Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಎಸಿಯಲ್ಲಿ ಯಾವುದೇ ಅನಿರೀಕ್ಷಿತ...

ಎಲ್ಎಸಿಯಲ್ಲಿ ಯಾವುದೇ ಅನಿರೀಕ್ಷಿತ ಸಂದರ್ಭ ಎದುರಿಸಲು ಭಾರತೀಯ ಸೇನೆಯು ಸನ್ನದ್ಧವಾಗಿದೆ: ಜ.ಮನೋಜ್ ಪಾಂಡೆ

15 Jan 2023 11:09 PM IST
share
ಎಲ್ಎಸಿಯಲ್ಲಿ ಯಾವುದೇ ಅನಿರೀಕ್ಷಿತ ಸಂದರ್ಭ ಎದುರಿಸಲು ಭಾರತೀಯ ಸೇನೆಯು ಸನ್ನದ್ಧವಾಗಿದೆ: ಜ.ಮನೋಜ್ ಪಾಂಡೆ

ಬೆಂಗಳೂರು,ಜ.15: ಭಾರತೀಯ ಸೇನೆಯು ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ಬಲವಾದ ರಕ್ಷಣಾ ವ್ಯವಸ್ಥೆಯನ್ನು ಕಾಯ್ದುಕೊಂಡಿದೆ ಮತ್ತು ಯಾವುದೇ ಅನಿರೀಕ್ಷಿತ ಸಂದರ್ಭವನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ ಪಾಂಡೆ ಅವರು ರವಿವಾರ ಇಲ್ಲಿ ಹೇಳಿದರು.

ಭಾರತೀಯ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ದಿಲ್ಲಿಯಿಂದ ಹೊರಗೆ, ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸೇನಾ ದಿನಾಚರಣೆಯಲ್ಲಿ ಮಾತನಾಡುತ್ತಿದ್ದ ಅವರು,ಎಲ್ಎಸಿಯುದ್ದಕ್ಕೂ ದುರ್ಗಮ ಪ್ರದೇಶಗಳು ಮತ್ತು ಪ್ರತಿಕೂಲ ಹಮಾಮಾನದ ಹೊರತಾಗಿಯೂ ಭಾರತೀಯ ಸೇನಾ ಪಡೆಗಳು ಈ ಪ್ರದೇಶಗಳಲ್ಲಿ ನಿರ್ಭಯವಾಗಿ ಕರ್ತವ್ಯ ನಿರ್ವಹಿಸುತ್ತಿವೆ. ಶಸ್ತ್ರಾಸ್ತ್ರಗಳು ಉಪಕರಣಗಳು ಮತ್ತು ಸೌಲಭ್ಯಗಳ ರೂಪದಲ್ಲಿ ಅವುಗಳಿಗೆ ಎಲ್ಲ ಅಗತ್ಯ ಬೆಂಬಲವನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಪಶ್ಚಿಮ ಗಡಿಯಲ್ಲಿನ ಸ್ಥಿತಿ ಕುರಿತಂತೆ ಅವರು,ನಿಯಂತ್ರಣ ರೇಖೆ (ಎಲ್ಒಸಿ)ಯುದ್ದಕ್ಕೂ ಕದನ ವಿರಾಮವನ್ನು ಕಾಯ್ದುಕೊಳ್ಳಲಾಗಿದೆ. ಕದನ ವಿರಾಮ ಉಲ್ಲಂಘನೆಗಳು ಕಡಿಮೆಯಾಗಿದ್ದು,ಗಡಿಯಾಚೆ ಭಯೋತ್ಪಾದನೆ ಮೂಲಸೌಕರ್ಯಗಳ ಅಸ್ತಿತ್ವವು ಮುಂದುವರಿದಿದೆ. ಆದರೆ ನಮ್ಮ ಯೋಧರು ಗಡಿಯಲ್ಲಿ ನುಸುಳುವಿಕೆ ಪ್ರಯತ್ನಗಳನ್ನು ನಿರಂತರವಾಗಿ ತಡೆಯುತ್ತಿದ್ದಾರೆ ಎಂದು ತಿಳಿಸಿದರು.

ಜಮ್ಮು-ಕಾಶ್ಮೀರದಲ್ಲಿ ಅಂತರರಾಷ್ಟ್ರೀಯ ಗಡಿಯಾಚೆಯಿಂದ ಮಾದಕ ದ್ರವ್ಯಗಳು ಮತ್ತು ಶಸ್ತ್ರಾಸ್ತ್ರಗಳ ಕಳ್ಳ ಸಾಗಾಣಿಕೆಗಾಗಿ ಡ್ರೋನ್ಗಳನ್ನು ಬಳಸಿದ ಹಲವಾರು ನಿದರ್ಶನಗಳಿವೆ ಎಂದ ಅವರು,ಆದರೆ ಡ್ರೋನ್ ನಿಗ್ರಹ ಜಾಮರ್ಗಳು,ಸ್ಪೂಫರ್ಗಳು ಮತ್ತು ಇತರ ತಂತ್ರಜ್ಞಾನಗಳು ಈ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸುತ್ತಿವೆ ಎಂದರು.                      

ಅಗ್ನಿಪಥಕ್ಕೆ ಉತ್ತಮ ಪ್ರತಿಕ್ರಿಯೆ

ಅಗ್ನಿಪಥ ಯೋಜನೆಯನ್ನು ಪ್ರಗತಿಪರ ಹೆಜ್ಜೆ ಎಂದು ಬಣ್ಣಿಸಿದ ಜ.ಪಾಂಡೆ,ದೇಶಾದ್ಯಂತ ಅಗ್ನಿವೀರರ ಭರ್ತಿ ರ್ಯಾಲಿಗಳಿಗೆ ಯುವಜನರಿಂದ ಅತ್ಯುತ್ತಮ ಪ್ರತಿಕ್ರಿಯೆ ಲಭಿಸಿದೆ. ಮೊದಲ ತಂಡದ ಪುರುಷ ಅಗ್ನಿವೀರರಿಗೆ ತರಬೇತಿಯು ಆರಂಭಗೊಂಡಿದ್ದು, ಮಹಿಳೆಯರಿಗೆ ತರಬೇತಿ ಈ ವರ್ಷದ ಮಾರ್ಚ್ನಿಂದ ಆರಂಭಗೊಳ್ಳಲಿದೆ ಎಂದರು.

1949ರಲ್ಲಿ ಆರಂಭಗೊಂಡಿದ್ದ ಸೇನಾ ದಿನಾಚರಣೆಯನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನ ಎಂಇಜಿ ಆ್ಯಂಡ್ ಸೆಂಟರ್ನ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿತ್ತು. ಇದು 75ನೇ ಸೇನಾ ದಿನಾಚರಣೆಯಾಗಿದೆ.

ಆಕರ್ಷಕ ಪಥ ಸಂಚಲನ,ಮಿಲಿಟರಿ ಪ್ರದರ್ಶನ,ಆಗಸದಲ್ಲಿ ಹೆಲಿಕಾಪ್ಟರ್ ಮೂಲಕ ತ್ರಿವರ್ಣ ಧ್ವಜದ ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದವು. ಈ ಸಂದರ್ಭದಲ್ಲಿ ಜ.ಪಾಂಡೆ ಅವರು ಶೌರ್ಯ ಪ್ರಶಸ್ತಿಗಳನ್ನು ವಿತರಿಸಿದರು.

1949,ಜ.15ರಂದು ಜನರಲ್ (ನಂತರ ಫೀಲ್ಡ್ ಮಾರ್ಷಲ್) ಕೆ.ಎಂ.ಕಾರಿಯಪ್ಪ ಅವರು ಕೊನೆಯ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಸರ್ ಫ್ರಾನ್ಸಿಸ್ ಬುಚರ್ ಅವರಿಂದ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಅಧಿಕಾರವನ್ನು ವಹಿಸಿಕೊಂಡಿದ್ದರು. ಇದರ ನೆನಪಿಗಾಗಿ ಪ್ರತಿ ವರ್ಷ ಜ.15ರಂದು ಸೇನಾ ದಿನವನ್ನು ಆಚರಿಸಲಾಗುತ್ತಿದೆ.

share
Next Story
X