Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೆಫ್ಟಿನೆಂಟ್ ಗವರ್ನರ್ ನಮ್ಮ ಹೆಡ್...

ಲೆಫ್ಟಿನೆಂಟ್ ಗವರ್ನರ್ ನಮ್ಮ ಹೆಡ್ ಮಾಸ್ಟರ್ ಅಲ್ಲ: ಕೇಜ್ರಿವಾಲ್

17 Jan 2023 9:21 PM IST
share
ಲೆಫ್ಟಿನೆಂಟ್ ಗವರ್ನರ್ ನಮ್ಮ ಹೆಡ್ ಮಾಸ್ಟರ್ ಅಲ್ಲ: ಕೇಜ್ರಿವಾಲ್

ಹೊಸದಿಲ್ಲಿ, ಜ. 17: ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ(V. K.Saxena) ಅವರು ನನ್ನ ಮುಖ್ಯೋಪಾಧ್ಯಯರಲ್ಲ. ಜನರು ನನ್ನನ್ನು ಮುಖ್ಯ ಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್(Arvind Kejriwal) ಅವರು ಮಂಗಳವಾರ ಕಿಡಿ ಕಾರಿದ್ದಾರೆ.

ತನ್ನ ಸರಕಾರದ ಕಾರ್ಯಾನಿರ್ವಹಣೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಹಸ್ತಕ್ಷೇಪ ನಡೆಸುತ್ತಿರುವ ಆರೋಪದ ಬಗ್ಗೆ ದಿಲ್ಲಿ ವಿಧಾನ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ‘‘ಲೆಫ್ಟಿನೆಂಟ್ ಗವರ್ನರ್ ಅವರು ಊಳಿಗಮಾನ್ಯ ಮನಸ್ಥಿತಿಯಿಂದ ಬಳಲುತ್ತಿದ್ದಾರೆ. ಅವರು ನಗರದ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದನ್ನು ಬಯಸುತ್ತಿಲ್ಲ’’ ಎಂದಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಯಾರು? ಅವರು ನಮ್ಮ ತಲೆ ಮೇಲೆ ಕೂತಿದ್ದಾರೆ. ನಮ್ಮ ಮಕ್ಕಳು ಹೇಗೆ ಓದಬೇಕು ಎಂದು ನಿರ್ಧರಿಸಲು ಇವರು ಯಾರು? ಈ ಜನರು ನಮ್ಮ ಮಕ್ಕಳನ್ನು ಅವಿದ್ಯಾವಂತರಾಗಲಿ ಎಂದು ಬಿಟ್ಟಿದ್ದಾರೆ. ನಮ್ಮನ್ನು ತಡೆಯಲು ಲೆಫ್ಟಿನೆಂಟ್ ಗವರ್ನರ್ಗೆ ಅಧಿಕಾರ ಇಲ್ಲ. ಬದುಕಿನಲ್ಲಿ ಯಾವುದೂ ಶಾಶ್ವತ ಅಲ್ಲ.ನಾವು ನಾಳೆ ಲೆಫ್ಟಿನೆಂಟ್ ಗವರ್ನರ್ ಜೊತೆಗೆ ಕೇಂದ್ರದಲ್ಲಿ ಅಧಿಕಾರದಲ್ಲಿ ಇರಬಹುದು. ಆಗ ನಮ್ಮ ಸರಕಾರ ಜನರಿಗೆ ಕಿರುಕುಳ ನೀಡದು ಎಂದು ಕೇಜ್ರಿವಾಲ್ ಅವರು ಹೇಳಿದರು. ನನ್ನ ಶಿಕ್ಷಕರೂ ನನ್ನ ಹೋಮ್ ವರ್ಕ್ ಅನ್ನು ಲೆಫ್ಟಿನೆಂಟ್ ಗವರ್ನರ್ ಅವರಂತೆ ಪರಿಶೀಲಿಸಿಲ್ಲ. ಅಕ್ಷರಗಳು, ಬರೆಹದ ಬಗ್ಗೆ ದೂರಿಲ್ಲ... ಅವರು ನನ್ನ ಮುಖ್ಯೋಪಾಧ್ಯಾಯರೇ ? ನಾನು ಚುನಾಯಿತ ಮುಖ್ಯಮಂತ್ರಿ ಎಂದು ಕೇಜ್ರಿವಾಲ್ ಹೇಳಿದರು.

‘‘ವೆಚ್ಚ-ಪ್ರಯೋಜನದ ವಿಶ್ಲೇಷಣೆ ಬಗ್ಗೆ ಕೇಳಲು ನೀವು ಯಾರು ?’’ ಎಂದು ನಾನು ಅವರನ್ನು (ಲೆಫ್ಟಿನೆಂಟ್ ಗವರ್ನರ್) ಪ್ರಶ್ನಿಸಿದೆ. ಸಾರ್ವಜನಿಕರು ನನ್ನನ್ನು ಆಯ್ಕೆ ಮಾಡಿದರು ಎಂದು ಹೇಳಿದೆ. ಅವರು ರಾಷ್ಟ್ರಪತಿ ನನ್ನನ್ನು ಆಯ್ಕೆ ಮಾಡಿದರು ಎಂದು ತಿಳಿಸಿದರು. ಅದಕ್ಕೆ ನಾನು, ಬ್ರಿಟೀಷರು ವೈಸರಾಯಿಯನ್ನು ಆಯ್ಕೆ ಮಾಡಿದ ರೀತಿಯೇ ? ‘‘ಕೊಳಕು ಭಾರತೀಯರೇ ಹೇಗೆ ಆಡಳಿತ ನಡೆಸುವುದು ಎಂದು ನಿಮಗೆ ತಿಳಿದಿಲ್ಲ’’ ಎಂದು ವೈಸರಾಯಿಗಳು ಆಗಾಗ ಹೇಳುತ್ತಿದ್ದರು.

ಈಗ ನೀವು (ಲೆಫ್ಟಿನೆಂಟ್ ಗವರ್ನರ್) ‘‘ಕೊಳಕು ದಿಲ್ಲಿವಾಲಾಗಳೇ ಹೇಗೆ ಆಡಳಿತ ನಡೆಸುವುದು ಎಂದು ನಿಮಗೆ ತಿಳಿದಿಲ್ಲ’’ ಎಂದು ಹೇಳುತ್ತಿದ್ದೀರಿ ಎಂದು ಕೇಜ್ರಿವಾಲ್ ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರನ್ನು ತರಬೇತಿಗೆ ಫಿನ್ಲ್ಯಾಂಡ್ಗೆ ಕಳುಹಿಸುವ ದಿಲ್ಲಿ ಸರಕಾರದ ಯೋಜನೆಗೆ ಲೆಫ್ಟಿನೆಂಟ್ ಗವರ್ನರ್ ತಡೆ ಒಡ್ಡಿದೆ ಎಂದು ಕೇಜ್ರಿವಾಲ್ ಹಾಗೂ ಅವರ ಪಕ್ಷ ಆರೋಪಿಸಿದೆ. ಆದರೆ, ಈ ಆರೋಪವನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಬಲವಾಗಿ ನಿರಾಕರಿಸಿದ್ದಾರೆ. ತನಗೆ ಬೇಕಾಗಿರುವುದು ವೆಚ್ಚ-ಪ್ರಯೋಜನದ ವಿಶ್ಲೇಷಣೆ ಎಂದು ಅವರು ಹೇಳಿದ್ದಾರೆ. 

share
Next Story
X