Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಹವಾಮಾನ ವೈಪರೀತ್ಯದಿಂದ...

ದೇಶದಲ್ಲಿ ಹವಾಮಾನ ವೈಪರೀತ್ಯದಿಂದ 2022ರಲ್ಲಿ ಮೃತಪಟ್ಟವರೆಷ್ಟು ಗೊತ್ತೇ?

7 Jan 2023 8:22 AM IST
share
ದೇಶದಲ್ಲಿ ಹವಾಮಾನ ವೈಪರೀತ್ಯದಿಂದ 2022ರಲ್ಲಿ ಮೃತಪಟ್ಟವರೆಷ್ಟು ಗೊತ್ತೇ?

ಹೊಸದಿಲ್ಲಿ: ದೇಶದಲ್ಲಿ 2022ರಲ್ಲಿ ಹವಾಮಾನ ವೈಪರೀತ್ಯದ ಘಟನೆಗಳ ಪರಿಣಾಮ 2227 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು "ಕ್ಲೈಮೇಟ್ ಆಫ್ ಇಂಡಿಯಾ ಡ್ಯೂರಿಂಗ್ 2022’ ವರದಿ ಬಹಿರಂಗಪಡಿಸಿದೆ. 1901ರ ಬಳಿಕ ಈ ವರ್ಷವನ್ನು ಐದನೇ ಅತ್ಯಂತ ಉಷ್ಣ ವರ್ಷ ಎಂದು ಹವಾಮಾನ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ವರದಿಯಲ್ಲಿ ವಿವರಿಸಲಾಗಿದೆ.

ಕಳೆದ ವರ್ಷದ ಜನವರಿ ಹಾಗೂ ಫೆಬ್ರವರಿಯನ್ನು ಹೊರತುಪಡಿಸಿ ಉಳಿದ ಹತ್ತು ತಿಂಗಳ ಅವಧಿಯಲ್ಲಿ ದೇಶದಲ್ಲಿ ತಾಪಮಾನ ವಾಡಿಕೆ ಮಟ್ಟಕ್ಕಿಂತ ಅಧಿಕವಿತ್ತು. ಜಾಗತಿಕವಾಗಿ ಕೂಡಾ 2022, ದಾಖಲೆಗಳಲ್ಲೇ ಐದನೇ ಅಥವಾ ಆರನೇ ಅಧಿಕ ತಾಪಮಾನದ ವರ್ಷ ಎಂದು ದಾಖಲಾಗಿದೆ. ವಿಶ್ವ ಹವಾಮಾನ ಇಲಾಖೆ, ಏಪ್ರಿಲ್‌ನಲ್ಲಿ ಬಿಡುಗಡೆ ಮಾಡಲಿರುವ ಜಾಗತಿಕ ಹವಾಮಾನದ ಸ್ಥಿತಿಗತಿ ವರದಿಯಲ್ಲಿ ಇದು ಸ್ಪಷ್ಟವಾಗಲಿದೆ.

ಭಾರತದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳ ಪೈಕಿ ಬಿರುಗಾಳಿ ಮತ್ತು ಸಿಡಿಲಿಗೆ 1285 ಮಂದಿ ಬಲಿಯಾಗಿದ್ದಾರೆ. ಇದು ಒಟ್ಟು ಇಂಥ ಸಾವಿನ ಶೇಕಡ 58ರಷ್ಟು. ಉಳಿದಂತೆ ಪ್ರವಾಹ ಹಾಗೂ ಭಾರಿ ಮಳೆ (835), ಹಿಮಪಾತ (37), ಉಷ್ಣಗಾಳಿ (30), ದೂಳು ಗಾಳಿ (22)ಯಿಂದ ಕೂಡಾ ಜನ ಮೃತಪಟ್ಟಿದ್ದಾರೆ. ಬಿರುಗಾಳಿ ಹಾಗೂ ಸಿಡಿಲಿಗೆ ಬಿಹಾರದಲ್ಲೇ 415 ಮಂದಿ ಬಲಿಯಾಗಿದ್ದಾರೆ. ಒಡಿಶಾದಲ್ಲಿ 168, ಜಾರ್ಖಂಡ್‌ನಲ್ಲಿ 122, ಮಧ್ಯಪ್ರದೇಶದಲ್ಲಿ 116, ಉತ್ತರ ಪ್ರದೇಶದಲ್ಲಿ 81, ರಾಜಸ್ಥಾನದಲ್ಲಿ 78, ಛತ್ತೀಸ್‌ಗಢದಲ್ಲಿ 71, ಮಹಾರಷ್ಟ್ರದಲ್ಲಿ 64, ಅಸ್ಸಾಂನಲ್ಲಿ 58 ಮಂದಿ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ಅತ್ಯಂತ ಬಾಧಿತ ರಾಜ್ಯಗಳು. ಹವಾಮಾನ ವೈಪರೀತ್ಯದಿಂದ ಈ ನಾಲ್ಕು ರಾಜ್ಯಗಳಲ್ಲಿ ಕ್ರಮವಾಗಿ 418, 257, 201 ಮತ್ತು 194 ಸಾವುಗಳು ಸಂಭವಿಸಿವೆ.

ದೇಶದಲ್ಲಿ 2022ರಲ್ಲಿ ಧೀರ್ಘಾವಧಿ ಸರಾಸರಿ (1981-2010)ಗಿಂತ 0.51 ಡಿಗ್ರಿ ಸೆಲ್ಸಿಯಸ್‌ನಷ್ಟು ಅಧಿಕ ಉಷ್ಣಾಂಶ ದಾಖಲಾಗಿದೆ. ಕಳೆದ ಜನವರಿ ಹಾಗೂ ಫೆಬ್ರವರಿಯಲ್ಲಿ ಸರಾಸರಿ ಉಷ್ಣಾಂಶ ಸಾಮಾನ್ಯಮಟ್ಟದಲ್ಲಿದ್ದರೆ, ಉಳಿದ ಹತ್ತು ತಿಂಗಳ ಅವಧಿಯಲ್ಲಿ ಅದು ವಾಡಿಕೆಗಿಂತ ಅಧಿಕವಾಗಿತ್ತು.

share
Next Story
X