Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಗುಜರಾತ್ ಗಲಭೆ ಪೂರ್ವಯೋಜಿತವಾಗಿತ್ತು’:...

‘ಗುಜರಾತ್ ಗಲಭೆ ಪೂರ್ವಯೋಜಿತವಾಗಿತ್ತು’: ಹಿಂಸಾಚಾರದ ಕುರಿತು ಬ್ರಿಟಿಷ್ ತನಿಖೆಯ ವರದಿ

25 Jan 2023 7:57 PM IST
share
‘ಗುಜರಾತ್ ಗಲಭೆ ಪೂರ್ವಯೋಜಿತವಾಗಿತ್ತು’: ಹಿಂಸಾಚಾರದ ಕುರಿತು ಬ್ರಿಟಿಷ್ ತನಿಖೆಯ ವರದಿ

ಹೊಸದಿಲ್ಲಿ: ಗುಜರಾತಿನಲ್ಲಿ 2002ರಲ್ಲಿ ಸಂಭವಿಸಿದ್ದ ಗಲಭೆಗಳ ಕುರಿತು ಬ್ರಿಟಿಷ್ ಸರಕಾರವು ನಡೆಸಿದ್ದ ತನಿಖೆಯ ವರದಿಯ ಪ್ರತಿಯು ತನಗೆ ಲಭ್ಯವಾಗಿದ್ದು, ಸಂಪೂರ್ಣ ಹಿಂಸಾಚಾರವು ಪೂರ್ವಯೋಜಿತವಾಗಿತ್ತು ಎನ್ನುವುದನ್ನು ಅದು ಬೆಟ್ಟು ಮಾಡಿದೆ ಎಂದು 'The Caravan' ಬಹಿರಂಗಗೊಳಿಸಿದೆ. ಇತ್ತೀಚಿನ ಬಿಬಿಸಿಯ (BBC) ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ನಲ್ಲಿ ಈ ವರದಿಯನ್ನು ಉಲ್ಲೇಖಿಸಲಾಗಿದೆ. ಹಿಂದು ರಾಷ್ಟ್ರವಾದಿ ಸಂಘಟನೆ ವಿಶ್ವ ಹಿಂದು ಪರಿಷತ್ (VHP) ಈ ಹಿಂಸಾಚಾರವನ್ನು ‘ಯೋಜಿಸಿತ್ತು, ಬಹುಶಃ ತಿಂಗಳುಗಳ ಮೊದಲೇ’ ಎಂದು ಹೇಳಿರುವ ವರದಿಯು, 2002, ಫೆ.27ರ ಗೋಧ್ರಾದಲ್ಲಿ ರೈಲು ಬೋಗಿ ದಹನವು ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನೆಪವನ್ನೊದಗಿಸಿತ್ತು. ಈ ಘಟನೆ ನಡೆದಿರದಿದ್ದರೂ ಅವರು ಅಂತಹುದೇ ಇನ್ನೊಂದು ನೆಪವನ್ನು ಕಂಡುಕೊಳ್ಳುತ್ತಿದ್ದರು ಎಂದು ಒತ್ತಿ ಹೇಳಿದೆ.

ಹಿಂಸಾಚಾರವು ಪೂರ್ವಯೋಜಿತವಾಗಿತ್ತು ಎನ್ನುವುದಕ್ಕೆ ಪುರಾವೆಗಳನ್ನು ತನಿಖಾ ವರದಿಯು ಉಲ್ಲೇಖಿಸಿದೆ. ಮುಸ್ಲಿಮರ ಮನೆಗಳು ಮತ್ತು ವ್ಯವಹಾರಗಳನ್ನು ಗುರಿಯಾಗಿಸಿಕೊಳ್ಳಲು ದಂಗೆಕೋರರು ಕಂಪ್ಯೂಟರೀಕೃತ ಪಟ್ಟಿಗಳನ್ನು ಬಳಸಿದ್ದರು ಎನ್ನುವುದನ್ನು ಪೊಲೀಸ್ ಸಂಪರ್ಕಗಳು ದೃಢಪಡಿಸಿವೆ. ಅಲ್ಪಸಂಖ್ಯಾತ ಮುಸ್ಲಿಮರ ಪಾಲುದಾರಿಕೆಯ ವ್ಯವಹಾರಗಳು ಸೇರಿದಂತೆ ಈ ಪಟ್ಟಿಗಳ ನಿಖರತೆ ಮತ್ತು ವಿವರಗಳು ಅವುಗಳನ್ನು ಮುಂಚಿತವಾಗಿ ಸಿದ್ಧಗೊಳಿಸಲಾಗಿತ್ತು ಎನ್ನುವುದನ್ನು ಸೂಚಿಸುತ್ತಿವೆ ಎಂದು ಅದು ಬೆಟ್ಟು ಮಾಡಿದೆ. ವಿಹಿಂಪ ನೇತೃತ್ವದಲ್ಲಿ ಹಿಂದು ಪ್ರದೇಶಗಳನ್ನು ಮುಸ್ಲಿಮ್ ಮುಕ್ತಗೊಳಿಸಿ ‘ಶುದ್ಧೀಕರಿಸುವುದು’ ಈ ಯೋಜನೆಯ ಹಿಂದಿನ ಉದ್ದೇಶವಾಗಿತ್ತು ಎಂದು ವರದಿಯು ಒತ್ತಿ ಹೇಳಿದೆ.

‘ಮುಖ್ಯಮಂತ್ರಿ ನರೇಂದ್ರ ಮೋದಿಯವರೇ ನೇರವಾಗಿ ಹೊಣೆಯಾಗಿದ್ದಾರೆ’ ಎಂದು ಹೇಳುವ ಮೂಲಕ ವರದಿಯು ಗುಜರಾತ್ ಸರಕಾರದ ಮೇಲೆ ದೋಷಾರೋಪ ಮಾಡಿದೆ.
ವಿಹಿಂಪ ಮತ್ತು ಅದರ ಮಿತ್ರ ಸಂಘಟನೆಗಳು ರಾಜ್ಯ ಸರಕಾರದ ಬೆಂಬಲದೊಂದಿಗೆ ಕಾರ್ಯಾಚರಿಸಿದ್ದವು. ರಾಜ್ಯ ಸರಕಾರವು ಸೃಷ್ಟಿಸಿದ್ದ ನಿರ್ಭೀತಿಯ ವಾತಾವರಣ ಇಲ್ಲದೇ ಅವರು ಅಷ್ಟೊಂದು ಹಾನಿಯನ್ನುಂಟು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಮುಖ್ಯಮಂತ್ರಿ ನರೇಂದ್ರ ಮೋದಿ ನೇರವಾಗಿ ಹೊಣೆಗಾರರಾಗಿದ್ದಾರೆ. ಅವರ ಕ್ರಮಗಳು ಕೇವಲ ರಾಜಕೀಯ ಲಾಭದ ಸಿನಿಕತನದ ಮೌಲ್ಯಮಾಪನದಿಂದ ನಿರ್ದೇಶಿಸಲ್ಪಟ್ಟಿರಲಿಲ್ಲ. ಬಿಜೆಪಿಯು 1995ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಅನುಸರಿಸಿಕೊಂಡು ಬಂದಿರುವ ಹಿಂದು ರಾಷ್ಟ್ರವಾದಿ ಅಜೆಂಡಾದ ಶಿಲ್ಪಿಯಾಗಿ ಮೋದಿ ವಿಹಿಂಪನ ಸೈದ್ಧಾಂತಿಕ ಪ್ರೇರಣೆಯಲ್ಲಿ ನಂಬಿಕೆಯನ್ನು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಹಿಂಸಾಚಾರದ ಭಾರೀ ಪ್ರಮಾಣದ ಕುರಿತು ಅವಲೋಕನಗಳನ್ನೂ ಮಾಡಿರುವ ವರದಿಯು, ಮುಸ್ಲಿಮ್ ಮಹಿಳೆಯರ ಅತ್ಯಾಚಾರದಲ್ಲಿ ಪೊಲೀಸರ ಪಾಲ್ಗೊಳ್ಳುವಿಕೆಯನ್ನು ಬೆಟ್ಟು ಮಾಡಿದೆ. ವಿಶ್ವಾಸಾರ್ಹ ಮಾನವ ಹಕ್ಕು ಕಾರ್ಯಕರ್ತರ ಸಂಪರ್ಕಗಳಿಂದ ಪಡೆದಿರುವ ಮಾಹಿತಿಗಳ ಆಧಾರದಲ್ಲಿ ಅಂದಾಜು 2,000 ಜನರು ಗಲಭೆಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಹಲವು ಪ್ರದೇಶಗಳಲ್ಲಿ ಹತ್ಯೆಗಳು ಮುಸ್ಲಿಮ್ ಮಹಿಳೆಯರ ವ್ಯಾಪಕ ಮತ್ತು ವ್ಯವಸ್ಥಿತ ಅತ್ಯಾಚಾರದ ಜೊತೆಯೇ ನಡೆದಿದ್ದವು, ಕೆಲವೊಮ್ಮೆ ಪೊಲೀಸರೂ ಅತ್ಯಾಚಾರಗಳನ್ನು ನಡೆಸಿದ್ದರು ಎಂದಿರುವ ವರದಿಯು, ಗಲಭೆಗಳನ್ನು ಅಡಗಿಸಲು ತಾವು ಕ್ರಮ ಕೈಗೊಳ್ಳುವುದನ್ನು ರಾಜ್ಯ ಸರಕಾರದ ಒತ್ತಡವು ನಿರ್ಬಂಧಿಸಿತ್ತು ಎನ್ನುವುದನ್ನು ಪೊಲೀಸ್ ಸಂಪರ್ಕಗಳು ಒಪ್ಪಿಕೊಂಡಿವೆ ಎಂದು ಹೇಳಿದೆ.

ಹೆಚ್ಚಿನ ಗುಜರಾತಿ ಭಾಷಿಕ ಮಾಧ್ಯಮಗಳು ಹಿಂಸಾಚಾರವನ್ನು ಭುಗಿಲೆಬ್ಬಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದವು. ಮುಸ್ಲಿಂ ವಿರೋಧಿ ಭಾವನೆಯನ್ನು ಉತ್ತೇಜಿಸುವ ವಿಷಪೂರಿತ ವದಂತಿಗಳು ಮತ್ತು ಅಪಪ್ರಚಾರವನ್ನು ಪ್ರಕಟಿಸುವ ಯಾವುದೇ ಅವಕಾಶವನ್ನು ಈ ಮಾಧ್ಯಮಗಳು ಬಿಟ್ಟಿರಲಿಲ್ಲ ಎಂದೂ ವರದಿಯು ಹೇಳಿದೆ.

ಇದನ್ನು ಓದಿ: ಜನರು ದೂರದರ್ಶನವನ್ನು ನಂಬದೇ ಇದ್ದರೂ, BBCಯನ್ನು ನಂಬುತ್ತಾರೆ: ಪ್ರಧಾನಿ ಮೋದಿಯ ಹಳೆಯ ವೀಡಿಯೊ ವೈರಲ್

share
Next Story
X