Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​72 ವರ್ಷ ಹಳೆಯ ಪ್ರಕರಣ ಕೊನೆಗೂ ಇತ್ಯರ್ಥ

​72 ವರ್ಷ ಹಳೆಯ ಪ್ರಕರಣ ಕೊನೆಗೂ ಇತ್ಯರ್ಥ

16 Jan 2023 8:06 AM IST
share
​72 ವರ್ಷ ಹಳೆಯ ಪ್ರಕರಣ ಕೊನೆಗೂ ಇತ್ಯರ್ಥ

ಕೊಲ್ಕತ್ತಾ: ದೇಶದ ಅತ್ಯಂತ ಹಳೆಯ ಬಾಕಿ ಪ್ರಕರಣ ಎನಿಸಿಕೊಂಡಿದ್ದ 72 ವರ್ಷ ಹಳೆಯ ಪ್ರಕರಣವನ್ನು ದೇಶದ ಅತ್ಯಂತ ಪ್ರಾಚೀನ ಹೈಕೋರ್ಟ್ ಎನಿಸಿದ ಕೊಲ್ಕತ್ತಾ ಹೈಕೋರ್ಟ್ ಕಳೆದ ವಾರ ಇತ್ಯರ್ಥಪಡಿಸಿದೆ. ವಿಚಿತ್ರವೆಂದರೆ 1951ರಲ್ಲಿ ಈ ದಾವೆ ಸಲ್ಲಿಸಿದ ಹತ್ತು ವರ್ಷಗಳ ಬಳಿಕ, ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಜನಿಸಿದ್ದರು!

ಈ ಹಿಂದೆ ಅಸ್ತಿತ್ವದಲ್ಲಿದ್ದ ಬೆಹ್ರ್ರಾಪುರ ಬ್ಯಾಂಕ್ ಲಿಮಿಟೆಡ್ ಸಮಾಪನಾ ಪ್ರಕ್ರಿಯೆ ಸಂಬಂಧದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿತು. ದೇಶದ ಇನ್ನೂ ಐದು ಅತ್ಯಂತ ಹಳೆಯ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಈ ಎಲ್ಲವೂ 1952ರಲ್ಲಿ ಸಲ್ಲಿಕೆಯಾದವುಗಳು.

ಉಳಿದ ಮೂರು ಪ್ರಕರಣಗಳಲ್ಲಿ ಎರಡು ಸಿವಿಲ್ ದಾವೆಗಳಾಗಿದ್ದು, ಬಂಗಾಳದ ಮಾಲ್ಡಾ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ಒಂದು ಬಾಕಿ ಪ್ರಕರಣ ಮದ್ರಾಸ್ ಹೈಕೋರ್ಟ್‍ನಲ್ಲಿದೆ. ಮಾಲ್ಡಾ ನ್ಯಾಯಾಲಯ ಈ ಪ್ರಕರಣಗಳ ವಿಚಾರಣೆಯನ್ನು ಮಾರ್ಚ್ ಹಾಗೂ ನವೆಂಬರ್‍ನಲ್ಲಿ ನಡೆಸಲು ದಿನಾಂಕ ನಿಗದಿಪಡಿಸಿವೆ.

ಜನವರಿ 9ರವರೆಗೂ ಭಾರತದ ನ್ಯಾಷನಲ್ ಜ್ಯುಡೀಶಿಯಲ್ ಗ್ರಿಡ್‍ನಲ್ಲಿ ಬೆಹ್ರ್ರಾಂಪುರ ಪ್ರಕರಣ, ದೇಶದ ಅತ್ಯಂತ ಹಳೆಯ ಪ್ರಕರಣ ಎಂದು ದಾಖಲಾಗಿತ್ತು. ನ್ಯಾಯಮೂರ್ತಿ ರವಿಕೃಷ್ಣನ್ ಕಾಪುಲ್ ಅವರು ವಿಲೇವಾರಿ ಆದೇಶಕ್ಕೆ ಕಳೆದ ವರ್ಷದ ಸೆಪ್ಟೆಂಬರ್ 19ರಂದು  ಸಹಿ ಮಾಡಿದರೂ, ಅದನ್ನು ಮುಚ್ಚಿದ ಲಕೋಟೆಯಲ್ಲಿ ಟೈಪಿಂಗ್ ತಿದ್ದುಪಡಿಗಳ ಬಳಿಕ ವಿತರಿಸಲಾಗಿದೆ.

ಈ ಪ್ರಕರಣ 1948ರ ನವೆಂಬರ್ 19ರ ಮೂಲದ್ದು. ಹಲವು ವ್ಯಾಜ್ಯಗಳಿಗೆ ಗುರಿಯಾಗಿದ್ದ ಬೆಹ್ರ್ರಾಂಪುರ ಬ್ಯಾಂಕ್‍ನ ಸಮಾಪನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅವಕಾಶ ಕೋರಿ ಈ ಅರ್ಜಿ ಸಲ್ಲಿಕೆಯಾಗಿತ್ತು. ಇದನ್ನು ಪ್ರಶ್ನಿಸಿ 1951ರ ಜನವರಿಯಲ್ಲಿ ದಾವೆ ಸಲ್ಲಿಸಲಾಗಿತ್ತು. ಇದು ಪ್ರಕರಣ ಸಂಖ್ಯೆ "71/1951" ಆಗಿ ದಾಖಲಾಗಿತ್ತು.

ಬ್ಯಾಂಕಿನ ಸಮಪನಾ ಪ್ರಕ್ರಿಯೆ ಪ್ರಶ್ನಿಸಿದ್ದ ಅರ್ಜಿ ಕಳೆದ ಸೆಪ್ಟೆಂಬರ್‍ನಲ್ಲಿ ಎರಡು ಬಾರಿ ವಿಚಾರಣೆಗೆ ಬಂದಿತ್ತು. ನ್ಯಾಯಮೂರ್ತಿ ಕಾಪುರ್ ಅವರು ನ್ಯಾಯಾಲಯದ ಸಮಾಪನಾದಾರರಿಂದ ಈ ಬಗ್ಗೆ ವರದಿ ಕೇಳಿದ್ದರು. ಈ ಪ್ರಕರಣ 2006ರ ಆಗಸ್ಟ್‍ನಲ್ಲೇ ಇತ್ಯರ್ಥವಾಗಿದ್ದು, ಇದು ದಾಖಲೆಗಳಲ್ಲಿ ಪರಿಷ್ಕರಣೆಗೊಳ್ಳದೇ ಬಾಕಿ ಪ್ರಕರಣಗಳ ಪಟ್ಟಿಯಲ್ಲಿ ಉಳಿದಿತ್ತು ಎಂದು ಸಹಾಯಕ ಸಮಾಪನಾದಾರರು ವರದಿ ನೀಡಿದ್ದರು.

share
Next Story
X