Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಅಮಾನ್ಯೀಕರಣಗೊಂಡ ಆರು ವರ್ಷಗಳ ನಂತರ...

ನೋಟು ಅಮಾನ್ಯೀಕರಣಗೊಂಡ ಆರು ವರ್ಷಗಳ ನಂತರ ನಗದು ಚಲಾವಣೆ ದುಪ್ಪಟ್ಟು

3 Jan 2023 2:44 PM IST
share
ನೋಟು ಅಮಾನ್ಯೀಕರಣಗೊಂಡ ಆರು ವರ್ಷಗಳ ನಂತರ ನಗದು ಚಲಾವಣೆ ದುಪ್ಪಟ್ಟು

ಹೊಸದಿಲ್ಲಿ: ಆರು ವರ್ಷಗಳ ಹಿಂದೆ ಕೇಂದ್ರ ಸರ್ಕಾರವು ನೋಟು ಅಮಾನ್ಯೀಕರಣ (demonetisation ) ನಿರ್ಣಯ ತೆಗೆದುಕೊಂಡು, ಸಾರ್ವಜನಿಕ ಚಲಾವಣೆಯಲ್ಲಿ ಶೇ. 86ರಷ್ಟಿದ್ದ ರೂ. 500 ಮತ್ತು ರೂ. 1000 ಮುಖಬೆಲೆಯ ನೋಟುಗಳನ್ನು ಹಿಂಪಡೆದ ನಂತರ, ಇಂದಿಗೂ ನಗದು ವಹಿವಾಟೇ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಕಳೆದ ಆರು ವರ್ಷಗಳಲ್ಲಿ ಸಾರ್ವಜನಿಕ ನಗದು ಚಲಾವಣೆ ದುಪ್ಪಟ್ಟುಗೊಂಡಿದೆ ಎಂದು ಅಧಿಕೃತ ದತ್ತಾಂಶಗಳು ಹೇಳುತ್ತಿವೆ. ಡಿಸೆಂಬರ್ 23, 2022ಕ್ಕೆ ಅಂತ್ಯಗೊಂಡಂತೆ ಸಾರ್ವಜನಿಕ ನಗದು ಚಲಾವಣೆ (ಅಥವಾ ಸಾರ್ವಜನಿಕರು ಹೊಂದಿರುವ ನಗದು) ಮೌಲ್ಯವು ರೂ. 34.42 ಲಕ್ಷ ಕೋಟಿಗೆ ತಲುಪಿದೆ ಎಂದು ರಿಸರ್ವ್ ಬ್ಯಾಂಕ್ ಇಂಡಿಯಾ (RBI) ದತ್ತಾಂಶಗಳಿಂದ ತಿಳಿದು ಬಂದಿದೆ ಎಂದು ndtv.com ವರದಿ ಮಾಡಿದೆ.

ಕಪ್ಪು ಹಣ ನಿಯಂತ್ರಣ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ, ನೋಟು ಅಮಾನ್ಯೀಕರಣ ನಿರ್ಧಾರ ಪ್ರಕಟಿಸಿದ ಕೆಲವೇ ದಿನಗಳ ಹಿಂದೆ, ನವೆಂಬರ್ 4ರಂದು ಸಾರ್ವಜನಿಕ ಚಲಾವಣೆಯಲ್ಲಿದ್ದ ನಗದು ಮೌಲ್ಯವು ರೂ. 17.74 ಲಕ್ಷ ಕೋಟಿಯಷ್ಟಿತ್ತು. ನೋಟು ಅಮಾನ್ಯೀಕರಣದ ನಂತರ ನಗದು ಚಲಾವಣೆಯು ರೂ. 9 ಲಕ್ಷ ಕೋಟಿಗೆ ಕುಸಿದಿತ್ತು.

ಜನವರಿ 6, 2017ಕ್ಕೆ ಹೋಲಿಸಿದರೆ ನಗದು ಚಲಾವಣೆಯು ಮೂರು ಪಟ್ಟು ಅಥವಾ ಶೇ. 260ರಷ್ಟು ಏರಿಕೆಯಾಗಿದ್ದು, ನವೆಂಬರ್ 4, 2016ಕ್ಕೆ ಹೋಲಿಸಿದರೆ ಶೇ. 83ರಷ್ಟು ಏರಿಕೆಯಾಗಿದೆ.

ನೋಟು ಅಮಾನ್ಯೀಕರಣದ ನಿರ್ಧಾರ ಪ್ರಕಟಿಸಿದ ನಂತರ ಸರ್ಕಾರವು ಸಾರ್ವಜನಿಕರಿಗೆ ತಮ್ಮ ಬಳಿಯಿರುವ ನಿಷೇಧಿತ ನೋಟುಗಳನ್ನು ಬದಲಿಸಿಕೊಳ್ಳಲು ಅಲ್ಪ ಕಾಲಾವಕಾಶ ಮಾತ್ರ ನೀಡಿತ್ತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಾರ, ಬಹುತೇಕ ಒಟ್ಟಾರೆ ಮೌಲ್ಯದ ನಿಷೇಧಿತ ನೋಟುಗಳು ಬ್ಯಾಂಕ್‌ಗಳಿಗೆ ಮರಳಿದ್ದವು.

ನವೆಂಬರ್ 8, 2016ರಂದು ಸಾರ್ವಜನಿಕ ಚಲಾವಣೆಯಲ್ಲಿದ್ದ ರೂ. 15.4 ಲಕ್ಷ ಕೋಟಿ ಮೌಲ್ಯದ ನಿಷೇಧಿತ ನೋಟುಗಳ ಪೈಕಿ ರೂ. 15.3 ಲಕ್ಷ ಕೋಟಿ ಮೌಲ್ಯದ ನೋಟುಗಳು ಅಥವಾ ಶೇ. 99.3ರಷ್ಟು ಮೌಲ್ಯದ ನೋಟುಗಳು ಬ್ಯಾಂಕ್‌ಗೆ ಮರಳಿದ್ದವು. ಇದರ ಬೆನ್ನಿಗೇ ತೀವ್ರ ಆರ್ಥಿಕ ಹಿಂಜರಿತ ಹಾಗೂ ಸಾರ್ವಜನಿಕರ ಸಂಕಷ್ಟಕ್ಕೆ ಕಾರಣವಾಗಿದ್ದ ಆಘಾತಕಾರಿ ನಡೆಯ ಅಗತ್ಯದ ಬಗ್ಗೆ ಪ್ರಶ್ನೆಗಳೆದ್ದಿದ್ದವು.

ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸೋಮವಾರ 4-1 ಬಹುಮತದ ತೀರ್ಪಿನಲ್ಲಿ ಆ ಕ್ರಮವನ್ನು ಎತ್ತಿ ಹಿಡಿದಿತ್ತು.

ಇದನ್ನೂ ಓದಿ: ನಟ ಕಿಶೋರ್ ಟ್ವಿಟರ್ ಖಾತೆ ಅಮಾನತು

share
Next Story
X