Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2021ಕ್ಕೆ ನಿಗದಿಯಾಗಿದ್ದ ಜನಗಣತಿ ಕಾರ್ಯ...

2021ಕ್ಕೆ ನಿಗದಿಯಾಗಿದ್ದ ಜನಗಣತಿ ಕಾರ್ಯ ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆ: ವರದಿ

6 Jan 2023 2:08 PM IST
share
2021ಕ್ಕೆ ನಿಗದಿಯಾಗಿದ್ದ ಜನಗಣತಿ ಕಾರ್ಯ ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆ: ವರದಿ

ಹೊಸದಿಲ್ಲಿ: 2021ಕ್ಕೆ ನಿಗದಿಯಾಗಿದ್ದ ಜನಗಣತಿ ಕಾರ್ಯವು (Census) ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆ ಇದ್ದು, ಮುಂದಿನ ಅದೇಶದವರೆಗೆ 2024-25ಕ್ಕೆ ಮುಂದೂಡಲಾಗಿದೆ. ಈ ಕುರಿತು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಳೆದ ತಿಂಗಳು ಪತ್ರ ರವಾನೆಯಾಗಿದ್ದು, ಭಾರತೀಯ ಮಹಾ ನೋಂದಣಾಧಿಕಾರಿ ಕಚೇರಿಯು ಆಡಳಿತಾತ್ಮಕ ಗಡಿಯನ್ನು ಸ್ಥಗಿತಗೊಳಿಸಲು ನಿಗದಿಯಾಗಿದ್ದ  ಜೂನ್ 30, 2023ರವರೆಗಿನ ಗಡುವನ್ನು ವಿಸ್ತರಿಸಿದೆ ಎಂದು indianexpress.com ವರದಿ ಮಾಡಿದೆ.

ಆಡಳಿತಾತ್ಮಕ ಗಡಿಗಳು ಸ್ಥಗಿತಗೊಂಡ ಕೆಲವು ತಿಂಗಳ ನಂತರ ಜನಗಣತಿ ಕಾರ್ಯ ಶುರುವಾಗಲಿದ್ದು ಮತ್ತು ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ ನಡೆಯಲಿರುವುದರಿಂದ 2023ರಲ್ಲಿ ಜನಗಣತಿ ನಡೆಯುವ ಸಾಧ್ಯತೆ ಇಲ್ಲವಾಗಿದೆ. ಅಲ್ಲದೆ, ರಾಷ್ಟ್ರೀಯ ಜನಸಂಖ್ಯೆ ನೋಂದಣಿ ಇಲಾಖೆಯು ಮನೆಗಣತಿ ಕಾರ್ಯ ಕೈಗೊಳ್ಳುವ ಮುನ್ನ ಜನಗಣತಿ ಕಾರ್ಯ ನಡೆಯಲಿದೆ.

ಇದಕ್ಕೂ ಮುನ್ನ ಆಡಳಿತಾತ್ಮಕ ವ್ಯಾಪ್ತಿಯ ಬದಲಾವಣೆಗೆ ಡಿಸೆಂಬರ್ 31, 2022ರಿಂದ ಜೂನ್ 30, 2022ರ ನಡುವೆ ಗಡುವು ನಿಗದಿಪಡಿಸಲಾಗಿತ್ತು.

ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಸರ್ಕಾರವು ಜನಗಣತಿ ನಿಯಮಗಳಿಗೆ ಕೆಲವು ತಿದ್ದುಪಡಿ ಮಾಡಿ, ಸ್ವಯಂ ನಾಗರಿಕರೇ ರಾಷ್ಟ್ರೀಯ ಜನಸಂಖ್ಯೆ ನೋಂದಣಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಒದಗಿಸಿತ್ತು. ಈ ಬೆಳವಣಿಗೆಯಿಂದ ಮನೆಗಣತಿ ಕಾರ್ಯವು ಕಳೆದ ವರ್ಷವೇ ಶುರುವಾಗಬಹುದು ಎಂಬ ವದಂತಿ ಹಬ್ಬಿತ್ತು.

ರಾಷ್ಟ್ರೀಯ ಮಹಾ ನೋಂದಣಾಧಿಕಾರಿಗಳು ತಮ್ಮ ಪತ್ರದಲ್ಲಿ ಕೋವಿಡ್-19 ಸಾಂಕ್ರಾಮಿಕದ ಕಾರಣಕ್ಕೆ ಗಡುವು ವಿಸ್ತರಿಸಲಾಗಿದೆ ಎಂದು ಕಾರಣ ನೀಡಿದ್ದಾರೆ. 2020ರಿಂದ ಗಡುವು ವಿಸ್ತರಣೆಗೆ ಅದೇ ಕಾರಣ ನೀಡುತ್ತಾ ಬರಲಾಗಿದೆ. "ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಾಂಕ್ರಾಮಿಕ ಹರಡುವ ಸಾಧ್ಯತೆ ಇರುವುದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ದೇಶಾದ್ಯಂತ ಕೋವಿಡ್-19 ಲಸಿಕೆ ಅಭಿಯಾನಕ್ಕೆ ವೇಗ ನೀಡಲು ಮುಂಚಿತವಾಗಿಯೇ ಸಿದ್ಧಗೊಂಡು, ಅದರಲ್ಲಿ ತೊಡಗಿಸಿಕೊಂಡಿರುವುದರಿಂದ ಈ ವರ್ಷ ಜನಗಣತಿ ಕಾರ್ಯವನ್ನು ಪ್ರಾರಂಭಿಸಲು ಸಾಧ್ಯವಿಲ್ಲ. ಅಲ್ಲದೆ ಜನಗಣತಿ ಕಾರ್ಯವನ್ನು ಕೈಗೊಳ್ಳಬೇಕಾದ ಕಾಲಾವಧಿಯನ್ನು ಇನ್ನೂ ನಿರ್ಧರಿಸಿಲ್ಲ" ಎಂದು ಕೊನೆಯ ಗಡುವು ವಿಸ್ತರಣೆ ಕುರಿತು ತನ್ನ ಪತ್ರದಲ್ಲಿ ತಿಳಿಸಿದೆ.

ಜನಗಣತಿ ನಿಯಮಗಳು, 1990ರ 8(vi) ನಿಯಮದ ಪ್ರಕಾರ, ಜನಗಣತಿ ಆಯುಕ್ತರು ಸೂಚಿಸಿದ ದಿನಾಂಕದಿಂದ ಆಡಳಿತಾತ್ಮಕ ಗಡಿಗಳು ಸ್ಥಗಿತಗೊಳ್ಳಲಿವೆ ಮತ್ತು ಸೂಚಿಸಿದ ದಿನಾಂಕದಿಂದ ಒಂದು ವರ್ಷಕ್ಕೂ ಮುನ್ನ ಆಡಳಿತಾತ್ಮಕ ಗಡಿಗಳನ್ನು ಸ್ಥಗಿತಗೊಳಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

share
Next Story
X