Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಬಿಸಿ ಸಾಕ್ಷ್ಯಚಿತ್ರ: ನಿರ್ಬಂಧ...

ಬಿಬಿಸಿ ಸಾಕ್ಷ್ಯಚಿತ್ರ: ನಿರ್ಬಂಧ ಆದೇಶಕ್ಕೆ ಕಾರಣಗಳನ್ನು ಇನ್ನೂ ಬಹಿರಂಗಪಡಿಸದ ಕೇಂದ್ರ

24 Jan 2023 12:46 PM IST
share
ಬಿಬಿಸಿ ಸಾಕ್ಷ್ಯಚಿತ್ರ: ನಿರ್ಬಂಧ ಆದೇಶಕ್ಕೆ ಕಾರಣಗಳನ್ನು ಇನ್ನೂ ಬಹಿರಂಗಪಡಿಸದ ಕೇಂದ್ರ

ಹೊಸದಿಲ್ಲಿ: ಗುಜರಾತ್‌ನಲ್ಲಿ 2002 ರಲ್ಲಿ ನಡೆದ ಗಲಭೆಗಳಲ್ಲಿ ಆಗಿನ ಗುಜರಾತ್‌ ಸಿಎಂ ಆಗಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಪಾತ್ರವನ್ನು ಅವಲೋಕಿಸುವ ಬಿಬಿಸಿ (BBC) ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ಟ್ವಿಟರ್‌ ಮತ್ತು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಆ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ಆದೇಶಿಸಿದೆಯಾದರೂ ಈ ಕ್ರಮಕ್ಕೆ ಯಾವ ಕಾರಣಗಳನ್ನು ನೀಡಲಾಗಿದೆ ಎಂಬ ಕುರಿತು ಸರ್ಕಾರವಿನ್ನೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಗೊಳಿಸಿಲ್ಲ ಎಂದು ವರದಿಯಾಗಿದೆ.

ಸಾಕ್ಷ್ಯಚಿತ್ರದ ತುಣುಕುಗಳನ್ನು ಹಂಚಿಕೊಳ್ಳುವುದನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ನಿಯಮಗಳು 2021 ಅನ್ವಯ ಪ್ರದತ್ತವಾದ ತುರ್ತು ಅಧಿಕಾರವನ್ನು ಬಳಸಿದೆ. ಆದರೆ ಈ ನಿಯಮಗಳ ಪ್ರಕಾರ ನಿರ್ಬಂಧ ಆದೇಶಕ್ಕೆ ಕಾರಣವೇನೆಂದು ಸರ್ಕಾರ ಲಿಖಿತವಾಗಿ ತಿಳಿಸಬೇಕಿದೆ ಎಂದು ಕಾಮನ್ವೆಲ್ತ್‌ ಹ್ಯೂಮನ್‌ ರೈಟ್ಸ್‌ ಇನೀಶ್ಯೇಟಿವ್‌ ಅಭಿಪ್ರಾಯಪಟ್ಟಿದೆ.

ಮಾಹಿತಿ ಹಕ್ಕು ಕಾಯಿದೆಯನ್ವಯ ಈ ಸಂಸ್ಥೆಯ ನಿರ್ದೇಶಕ ವೆಂಕಟೇಶ್‌ ನಾಯಕ್‌  ಸರ್ಕಾರದ ಈ ಹಿಂದಿನ ನಿರ್ಬಂಧ ಆದೇಶಗಳ ಕುರಿತು ಮಾಹಿತಿ ಕೇಳಿದ್ದರೂ ವಾರ್ತಾ ಮತ್ತು ಪ್ರಸಾರ ಸಚಿವಾಲಯವು  ಆರ್‌ಟಿಐ ಕಾಯಿದೆಯ ಸೆಕ್ಷನ್‌ 8(1) (ಎ) ಅನ್ನು ಉಲ್ಲೇಖಿಸಿ ರಾಷ್ಟ್ರೀಯ ಸುರಕ್ಷತೆ ಕಾರಣಗಳಿಗಾಗಿ ಈ ಮಾಹಿತಿ ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು ಎಂದು ನಾಯಕ್‌ ತಿಳಿಸುತ್ತಾರೆ.

ಯಾವ ಆಧಾರದಲ್ಲಿ ಈ ರೀತಿ ನಿರ್ಬಂಧ ಆದೇಶಗಳನ್ನು ಹೊರಡಿಸಲಾಗುತ್ತದೆ ಎಂಬ ಕುರಿತೂ ಮಾಹಿತಿ ಹಂಚಿಕೊಳ್ಳಲು ಸರ್ಕಾರ ನಿರಾಕರಿಸಿದೆ ಎಂದು ಅವರು ಹೇಳುತ್ತಾರೆ.

ಈ ನಿಯಮಗಳ ಒಂದು ನಿಬಂಧನೆಯ ಪ್ರಕಾರ ಯಾವುದೇ ನಿರ್ದಿಷ್ಟ ವಿಷಯದ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣಗಳಿಂದ ಅಧಿಕೃತ ಅಧಿಕಾರಿಯ ಶಿಫಾರಸಿನಂತೆ  ಸಂಬಂಧಿತ ಪ್ಲಾಟ್‌ಫಾರ್ಮ್‌ಗಳಿಗೆ ನೋಟಿಸ್‌ ನೀಡದೆಯೇ  ನಿರ್ಬಂಧಿಸುವ ಅಧಿಕಾರವನ್ನು ಸರ್ಕಾರ ಹೊಂದಿದೆ.

ಕಾಮನ್ವೆಲ್ತ್‌ ಹ್ಯೂಮನ್‌ ರೈಟ್ಸ್‌ ಇನೀಶ್ಯೇಟಿವ್‌ ಸಂಸ್ಥೆಯು ಆರ್‌ಟಿಐ ಮೂಲಕ ಪಡೆದ ಒಂದು ಮಾಹಿತಿ ಪ್ರಕಾರ ಐಟಿ ಕಾಯಿದೆ 2000 ಅನ್ವಯ ಐಟಿ ನಿಯಮಗಳನ್ನು ಸಂಸದೀಯ ಸಮಿತಿಗಳು ಪರಿಶೀಲಿಸಬೇಕಿದ್ದರೂ ಹಾಗಾಗಿಲ್ಲ. 

ಇದನ್ನೂ ಓದಿ: ಜೋಶಿಮಠ ಭೂಕುಸಿತ ಶುರುವಾದಾಗಿನಿಂದ ಇದೇ ಪ್ರಥಮ ಬಾರಿಗೆ ಕುಸಿದ ಮನೆ

share
Next Story
X