Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮರೆಯಾಗಿರುವ 24 ಸ್ಮಾರಕಗಳ ಪತ್ತೆಗೆ...

ಮರೆಯಾಗಿರುವ 24 ಸ್ಮಾರಕಗಳ ಪತ್ತೆಗೆ ಸಂಸ್ಕೃತಿ ಸ್ಥಾಯಿ ಸಮಿತಿ ಶಿಫಾರಸು

18 Dec 2022 10:23 PM IST
share

ಹೊಸದಿಲ್ಲಿ: ಸಂರಕ್ಷಿತ ಸ್ಥಳಗಳೆಂದು ಪರಿಗಣಿಸಲ್ಪಟ್ಟಿದ್ದ 24 ಸ್ಮಾರಕಗಳ ಕುರುಹುಗಳು ಮಾಯವಾಗಿರುವುದಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ಒಪ್ಪಿಕೊಂಡು ಐದು ವರ್ಷಗಳಾದರೂ, ಅದನ್ನು ಪತ್ತೆಹಚ್ಚುವ ಪ್ರಯತ್ನಕ್ಕೆ ಈಗ ಮರುಜೀವ ಬಂದಿದೆ. 

ಮರೆಯಾಗಿರುವ ಈ ಐತಿಹಾಸಿಕ ಸ್ಮಾರಕಗಳನ್ನು ಹಳೆಯ ಕಂದಾಯ ದಾಖಲೆಗಳು, ಕಂದಾಯ ನಕ್ಷೆಗಳು ಹಾಗೂ ಪ್ರಕಟಿತ ವರದಿಗಳ ನೆರವಿನೊಂದಿಗೆ ಕಂಡುಹಿಡಿಯಬಹುದೆಂದು ಸಾರಿಗೆ, ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಕುರಿತ ಸ್ಥಾಯಿ ಸಮಿತಿಯು ಸಂಸ್ಕೃತಿ ಸಚಿವಾಲಯಕ್ಕೆ ತಿಳಿಸಿದೆ.

ಕೇಂದ್ರ ಸರಕಾರದ ಸಂರಕ್ಷಣೆಯಲ್ಲಿರುವ ಎಲ್ಲಾ 3693 ಸ್ಮಾರಕಗಳು ಭೌತಿಕವಾಗಿ ಅಸ್ತಿತ್ವದಲ್ಲಿವೆಯೇ ಎಂಬ ಬಗ್ಗೆ ತಪಾಸಣೆ ನಡೆಸಲು ಸರ್ವೇಕ್ಷಣೆಯನ್ನು ಕೈಗೆತ್ತಿಕೊಳ್ಳುವಂತೆಯೂ ಸಮಿತಿಯು ಶಿಫಾರಸು ಮಾಡಿದೆ.

ಕಳೆದ ವಾರ ರಾಜ್ಯಸಭಾದಲ್ಲಿ ಮಂಡಿಸಲಾದ ಕಣ್ಮರೆಯಾಗಿರುವ ಸ್ಮಾರಕಗಳು ಹಾಗೂ ಭಾರತದಲ್ಲಿ ಸ್ಮಾರಕಗಳ ರಕ್ಷಣೆ ಕುರಿತ 324 ನೇ ವರದಿಯು ಅಧ್ಯಯನ ಮಾಡಲ್ಪಟ್ಟ ಸ್ಮಾರಕಗಳ ಮಾದರಿಗಳ ಪೈಕಿ ಕನಿಷ್ಠ 24 ಸ್ಮಾರಕಗಳ ಕುರುಹುಗಳು ಈಗ ಗೋಚರಿಸುತ್ತಿಲ್ಲವೆಂದು ಹೇಳಿದೆ. ಅಲ್ಲದೆ ಉಳಿದ ಸ್ಮಾರಕಗಳನ್ನು ಕೂಡಾ ಮೂಲ ಅಧ್ಯಯನ ನಡೆದ ಒಂದು ದಶಕದ ಆನಂತರ ಹೊಸದಾಗಿ ಅವುಗಳ ಸರ್ವೇಕ್ಷಣೆಯನ್ನು ನಡೆಸಲಾಗಿಲ್ಲವೆಂದು ಅದು ತಿಳಿಸಿದೆ.

2013 ರಲ್ಲಿ ಕಂಪ್ಟ್ರೋಲರ್ ಹಾಗೂ ಆಡಿಟರ್ ಜನರಲ್ ಆಫ್ ಇಂಡಿಯಾ (ಭಾರತೀಯ ಮಹಾಲೇಖಪಾಲ) ಪ್ರಕಟಿಸಿದ ಸ್ಮಾರಕಗಳು ಹಾಗೂ ಅಮೂಲ್ಯವಸ್ತುಗಳ ಸಂರಕ್ಷಣೆ ಕುರಿತ ವರದಿಯಲ್ಲಿ 92 ಸ್ಮಾರಕಗಳು ನಾಪತ್ತೆಯಾಗಿರುವುದಾಗಿ ಉಲ್ಲೇಖಿಸಲಾಗಿತ್ತು. ತರುವಾಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಯು ನಾಪತ್ತೆಯಾಗಿರುವ ಸ್ಮಾರಕಗಳನ್ನು ಹುಡುಕುವ ಬೃಹತ್ ಕಾರ್ಯಾಚರಣೆಯನ್ನು ನಡೆಸಿತು. ಈ ಸಮೀಕ್ಷೆಯಲ್ಲಿ 42 ತಾಣಗಳು ಭೌತಿಕವಾಗಿ ಅಸ್ತಿತ್ವದಲ್ಲಿರುವುದನ್ನು,  ಹಾಗೂ 14 ತಾಣಗಳು ತ್ವರಿತಗತಿ ನಗರೀಕರಣದಿಂದಾಗಿ ಬಾಧಿತವಾಗಿರುವುದನ್ನು ಪತ್ತೆಹಚ್ಚಲಾಗಿತ್ತು. ಸುಮಾರು 12 ತಾಣಗಳು ಅಣೆಕಟ್ಟು ಅಥವಾ ಜಲಾಶಯಗಳಲ್ಲಿ ಮುಳುಗಡೆಯಾಗಿರುವುದಾಗಿ ವರದಿ ತಿಳಿಸಿತ್ತು. ಆದರೆ ಉಳಿದ 24 ಪಾರಂಪರಿಕ ತಾಣಗಳ ಕುರುಹುಗಳೇ ಪತ್ತೆಯಾಗಿಲ್ಲವೆಂದು ಅದು ತಿಳಿಸಿದೆ.

ತ್ವರಿತಗತಿಯ ನಗರೀಕರಣ, ಸಮರ್ಪಕ ವಿವರಗಳ ಅಲಭ್ಯತೆ ಮತ್ತಿತರ ಅಂಶಗಳು ನಾಪತ್ತೆಯಾಗಿರುವ ತಾಣಗಳಿರುವ ಸ್ಥಳಗಳನ್ನು ಗುರುತಿಸಲು ಅಡ್ಡಿಯಾಗಿವೆ ಎಂದು ವರದಿ ತಿಳಿಸಿದೆ. ಆದಾಗ್ಯೂ ವೈಜ್ಞಾನಿಕ ಉಪಕರಣಗಳು ಹಾಗೂ ಪುರಾತತ್ವ ಸರ್ವೇಕ್ಷಣೆಗಳ ಸಹಾಯದಿಂದ ಈ ಸ್ಮಾರಕಗಳನ್ನು ಪತ್ತೆಹಚ್ಚುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು ಎಂದು ಅದು ಏಳಿದೆ.

ಹೀಗೆ ಕಣ್ಮರೆಯಾಗಿರುವ ಈ 24 ಸ್ಮಾರಕಗಳ ಪೈಕಿ ಕೆಲವಾದರೂ ನಿಕಟಭವಿಷ್ಯದಲ್ಲಿ ಪತ್ತೆಯಾಗುವ ಸಾಧ್ಯತೆಯೂ ಇರುವುದರಿಂದ ಅವುಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಪಟ್ಟಿಯಿಂದ ಕೈಬಿಡುವ ಸಾಧ್ಯತೆಗಳಿಲ್ಲವೆಂದು ಸಮಿತಿ ವರದಿ ತಿಳಿಸಿದೆ.

share
Next Story
X