ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸುತ್ತಿದ್ದಂತೆ ಹೃದಯಾಘಾತವಾಗಿ ವ್ಯಕ್ತಿ ಸಾವು: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕಟ್ನಿ: ಮಧ್ಯಪ್ರದೇಶದ ಕಟ್ನಿಯಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದಂತೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೃತಪಟ್ಟವರನ್ನು ರಾಜೇಶ್ ಮೆಹಾನಿ ಎಂದು ಗುರುತಿಸಲಾಗಿದೆ ಎಂದು ndtv.com ವರದಿ ಮಾಡಿದೆ.
ಗುರುವಾರ ಈ ಘಟನೆ ನಡೆದಿದ್ದು, ಅಧಿಕಾರಿಗಳ ಪ್ರಕಾರ, ಮೃತ ವ್ಯಕ್ತಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದು, ಪ್ರತಿ ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು.
ವಿಗ್ರಹದ ಬಳಿ ಪ್ರಾರ್ಥನೆಗೆಂದ ಕೂತ ವ್ಯಕ್ತಿ ಹದಿನೈದು ನಿಮಿಷವಾದರೂ ಅಲ್ಲಿಂದ ಏಳದ್ದರಿಂದ ಅನುಮಾನ ಬಂದ ದೇವಸ್ಥಾನ ಅರ್ಚಕರು ಪರಿಶೀಲಿಸಿದ್ದಾರೆ. ಈ ವೇಳೆ ರಾಜೇಶ್ ಪ್ರಜ್ಞೆ ತಪ್ಪಿದ್ದು ತಿಳಿದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆ ತಲುಪುವಾಗಲೇ ರಾಜೇಶ್ ಮೃತಪಟ್ಟಿರುವುದಾಗಿ ವರದಿಯಾಗಿದೆ.
रहस्यमय मौत... कटनी में साईं मंदिर में दर्शन करते समय शख्स की हो गई मौत. गिरते ही हो गई उसकी वहीं पर मौत.#Trending #TrendingNow pic.twitter.com/rOAYx852eU
— Narendra Singh (@NarendraNeer007) December 4, 2022