಸಂಘಟನೆಯ ಸದಸ್ಯರಾಗಿರಬಹುದೆಂದು ಪೊಲೀಸರು ಹೇಳಿದ್ದಾರೆ.
ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
#WATCH | Police van carrying Shradhha murder accused Aftab Poonawalla attacked by at least 2 men carrying swords who claim to be from Hindu Sena, outside FSL office in Delhi pic.twitter.com/Bpx4WCvqXs
— ANI (@ANI) November 28, 2022
आफताब की वैन पर तलवार से हमला, FSL दफ्तर के बाहर लोगों ने बनाया आफताब को अपना निशाना@DelhiPolice#AftabAminPoonawala #AftabPoonawalla pic.twitter.com/PI476PhfW6
— Tarun Sharma (@tarun10sharma) November 28, 2022