Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 15 ನಕಲಿ ಚೀನೀ ಆ್ಯಪ್ ಗಳ ಮೂಲಕ 300 ಕೋಟಿ...

15 ನಕಲಿ ಚೀನೀ ಆ್ಯಪ್ ಗಳ ಮೂಲಕ 300 ಕೋಟಿ ರೂ. ವಂಚಿಸಿದ ಸೈಬರ್ ಕ್ರಿಮಿನಲ್ ಗಳ ಜಾಲ ಭೇದಿಸಿದ ಪೊಲೀಸರು

► ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವ ಆ್ಯಪ್ ಗಳ ಬಗ್ಗೆ ಇರಲಿ ಎಚ್ಚರ… ► ಸಂತ್ರಸ್ತರ ಅಶ್ಲೀಲ ಚಿತ್ರಗಳನ್ನು ಬಳಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವಂಚಕರು

11 Jan 2023 9:53 PM IST
share
15 ನಕಲಿ ಚೀನೀ ಆ್ಯಪ್ ಗಳ ಮೂಲಕ 300 ಕೋಟಿ ರೂ. ವಂಚಿಸಿದ ಸೈಬರ್ ಕ್ರಿಮಿನಲ್ ಗಳ ಜಾಲ ಭೇದಿಸಿದ ಪೊಲೀಸರು
► ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವ ಆ್ಯಪ್ ಗಳ ಬಗ್ಗೆ ಇರಲಿ ಎಚ್ಚರ… ► ಸಂತ್ರಸ್ತರ ಅಶ್ಲೀಲ ಚಿತ್ರಗಳನ್ನು ಬಳಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವಂಚಕರು

ಹೊಸದಿಲ್ಲಿ, ಜ. 11: ಹದಿನೈದು ನಕಲಿ ಚೀನೀ ಆ್ಯಪ್‌ಗಳ ಮೂಲಕ 300 ಕೋಟಿ ರೂಪಾಯಿ ವಂಚಿಸಿರುವ ಸೈಬರ್ ಕ್ರಿಮಿನಲ್‌ಗಳ ಹಗರಣವೊಂದನ್ನು ಉತ್ತರಾಖಂಡ ಪೊಲೀಸರು ಪತ್ತೆಹಚ್ಚಿದ್ದಾರೆ.

ಕ್ರಿಮಿನಲ್‌ಗಳು ಸಂತ್ರಸ್ತರ ಅಶ್ಲೀಲ ಚಿತ್ರಗಳನ್ನು ಅವರ ಕುಟುಂಬ ಸದಸ್ಯರಿಗೆ ಕಳುಹಿಸುವ ಮೂಲಕ ಬ್ಲಾಕ್‌ಮೇಲ್ ಕೂಡ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

‘‘ಉತ್ತರಾಖಂಡ ಪೊಲೀಸರು ಸೈಬರ್ ವಂಚಕರ ಜಾಲವೊಂದನ್ನು ಪತ್ತೆಹಚ್ಚಿದ್ದಾರೆ. ಕ್ರಿಮಿನಲ್‌ಗಳು ತಮ್ಮ ಮೊಬೈಲ್ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡುವಂತೆ ಒತ್ತಾಯಿಸಿ ಜನರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು ಹಾಗೂ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವ ಆಮಿಶಗಳನ್ನು ಒಡ್ಡುತ್ತಿದ್ದರು. ಈ ಪ್ರಕ್ರಿಯೆಯಲ್ಲಿ, ಕ್ರಿಮಿನಲ್‌ಗಳು ಜನರ ಮೊಬೈಲ್ ಫೋನ್‌ಗಳಲ್ಲಿರುವ ಚಿತ್ರಗಳು ಮತ್ತು ದಾಖಲೆಗಳನ್ನು ಪಡೆದುಕೊಂಡು ಹಣಕ್ಕಾಗಿ ಅವರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು’’ ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಹೇಳಿದ್ದಾರೆ.

ಹೆಕ್ಟರ್ ಲೆಂಡ್‌ಕರೊ ಪ್ರೈವೇಟ್ ಲಿಮಿಟೆಡ್ ಎಂಬ ನಕಲಿ ಕಂಪೆನಿಯನ್ನು ಸ್ಥಾಪಿಸಿರುವ ದಿಲ್ಲಿ ನಿವಾಸಿ ಅಂಕುರ್ ದಿಂಗ್ರಾ ಎಂಬಾತನನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ.

ಈ ನಕಲಿ ಕಂಪೆನಿಯು ರುಪೀಗೋ(RupeeGo), ರುಪೀಹಿಯರ್(Rupee Here), ಲೋನ್‌ಯು(LoanU), ಕ್ವಿಕ್‌ರುಪೀ(QuickRupee), ಪಂಚ್ ಮನಿ(Punch Money), ಗ್ರಾಂಡ್ ಲೋನ್(Grand Loan), ಡ್ರೀಮ್‌ಲೋನ್(Dream Loan), ಕ್ಯಾಶ್‌ಎಮ್‌ಒ(CashMO), ರುಪೀಎಮ್‌ಒ(Rupee MO), ಕ್ರೆಡಿಟ್‌ಲೋನ್(CreditLoan), ಲೆಂಡ್‌ಕರ್(Lendkar), ರಾಕ್‌ಆನ್(RockOn), ಹೋಪ್‌ಲೋನ್(HopeLoan), ಲೆಂಡ್‌ನೌ(Lend Now) ಮತ್ತು ಕ್ಯಾಶ್‌ಫುಲ್(Cashfull.) ಮುಂತಾದ ಚೀನಾದ ಸಾಲ ಆ್ಯಪ್‌ಗಳ ಮೂಲಕ ಕಡಿಮೆ ಬಡ್ಡಿಯಲ್ಲಿ ಸಾಲ ಕೊಡುತ್ತಿತ್ತು.

ಮೊದಲು ಈ ಸಾಲ ಆ್ಯಪ್‌ಗಳು ಗೂಗಲ್‌ನ ಪ್ಲೇಸ್ಟೋರ್‌ನಲ್ಲಿದ್ದವು. ಆದರೆ, ಗೂಗಲ್ ಅವುಗಳನ್ನು ತೆಗೆದುಹಾಕಿದ ಬಳಿಕ, ಸೈಬರ್ ವಂಚಕರು ವಾಟ್ಸ್‌ಆ್ಯಪ್/ಎಸ್‌ಎಮ್‌ಎಸ್ ಮತ್ತು ಇತರ ಮಾಧ್ಯಮಗಳನ್ನು ಬಳಸತೊಡಗಿದರು.

ಭಾರತವು ಚೀನಾದ ಸುಮಾರು 600 ಸಾಲ ಆ್ಯಪ್‌ಗಳನ್ನು ನಿಷೇಧಿಸಿದೆ.

share
Next Story
X