Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ತೆಲುಗು ಧ್ವಜ' ಪದ ಬಳಕೆಗೆ ಆಕ್ಷೇಪಿಸಿದ...

'ತೆಲುಗು ಧ್ವಜ' ಪದ ಬಳಕೆಗೆ ಆಕ್ಷೇಪಿಸಿದ ಗಾಯಕ ಅದ್ನಾನ್‌ ಸಮಿಗೆ ವಿವಿಧತೆಯಲ್ಲಿ ಏಕತೆಯ ಪಾಠ ಮಾಡಿದ ನಟಿ ರಮ್ಯಾ

12 Jan 2023 7:18 PM IST
share
ತೆಲುಗು ಧ್ವಜ ಪದ ಬಳಕೆಗೆ ಆಕ್ಷೇಪಿಸಿದ ಗಾಯಕ ಅದ್ನಾನ್‌ ಸಮಿಗೆ ವಿವಿಧತೆಯಲ್ಲಿ ಏಕತೆಯ ಪಾಠ ಮಾಡಿದ ನಟಿ ರಮ್ಯಾ

ಬೆಂಗಳೂರು: ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ ಚಲನಚಿತ್ರದ ‘ನಾಟು ನಾಟು’ ಗೀತೆಗೆ ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿ ಒಲಿದ ಬೆನ್ನಲ್ಲೇ ಆಂಧ್ರ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಮಾಡಿರುವ ಟ್ವೀಟ್‌ ಸಂಚಲನ ಮೂಡಿಸಿದೆ.

ಎಂ.ಎಂ.ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ʼನಾಟು ನಾಟುʼ ಹಾಡಿಗೆ ಅತ್ಯುತ್ತಮ ಮೂಲಗೀತೆ ವಿಭಾಗದಲ್ಲಿ  ಪ್ರಶಸ್ತಿಗೆ ಪಾತ್ರವಾದ ಬಳಿಕ ಟ್ವೀಟ್‌ ಮಾಡಿದ್ದ ಆಂಧ್ರ ಸಿಎಂ ಜಗನ್‌ ಮೋಹನ ರೆಡ್ಡಿ, ‘ತೆಲುಗು ಬಾವುಟ ಹಾರಾಡುತ್ತಿದೆ. ಆಂಧ್ರ ಜನರ ಪರವಾಗಿ ನಾನು ಕೀರವಾಣಿ, ರಾಜಮೌಳಿ, ಜೂನಿಯರ್‌ ಎನ್‌ಟಿಆರ್‌, ರಾಮಚರಣ್‌ ತೇಜ ಮತ್ತು ಆರ್‌ಆರ್‌ಆರ್‌ ಚಿತ್ರತಂಡವನ್ನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ’ ಎಂದು ಬರೆದಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಖ್ಯಾತ ಗಾಯಕ ಅದ್ನಾನ್‌ ಸಮಿ, ‘ತೆಲುಗು ಬಾವುಟ? ನೀವು ಭಾರತದ ಬಾವುಟ ಎಂದು ಉದ್ದೇಶಿಸಿದ್ದೀರ ಅಲ್ಲವೇ? ನಾವು ಮೊದಲು ಭಾರತೀಯರು. ದೇಶದ ಇತರ ಭಾಗದಿಂದ ನಿಮ್ಮನ್ನು ನೀವು ಪ್ರತ್ಯೇಕಿಸಿಕೊಳ್ಳುವುದನ್ನು ನಿಲ್ಲಿಸಿ. ಮುಖ್ಯವಾಗಿ, ಅಂತರಾಷ್ಟ್ರೀಯವಾಗಿ (ಗುರುತಿಸಿಕೊಳ್ಳುವಾಗ). ನಾವೆಲ್ಲರೂ ಒಂದೇ ದೇಶದವರು. 1947 ರಲ್ಲಿ ನಾವು ನೋಡಿದಂತೆ ಈ ‘ಪ್ರತ್ಯೇಕತಾವಾದಿ’ ಧೋರಣೆ ಅತ್ಯಂತ ಅನಾರೋಗ್ಯಕರವಾದದ್ದು. ಜೈ ಹಿಂದ್ʼ ಎಂದು ಟ್ವೀಟ್‌ ಮಾಡಿದ್ದರು.

ಅದ್ನಾನ್‌ ಸಮಿ ಟ್ವೀಟ್‌ ದಕ್ಷಿಣ ಭಾರತೀಯರ ಅಸಮಾಧಾನಕ್ಕೆ ಗುರಿಯಾಗಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ, ಭಾಷೆಗೂ ತನ್ನದೇ ಆದ ಅಸ್ಮಿತೆ ಇರುವ ಬಗ್ಗೆ ಗೌರವ ನೀಡಿ ಎಂದು ನೆಟ್ಟಿಗರು ತಿಳಿ ಹೇಳಿದ್ದಾರೆ.

ಬಹುಭಾಷಾ ನಟಿ ರಮ್ಯಾ (ದಿವ್ಯ ಸ್ಪಂದನ) ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಹೌದು, ನಾವು ಭಾರತೀಯರು. ಅದರೊಂದಿಗೆ ನಾವು ಕನ್ನಡಿಗರು, ತಮಿಳರು, ತೆಲುಗರು, ಬೆಂಗಾಲಿಗಳು...   ನಮ್ಮದೇ ಭಾಷೆಗಳನ್ನು ಹೊಂದಿದಂತೆಯೇ ನಾವೆಲ್ಲರೂ ನಮ್ಮದೇ ‘ಧ್ವಜ’ಗಳನ್ನು ಹೊಂದಿದ್ದೇವೆ. ನಾವು ಭಾರತೀಯರಾಗಿದಕ್ಕೆ ಹೆಮ್ಮೆ ಪಡುತ್ತೇವೆ, ಅಂತೆಯೇ ಮೂಲ ಸಂಸ್ಕೃತಿ, ಭಾಷೆ, ಧ್ವಜಗಳನ್ನು ಹೊಂದಿರುವುದುಕ್ಕಾಗಿ ಹೆಮ್ಮೆ ಪಡುತ್ತೇವೆ. ವಿವಿಧತೆಯಲ್ಲಿ ಏಕತೆ ಎಂಬುದು ನೆನಪಿದೆಯೇ” ಎಂದು ಪ್ರಶ್ನಿಸಿದ್ದಾರೆ.

ನಟಿ ರಮ್ಯಾ ಉತ್ತರಕ್ಕೆ ಹಲವು ನೆಟ್ಟಿಗರು ಬೆಂಬಲ ಸೂಚಿಸಿದ್ದಾರೆ. ಅದ್ನಾನ್‌ ಸಮಿ ಪರವಾಗಿಯೂ ಅಭಿಪ್ರಾಯಗಳು ಕೇಳಿ ಬಂದಿವೆ.

Yes, we are are Indians but we are also Kannadigas, Tamils, Telugu, Bengali etc we all have our ‘flags’ just like we have our own language. We feel proud as Indians & also as people rooted by culture, language, flag. Unity in diversity ring a bell? https://t.co/8NbZPDiW3A

— Ramya/Divya Spandana (@divyaspandana) January 12, 2023

The #Telugu flag is flying high! On behalf of all of #AndhraPradesh, I congratulate @mmkeeravaani, @ssrajamouli, @tarak9999, @AlwaysRamCharan and the entire team of @RRRMovie. We are incredibly proud of you! #GoldenGlobes2023 https://t.co/C5f9TogmSY

— YS Jagan Mohan Reddy (@ysjagan) January 11, 2023
share
Next Story
X