ಆಕ್ಷೇಪಾರ್ಹ ಭಾಷಣ ಮಾಡಿದ್ದ ಉತ್ತರ ಪ್ರದೇಶ ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಕೋರಿದ್ದ ಅರ್ಜಿ ವಜಾ
ಹೊಸದಿಲ್ಲಿ: 2018ರ ರಾಜಸ್ಥಾನ ವಿಧಾನಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಅಲ್ವಾರ್ನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಆಕ್ಷೇಪಾರ್ಹ ಭಾಷಣ ಮಾಡಿದ್ದು, ಅವರ ವಿರು ಪ್ರಕರಣ ದಾಖಲಿಸಿಕೊಳ್ಳುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.
ನ್ಯಾ. ಬಿ.ಆರ್. ಗವಾಯಿ ಹಾಗೂ ನ್ಯಾ. ವಿಕ್ರಮ್ ನಾಥ್ ಅವರನ್ನೊಳಗೊಂಡಿದ್ದ ನ್ಯಾಯಪೀಠವು, ತಾನು ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿದ್ದು, ಇಂತಹ ಅರ್ಜಿಗಳು ದಿನಪತ್ರಿಕೆಗಳ ಮುಖಪುಟ ಸುದ್ದಿಗೆ ಮಾತ್ರ ಅರ್ಹ ಎಂದು ಅಭಿಪ್ರಾಯ ಪಟ್ಟು, ಅರ್ಜಿಯನ್ನು ವಜಾಗೊಳಿಸಿದೆ.
Next Story