ತೇಜ್ಪಾಲ್ ರ ರಹಸ್ಯ ವಿಚಾರಣೆಯ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ, ನ. 29: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್(Bombay High Court) ನಲ್ಲಿ ನಡೆಯುತ್ತಿರುವ ವಿಚಾರನೆಯನ್ನು ರಹಸ್ಯವಾಗಿ ನಡೆಸಬೇಕು ಎಂದು ಕೋರಿ ಪತ್ರಕರ್ತ ತರುಣ್ ತೇಜ್ಪಾಲ್(Tarun Tejpal) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್(Supreme Court) ಸೋಮವಾರ ತಳ್ಳಿಹಾಕಿದೆ. ಅತ್ಯಾಚಾರ ಪ್ರಕರಣದಲ್ಲಿ ಅವರ ಖುಲಾಸೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಬಾಂಬೆ ಹೈಕೋರ್ಟ್ ನಲ್ಲಿ ನಡೆಯುತ್ತಿದೆ.
ತೇಜ್ಪಾಲ್ರ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ಬಳಿಕ, ಅವರು ಸುಪ್ರೀಂ ಕೋರ್ಟ್ ಗೆ ಹೋಗಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ (D.Y. Chandrachud)ಮತ್ತು ನ್ಯಾ. ಪಿ.ಎಸ್. ನರಸಿಂಹ(P.S. Narasimha) ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠವೊಮದು ತೇಜ್ಪಾಲ್ರ ಅರ್ಜಿ(Tejpal's application)ಯನ್ನು ತಿರಸ್ಕರಿಸಿತು.
2013ರ ನವೆಂಬರ್ ನಲ್ಲಿ ಗೋವಾದಲ್ಲಿ ತನ್ನ ಸಹೋದ್ಯೋಗಿಯ ಮೇಲೆ ತೇಜ್ಪಾಲ್ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರಹಸ್ಯ ವಿಚಾರಣೆಯ ಬಳಿಕ, ಹೆಚ್ಚುವರಿ ಸೆಶನ್ಸ ನ್ಯಾಯಧೀಶೆ ಕ್ಷಮಾ ಜೋಶಿ, 2021 ಮೇ 21ರಂದು ಆರೋಪಿಯನ್ನು ಖುಲಾಸೆಗೊಳಿಸಿದ್ದರು. ಇದನ್ನು ಗೋವಾ ಸರಕಾರವು ಮುಂಬೈ ಹೈಕೋರ್ಟ್ ನಲ್ಲಿ ಪ್ರಶ್ನಿಸಿದೆ.