Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಜೋಡೊ ಯಾತ್ರೆ :...

ಭಾರತ ಜೋಡೊ ಯಾತ್ರೆ : ನಿರುದ್ಯೋಗ,ಹಣದುಬ್ಬರ,ದ್ವೇಷದ ವಿರುದ್ಧ ಧ್ವನಿಯೆತ್ತಿದ ಅಂಧ ವಿದ್ಯಾರ್ಥಿಗಳು

24 Dec 2022 11:08 PM IST
share
ಭಾರತ ಜೋಡೊ ಯಾತ್ರೆ : ನಿರುದ್ಯೋಗ,ಹಣದುಬ್ಬರ,ದ್ವೇಷದ ವಿರುದ್ಧ ಧ್ವನಿಯೆತ್ತಿದ ಅಂಧ ವಿದ್ಯಾರ್ಥಿಗಳು

ಹೊಸದಿಲ್ಲಿ,ಡಿ.24: ನಿರುದ್ಯೋಗ,ಹಣದುಬ್ಬರ,ದ್ವೇಷದ ವಿರುದ್ಧ ಧ್ವನಿಯೆತ್ತಲು ದಕ್ಷಿಣ ದಿಲ್ಲಿಯ ಲಾಜಪತ್ ನಗರದ ಅಂಧ ವಿದ್ಯಾರ್ಥಿಗಳ ಗುಂಪೊಂದು ಶನಿವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ನೇತೃತ್ವದ ಭಾರತ ಜೋಡೊ ಯಾತ್ರೆಯ ಮಾರ್ಗದಲ್ಲಿ ಶಿಬಿರವನ್ನು ಸ್ಥಾಪಿಸಿತ್ತು.

ಬ್ಯಾನರ್ಗಳನ್ನು ಹಿಡಿದುಕೊಂಡು ಅಪೋಲೊ ಆಸ್ಪತ್ರೆಯ ಮಾರ್ಗದಲ್ಲಿ ಸೇರಿದ್ದ ಸುಮಾರು 15-20 ಅಂಧ ವಿದ್ಯಾರ್ಥಿಗಳು ‘ನಫರತ್ ಛೋಡೊ,ಭಾರತ ಜೋಡೊ (ದ್ವೇಷವನ್ನು ಬಿಡಿ,ಭಾರತವನ್ನು ಒಗ್ಗೂಡಿಸಿ)’ ಎಂಬ ಘೋಷಣೆಗಳನ್ನು ಕೂಗಿದರು.

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ಪ್ರತಿಭಟಿಸಲು ತಾವು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗಿ ಸುದ್ದಿಸಂಸ್ಥೆಗೆ ತಿಳಿಸಿದ ಅಂಧ ವಿದ್ಯಾರ್ಥಿ ಸಾರಾಂಶ,ಹಲವಾರು ಅಂಧ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅತ್ಯುತ್ತಮ ಸಾಧನೆಗಳನ್ನು ಮಾಡಿದ್ದಾರೆ,ಆದರೆ ವರ್ಷಗಳಿಂದಲೂ ನಿರುದ್ಯೋಗಿಗಳಾಗಿ ಉಳಿದುಕೊಂಡಿದ್ದಾರೆ ಎಂದು ಹೇಳಿದರು.

‘ದೇಶದಲ್ಲಿ ಉದ್ಯೋಗಗಳ ಕೊರತೆಯಿಂದಾಗಿ ಸುಶಿಕ್ಷಿತ ಜನರು ನಿರುದ್ಯೋಗಿಗಳಾಗಿ ಅಲೆದಾಡುತ್ತಿದ್ದಾರೆ. ನಮಗಾಗಿ ಸಾಕಷ್ಟು ಉದ್ಯೋಗಗಳು ಇಲ್ಲದಿರುವಾಗ ಶಿಕ್ಷಣ ಪಡೆಯುವುದರಲ್ಲಿ ಯಾವ ಅರ್ಥವಿದೆ? ಹಲವಾರು ಅಂಧ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ತಮ ಸಾಧನೆಗಳನ್ನು ಮಾಡುತ್ತಿದ್ದಾರೆ,ಆದರೆ ಪ್ರಯೋಜನವೇನು? ಈ ಎಲ್ಲ ಪದವಿಗಳಿದ್ದರೂ ನಾವೇನು ಮಾಡಲಿದ್ದೇವೆ ’ಎಂದು 14 ಹರೆಯದ ಸಾರಾಂಶ ಪ್ರಶ್ನಿಸಿದರು.

ಸಮುದಾಯಗಳ ನಡುವೆ ದ್ವೇಷ ನಿರ್ಮೂಲನದ ಉದ್ದೇಶದೊಂದಿಗೆ ಮತ್ತು ಬೆಲೆಏರಿಕೆಯ ವಿರುದ್ಧ ಧ್ವನಿಯೆತ್ತಲು ತಾನು ಯಾತ್ರೆಯಲ್ಲಿ ಭಾಗವಹಿಸಿದ್ದಾಗಿ ತಿಳಿಸಿದ ಅಂಧ ವಿದ್ಯಾರ್ಥಿ ಗುಲ್ಶನ್ ಕುಮಾರ (12),‘ನಮ್ಮದು ಕೆಳ ಮಧ್ಯಮ ವರ್ಗದ ಕುಟುಂಬವಾಗಿದ್ದು,ನನ್ನ ತಂದೆ ಕೃಷಿಕರಾಗಿದ್ದಾರೆ. ಅವರು ಏಳು ಜನರ ಕುಟುಂಬದ ತುತ್ತಿನ ಚೀಲಗಳನ್ನು ತುಂಬಿಸಬೇಕಿದೆ. ಹಣದುಬ್ಬರವು ನನ್ನ ಕುಟುಂಬದ ಮೇಲೆ ದುಷ್ಪರಿಣಾಮವನ್ನು ಬೀರಿದೆ.  ನನ್ನ ತಂದೆಯ ಹೊರತು ಕುಟುಂಬದ ಯಾರಿಗೂ ಆದಾಯವಿಲ್ಲ. ನನಗೆ ನಾಲ್ವರು ಸೋದರಿಯರಿದ್ದು,ಅವರ ಪೈಕಿ ಓರ್ವಳು ಅಂಧೆಯಾಗಿದ್ದಾಳೆ,ಇಬ್ಬರು ಪದವಿಗಳನ್ನು ಹೊಂದಿದ್ದರೂ ಉದ್ಯೋಗಗಳ ಕೊರತೆಯಿಂದಾಗಿ ನಿರುದ್ಯೋಗಿಗಳಾಗಿದ್ದಾರೆ ’ಎಂದು ಅಳಲು ತೋಡಿಕೊಂಡರು.

share
Next Story
X