ಮುಸ್ಲಿಮರನ್ನು ಭಯೋತ್ಪಾದಕರನ್ನಾಗಿ ಬಿಂಬಿಸಿ ಅಣಕು ಕಾರ್ಯಾಚರಣೆಗಳನ್ನು ನಡೆಸಬೇಡಿ: ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ
-

PHOTO : Bombay High Court \ Wikimedia
ಮುಂಬೈ,ಫೆ.7: ಮುಂದಿನ ವಿಚಾರಣಾ ದಿನಾಂಕವಾದ ಫೆ.10ರವರೆಗೆ ಮುಸ್ಲಿಮರನ್ನು ಭಯೋತ್ಪಾದಕರನ್ನಾಗಿ ಬಿಂಬಿಸಿ ಅಣಕು ಕಾರ್ಯಾಚರಣೆಗಳನ್ನು ನಡೆಸದಂತೆ ಬಾಂಬೆ ಉಚ್ಚ ನ್ಯಾಯಾಲಯ(HIGH COURT OF BOMBAY)ದ ಔರಂಗಾಬಾದ್ ಪೀಠವು ಮಹಾರಾಷ್ಟ್ರ ಪೊಲೀಸರಿಗೆ ನಿರ್ದೇಶನ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಸೈಯದ್ ಉಸಾಮಾ(Syed Usama) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿಗಳಾದ ಮಂಗೇಶ ಪಾಟೀಲ್(Mangesh Patil) ಮತ್ತು ಎಸ್.ಜಿ.ಚಪಲಗಾಂವಕರ್(s. g. chapalgaonkar) ಅವರ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿದೆ.
ಪೊಲೀಸರು ನಡೆಸುವ ಅಣಕು ಕಾರ್ಯಾಚರಣೆಗಳಲ್ಲಿ ಭಯೋತ್ಪಾದಕ ಪಾತ್ರವನ್ನು ನಿರ್ವಹಿಸುವ ಸಿಬ್ಬಂದಿಗಳು ಮುಸ್ಲಿಮ್ ಪುರುಷರಂತೆ ಪೋಷಾಕುಗಳನ್ನು ತೊಡುತ್ತಾರೆ ಎಂದು ಉಸಾಮಾ ತನ್ನ ಅರ್ಜಿಯಲ್ಲಿ ವಾದಿಸಿದ್ದಾರೆ. ಅಣಕು ಕಾರ್ಯಾಚರಣೆಯ ಭಾಗವಾಗಿ ಅವರು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಾರೆ ಎಂದೂ ಉಸಾಮಾ ಆರೋಪಿಸಿದ್ದಾರೆ.
ಈ ಅಣಕು ಕಾರ್ಯಾಚರಣೆಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸರಕಾರ ಉದ್ದೇಶಪೂರ್ವಕವಾಗಿ ಮುಸ್ಲಿಮರನ್ನು ‘ಭಯೋತ್ಪಾದಕ ’ಎಂದು ತೋರಿಸುತ್ತಿರುವುದು ಮುಸ್ಲಿಮ್ ಸಮುದಾಯದ ವಿರುದ್ಧ ಅವರ ತಾರತಮ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಇದು ಭಯೋತ್ಪಾದಕರು ನಿರ್ದಿಷ್ಟ ಧರ್ಮವನ್ನು ಹೊಂದಿದ್ದಾರೆ ಎಂಬ ಸಂದೇಶವನ್ನು ರವಾನಿಸುತ್ತದೆ ಮತ್ತು ಪೊಲೀಸರ ಈ ಕೃತ್ಯವು ಮುಸ್ಲಿಮ್ ಸಮುದಾಯದ ಮಾನಹಾನಿಗೆ ಸಮನಾಗಿದೆ ಎಂದು ಅವರು ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.
ಫೆ.3ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ಪೀಠವು,ಅಣಕು ಕಾರ್ಯಾಚರಣೆಗಳನ್ನು ನಡೆಸಲು ಯಾವುದೇ ಮಾರ್ಗಸೂಚಿಯಿದ್ದರೆ ಅದನ್ನು ನ್ಯಾಯಾಲಯಕ್ಕೆ ತಿಳಿಸುವಂತೆ ರಾಜ್ಯ ಸರಕಾರವನ್ನು ಆದೇಶಿಸಿತು. ಈ ವಿಷಯದಲ್ಲಿ ಸೂಚನೆಗಳನ್ನು ಪಡೆದುಕೊಳ್ಳುವಂತೆ ಅದು ಪಬ್ಲಿಕ್ ಪ್ರಾಸಿಕ್ಯೂಟರ್ಗೂ ನಿರ್ದೇಶ ನೀಡಿತು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.