ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ
ಮಹಾಲ್: ಗಣರಾಜ್ಯೋತ್ಸವದ ಅಂಗವಾಗಿ ನಾಗಪುರದ ಆರೆಸ್ಸೆಸ್ (RSS) ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನಡೆಸಲಾಯಿತು.
ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜಸ್ಥಾನದ ರಾಜಧಾನಿ ಜೈಪುರಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ತೆರಳಿರುವುದರಿಂದ ನಾಗಪುರ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಉಪಸ್ಥಿತರಿರಲಿಲ್ಲ.
ಆರೆಸ್ಸೆಸ್ ಸ್ವಯಂಸೇವಕರು ಹಾಗೂ ಪ್ರಚಾರಕರೆದುರು ನಾಗಪುರದ ಮಹಾಲ್ ಪ್ರದೇಶದಲ್ಲಿರುವ ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ನಾಗಪುರ ಮಹಾನಗರ ಸಹ ಸಂಘಸಂಚಾಲಕ ಶ್ರೀಧರ್ ಗಾಡ್ಗೆ ತ್ರಿವರ್ಣ ಧ್ವಜವನ್ನು ಹಾರಿಸಿದರು.
Next Story