Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮ್ಮ ಪ್ರಥಮ ಭಾರತ ಭೇಟಿಯಲ್ಲಿ ಫುಟ್‌ಬಾಲ್...

ತಮ್ಮ ಪ್ರಥಮ ಭಾರತ ಭೇಟಿಯಲ್ಲಿ ಫುಟ್‌ಬಾಲ್ ಅಭಿಮಾನಿಗಳನ್ನು ರೋಮಾಂಚಿತಗೊಳಿಸಿದ್ದ ಪೀಲೆ

30 Dec 2022 12:31 PM IST
share
ತಮ್ಮ ಪ್ರಥಮ ಭಾರತ ಭೇಟಿಯಲ್ಲಿ ಫುಟ್‌ಬಾಲ್ ಅಭಿಮಾನಿಗಳನ್ನು ರೋಮಾಂಚಿತಗೊಳಿಸಿದ್ದ ಪೀಲೆ

ಸಾವೊ ಪೌಲೊ: ಕ್ಯಾನ್ಸರ್‌ ಪೀಡಿತರಾಗಿದ್ದ ಫುಟ್‌ಬಾಲ್ ದಂತಕಥೆ ಮತ್ತು ಬ್ರೆಝಿಲ್‌ನ ಫುಟ್‌ಬಾಲ್ ತಾರೆ ಪೀಲೆ (82) ಗುರುವಾರ ಸಾವೊ ಪೌಲ್‌ನ ಆಲ್ಬರ್ಟ್ ಐನ್‌ಸ್ಟೈನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಕೋಲ್ಕತ್ತಾದ ಫುಟ್‌ಬಾಲ್ ಅಭಿಮಾನಿಗಳು ಶೋಕತಪ್ತರಾಗಿದ್ದಾರೆ.

ಪೀಲೆ ಸೆ. 25, 1977ರಲ್ಲಿ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ನೇಹಪೂರ್ವಕ ಪಂದ್ಯದಲ್ಲಿ ಕೋಲ್ಕತ್ತಾದ ಪ್ರಖ್ಯಾತ ಫುಟ್‌ಬಾಲ್ ತಂಡವಾದ ಮೋಹನ್ ಬಾಗನ್ ವಿರುದ್ಧ ಆಟವಾಡಿ, ತಮ್ಮ ಕಾಲ್ಚಳಕ ಪ್ರದರ್ಶಿಸಿದ್ದರು. ಪೀಲೆಯ ಕಾಲ್ಚಳಕವನ್ನು ಕಣ್ತುಂಬಿಕೊಳ್ಳುವ ಸುಮಾರು 80,000 ಫುಟ್‌ಬಾಲ್ ಪ್ರೇಮಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಫುಟ್‌ಬಾಲ್ ಅಭಿಮಾನಿಗಳು ಅಂದು ಪೀಲೆ ಆಟಕ್ಕೆ ಸಾಕ್ಷಿಯಾಗಿದ್ದರು.

ಸೆಪ್ಟೆಂಬರ್ 24, 1977ರಂದು ಆಯೋಜನೆಗೊಂಡಿದ್ದ ಸ್ನೇಹಪೂರ್ವಕ ಪಂದ್ಯದಲ್ಲಿ ಪಾಲ್ಗೊಳ್ಳಲು ಪೀಲೆ ಕೋಲ್ಕತ್ತಾಗೆ ಆಗಮಿಸಿದಾಗ ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ಫುಟ್‌ಬಾಲ್ ಅಭಿಮಾನಿಗಳು ಜಮಾಯಿಸಿ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದರು. ಅಂದು ಕೋಲ್ಕತ್ತಾದಲ್ಲಿ ದುರ್ಗಾಪೂಜೆಯ ದಿನವಾಗಿರದಿದ್ದರೂ ನಗರದ ತುಂಬಾ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಉತ್ತರ ಅಮೆರಿಕಾ ಸಾಕರ್ ಲೀಗ್‌ನ ಭಾಗವಾಗಿದ್ದ, ತಾರಾ ಫುಟ್‌ಬಾಲ್ ಪಟುಗಳನ್ನು ಹೊಂದಿದ್ದ ನ್ಯೂಯಾರ್ಕ್ ಕಾಸ್ಮೋಸ್ ತಂಡದ ಪರವಾಗಿ ಆಡಲು ಅವರು ಕೋಲ್ಕತ್ತಾಗೆ ಪ್ರಥಮ ಬಾರಿಗೆ ಆಗಮಿಸಿದ್ದರು.

"Barefoots to boots" ಎಂಬ ಕೃತಿ ರಚಿಸಿರುವ ಇತಿಹಾಸಕಾರ ನೋವಿ ಕಪಾಡಿಯಾ, ಅಂದು ಕೋಲ್ಕತ್ತಾದಲ್ಲಿ ಮನೆ ಮಾಡಿದ್ದ ಸಂಭ್ರಮವನ್ನು ವಿವರವಾಗಿ ನಮೂದಿಸಿದ್ದಾರೆ. ಅವರ ಪ್ರಕಾರ, ಐತಿಹಾಸಿಕ ಪಂದ್ಯ ನಡೆಯುತ್ತಿದ್ದ ಈಡನ್ ಗಾರ್ಡನ್ ಕ್ರೀಡಾಂಗಣಕ್ಕೆ ಪೀಲೆ ಆಗಮಿಸುವ ಮುನ್ನವೆ, ಸಾವಿರಾರು ಫುಟ್‌ಬಾಲ್ ಅಭಿಮಾನಿಗಳು ಅವರು ಉಳಿದುಕೊಂಡಿದ್ದ ಹೋಟೆಲ್ ಎದುರು ನೆರೆದಿದ್ದರು ಎನ್ನುತ್ತಾರೆ.

ಪೀಲೆ ಬಡತನದಿಂದ ಸಾರ್ವಕಾಲಿಕ ಶ್ರೇಷ್ಠ ಫುಟ್‌ಬಾಲ್ ಆಟಗಾರನಾಗಿ ಬೆಳೆದು ನಿಂತವರು. ಅವರು ಎಲ್ಲಿಗೇ ಪ್ರಯಾಣಿಸಿದರೂ ಜನಸಮೂಹದ ಪ್ರೀತಿಗೆ ಪಾತ್ರರಾಗುತ್ತಿದ್ದರು. ಕೋಲ್ಕತ್ತಾ ಕೂಡಾ ಇದಕ್ಕೆ ಹೊರತಾಗಿರಲಿಲ್ಲ. ವಿನಯ ವ್ಯಕ್ತಿತ್ವವನ್ನು ರೂಢಿಸಿಕೊಂಡಿದ್ದ ಪೀಲೆ ಎಲ್ಲೇ ಹೋದರೂ ತಮ್ಮ ಮುಖದಲ್ಲಿ ಮಂದಹಾಸ ತುಂಬಿಕೊಂಡಿರುತ್ತಿದ್ದರು. 

share
Next Story
X