Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಳಿಯಲ್ಲೂ ಟೀ ಶರ್ಟ್ ಧರಿಸಲು...

ಚಳಿಯಲ್ಲೂ ಟೀ ಶರ್ಟ್ ಧರಿಸಲು ನಿರ್ಧರಿಸಿರುವುದಕ್ಕೆ ಕಾರಣ ತಿಳಿಸಿದ ರಾಹುಲ್ ಗಾಂಧಿ

10 Jan 2023 12:13 PM IST
share
ಚಳಿಯಲ್ಲೂ ಟೀ ಶರ್ಟ್ ಧರಿಸಲು ನಿರ್ಧರಿಸಿರುವುದಕ್ಕೆ ಕಾರಣ ತಿಳಿಸಿದ ರಾಹುಲ್ ಗಾಂಧಿ

ಚಂಡೀಗಢ:  "ಮಧ್ಯಪ್ರದೇಶದಲ್ಲಿ ಹರಿದ ಬಟ್ಟೆಯಲ್ಲಿ ನಡುಗುತ್ತಿರುವ ಮೂವರು ಬಡ ಹುಡುಗಿಯರನ್ನು ನೋಡಿದ ನಂತರ ಪಾದಯಾತ್ರೆಯಲ್ಲಿ ಚಳಿಯ ನಡುವೆಯೂ ಟೀ ಶರ್ಟ್ ಧರಿಸಲು ನಿರ್ಧರಿಸಿದ್ದೇನೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಸೋಮವಾರ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಚಳಿಗಾಲದ ಚಳಿಯ ನಡುವೆಯೂ ಟೀ ಶರ್ಟ್ ಧರಿಸಿದ್ದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವಾಗಲೇ ರಾಹುಲ್ ಈ ಹೇಳಿಕೆ  ನೀಡಿದ್ದಾರೆ.

"ಈ ಬಿಳಿ ಟಿ-ಶರ್ಟ್ ಅನ್ನು ಏಕೆ ಧರಿಸಿದ್ದೀರಿ. ನಿಮಗೆ ಚಳಿಯಾಗುವುದಿಲ್ಲವೇ ಎಂದು ಜನರು ಕೇಳುತ್ತಿದ್ದಾರೆ. ನಾನು ಅದಕ್ಕೆ ಕಾರಣವನ್ನು ಹೇಳುತ್ತೇನೆ. ಯಾತ್ರೆ ಆರಂಭವಾದಾಗ ... ಕೇರಳದಲ್ಲಿನ ವಾತಾವರಣ  ಬಿಸಿ ಮತ್ತು ಆರ್ದ್ರವಾಗಿತ್ತು. ಆದರೆ ನಾವು ಮಧ್ಯಪ್ರದೇಶವನ್ನು ಪ್ರವೇಶಿಸಿದಾಗ  ಸ್ವಲ್ಪ ಚಳಿ ಇತ್ತು. ಒಂದು ದಿನ ಬೆಳಗ್ಗೆ ಹರಿದ ಬಟ್ಟೆಯಲ್ಲಿದ್ದ ಮೂವರು ಬಡ ಹೆಣ್ಣು ಮಕ್ಕಳು ನನ್ನ ಬಳಿಗೆ ಬಂದರು. ಫೋಟೊ ತೆಗೆಸಿಕೊಳ್ಳಲು ಬಯಸಿದ್ದ ಅವರ  ಕೈಹಿಡಿದು ನೋಡಿದಾಗ ಅವರು ಸರಿಯಾದ ಬಟ್ಟೆಯನ್ನು ಧರಿಸಿರದ ಕಾರಣ ಚಳಿಯಿಂದ ನಡುಗುತ್ತಿದ್ದರು. ಎಲ್ಲಿಯ ತನಕ ಚಳಿಯಿಂದ ನಾನು ನಡುಗುವುದಿಲ್ಲವೋ ಅಲ್ಲಿ ತನಕ  ಟೀ ಶರ್ಟ್ ಧರಿಸುವೆ  ಎಂದು ಆ ದಿನವೇ ನಿರ್ಧರಿಸಿದೆ'' ಎಂದು  ರಾಹುಲ್ ಗಾಂಧಿ ಹೇಳಿದ್ದಾರೆ.

“ಯಾವಾಗ ಚಳಿಯಿಂದ ದೇಹ ನಡುಗಲು ಶುರುವಾಗುತ್ತದೆಯೋ, ಆಗ ಸ್ವೆಟರ್ ಹಾಕಿಕೊಳ್ಳುವ ಯೋಚನೆ ಬರುತ್ತದೆ,  ನಿಮಗೆ ಚಳಿ ಇದ್ದರೆ ರಾಹುಲ್ ಗಾಂಧಿಗೂ ಚಳಿ ಇರುತ್ತದೆ. ನೀವು ಯಾವಾಗ ಸ್ವೆಟರ್ ಧರಿಸುತ್ತೀರೋ, ಆಗ ನಾನು ಸ್ವೆಟರ್ ಹಾಕಿಕೊಳ್ಳುವೆ ಎಂದು ಆ ಮೂವರು ಹುಡುಗಿಯರಿಗೆ ಒಂದು ಸಂದೇಶ ಕೊಡಲು ಇಚ್ಛಿಸುತ್ತೇನೆ’’ ಎಂದು ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶ-ಪಾದಯಾತ್ರೆಯ ಸಂದರ್ಭದಲ್ಲಿ ಮಾಧ್ಯಮಗಳು ನನ್ನ ಉಡುಗೆಯನ್ನು ಹೈಲೈಟ್ ಮಾಡುತ್ತಿದ್ದವು.  ಆದರೆ "ಬಡ ರೈತರು ಹಾಗೂ  ಕಾರ್ಮಿಕರು ಹರಿದ ಬಟ್ಟೆಯಲ್ಲಿ ತಮ್ಮೊಂದಿಗೆ ನಡೆಯುವುದನ್ನು ಅವರು ಗಮನಿಸುವುದಿಲ್ಲ" ಎಂದು ವಯನಾಡ್ ಸಂಸದ  ಹೇಳಿದ್ದರು.

"ನಾನು ಟೀ ಶರ್ಟ್‌ನಲ್ಲಿ ಇರುವುದು ನಿಜವಾದ ಪ್ರಶ್ನೆಯಲ್ಲ, ದೇಶದ ರೈತರು, ಬಡ ಕಾರ್ಮಿಕರು ಮತ್ತು ಅವರ ಮಕ್ಕಳು ಹರಿದ ಬಟ್ಟೆ, ಟಿ-ಶರ್ಟ್‌ಗಳು ಮತ್ತು ಸ್ವೆಟರ್‌ಗಳಿಲ್ಲದೆ ಏಕೆ ಇದ್ದಾರೆ ಎಂಬುದು ನಿಜವಾದ ಪ್ರಶ್ನೆ" ಎಂದು ಅವರು ಭಾಗಪತ್‌ನಲ್ಲಿ ರಾಹುಲ್ ಹೇಳಿದ್ದರು.

इस टी-शर्ट से बस इतना इज़हार कर रहा हूं,
थोड़ा दर्द आपसे उधार ले रहा हूं। pic.twitter.com/soVmiyvjqA

— Rahul Gandhi (@RahulGandhi) January 9, 2023
share
Next Story
X