ಬಾಲಕನಿಗೆ ಲೈಂಗಿಕ ಕಿರುಕುಳ, ಕೊಲೆ: ವಿದ್ಯಾರ್ಥಿಯ ಬಂಧನ
ಗಂಜಮ್: ನಾಲ್ಕು ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಆತನ ಸಾವಿಗೆ ಕಾರಣನಾದ ಆರೋಪದಲ್ಲಿ 22 ವರ್ಷ ವಯಸ್ಸಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ನೆರೆಮನೆಯ ಟೆರೇಸ್ನಲ್ಲಿ ಬಾಲಕನ ರಕ್ತಸಿಕ್ತ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಗಳ ಪ್ರಕಾರ, ಆರೋಪಿ ಎಂಜಿನಿಯರಿಂಗ್ ವಿದ್ಯಾರ್ಥಿಯು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಬಂಧನದ ಭೀತಿಯಿಂದ ನಿರ್ಮಾಣಹಂತದಲ್ಲಿದ್ದ ಮನೆಯ ಕಬ್ಬಿಣದ ಬಾಗಿಲಿನಿಂದ ಬಾಲಕನ ತಲೆಯನ್ನು ಜಜ್ಜಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಬಳಿಕ ಪಲಾಯನ ಮಾಡಿದ್ದ ಆರೋಪಿಯನ್ನು ಅಸ್ಕಾ ಬಳಿ ಬಂಧಿಸಲಾಗಿದೆ ಎಂದು ಎಸ್ಡಿಪಿಓ ಶಂಕರ್ ಸಿಂಗ್ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬೀದರ್ ನ ಶಾ ರಶೀದ್ ಅಹ್ಮದ್ ಖಾದ್ರಿ ಯಾರು? ಅವರ ಸಾಧನೆ ಏನು?
Next Story