Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಉದ್ಯೋಗಿಗಳ ಕುಟುಂಬದವರು ಇನ್ನು...

ಭಾರತೀಯ ಉದ್ಯೋಗಿಗಳ ಕುಟುಂಬದವರು ಇನ್ನು ಕೆನಡಾದಲ್ಲಿ ಉದ್ಯೋಗಕ್ಕೆ ಅರ್ಹರು: ವರದಿ

4 Dec 2022 8:31 AM IST
share
ಭಾರತೀಯ ಉದ್ಯೋಗಿಗಳ ಕುಟುಂಬದವರು ಇನ್ನು ಕೆನಡಾದಲ್ಲಿ ಉದ್ಯೋಗಕ್ಕೆ ಅರ್ಹರು: ವರದಿ

ಒಟ್ಟಾವ: ತಾತ್ಕಾಲಿಕ ಅಂತರರಾಷ್ಟ್ರೀಯ ಉದ್ಯೋಗಿಗಳ ಕುಟುಂಬ ಸದಸ್ಯರಿಗೆ ಕೂಡಾ ಉದ್ಯೋಗ ಪರವಾನಗಿ ನೀಡುವ ಮಹತ್ವದ ನಿರ್ಧಾರಕ್ಕೆ ಕೆನಡಾ ಮುಂದಾಗಿದ್ದು, ಇದು ಅಸಂಖ್ಯಾತ ಭಾರತೀಯ ವೃತ್ತಿಪರರ ಕುಟುಂಬಗಳಿಗೆ ನೆರವಾಗಲಿದೆ ಎಂದು ndtv.com ವರದಿ ಮಾಡಿದೆ.

ಮುಂದಿನ ವರ್ಷದ ಆರಂಭದಿಂದ ಈ ನೀತಿ ಜಾರಿಗೆ ಬರುವ ನಿರೀಕ್ಷೆ ಇದೆ. ಕೆನಡಾದ ಇಮಿಗ್ರೇಶನ್, ನಿರಾಶ್ರಿತರು ಮತ್ತು ಪೌರತ್ವ ಖಾತೆ ಸಚಿವ ಸಿಯನ್ ಫ್ರೇಸರ್ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಇಲಾಖೆ ತಾತ್ಕಾಲಿಕ ವಿದೇಶಿ ಉದ್ಯೋಗಿಗಳ ಕುಟುಂಬ ಸದಸ್ಯರಿಗೆ ಕೂಡಾ ಉದ್ಯೋಗ ಪರವಾನಗಿ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ಪತಿ/ಪತ್ನಿ ಅತ್ಯಧಿಕ ಕೌಶಲದ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ ಆತ/ಆಕೆಯ ಪತ್ನಿ/ಪತಿಗೆ ಮಾತ್ರ ಉದ್ಯೋಗ ಪರವಾನಗಿ ನೀಡಲಾಗುತ್ತಿತ್ತು. ಈ ತಾತ್ಕಾಲಿಕ ಕ್ರಮದಿಂದ ಭಾವನಾತ್ಮಕ ಕ್ಷೇಮ, ದೈಹಿಕ ಆರೋಗ್ಯ ಮತ್ತು ಹಣಕಾಸು ಸುಸ್ಥಿರತೆಯ ಗುರಿ ಹೊಂದಲಾಗಿದೆ. ಇದರಿಂದಾಗಿ ಉದ್ಯೋಗಿಗಳು ತಮ್ಮ ಒಟ್ಟಾರೆ ಕೆಲಸದ ವಾತಾವರಣದಲ್ಲಿ ಮತ್ತು ಸಮುದಾಯದಲ್ಲಿ ಹೆಚ್ಚು ನಿಷ್ಠೆ ತೋರಲು ಸಾಧ್ಯವಾಗಲಿದೆ ಎಂದು ಇಲಾಖೆಯ ಪ್ರಕಟಣೆ ಹೇಳಿದೆ.

2023ರ ಜನವರಿಂದ ಜಾರಿಯಾಗುವ ಈ ನೀತಿ ಅನ್ವಯ ಎರಡು ವರ್ಷಗಳ ತಾತ್ಕಾಲಿಕ ಅವಧಿಗೆ ಕೆನಡಾ ಈ ಸೌಲಭ್ಯವನ್ನು ನೀಡಲಿದೆ. ಇದರಲ್ಲಿ ಆರೋಗ್ಯ ಸೇವೆ, ವ್ಯಾಪಾರ ಮತ್ತು ಆತಿಥ್ಯ ಉದ್ಯಮದ ಉದ್ಯೋಗಿಗಳು ಸೇರುತ್ತಾರೆ. ಇದರಿಂದ ಕೆನಡಾದಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಕುಟುಂಬಗಳಿಗೆ ಸೇರಿದ ಎರಡು ಲಕ್ಷಕ್ಕೂ ಹೆಚ್ಚು ಮಂದಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ndtv.com ವರದಿ ಮಾಡಿದೆ.

share
Next Story
X