Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಕ್ಟೋರಿಯ ಗೌರಿ ಶಿಫಾರಸ್ಸಿನಲ್ಲಿ ಎಲ್ಲಾ...

ವಿಕ್ಟೋರಿಯ ಗೌರಿ ಶಿಫಾರಸ್ಸಿನಲ್ಲಿ ಎಲ್ಲಾ ಸಾಂದರ್ಭಿಕ ಅಂಶಗಳನ್ನು ಕೊಲೀಜಿಯಮ್ ಪರಿಗಣಿಸಿತ್ತು: ಸುಪ್ರೀಂ

11 Feb 2023 11:45 PM IST
share
ವಿಕ್ಟೋರಿಯ ಗೌರಿ ಶಿಫಾರಸ್ಸಿನಲ್ಲಿ ಎಲ್ಲಾ ಸಾಂದರ್ಭಿಕ ಅಂಶಗಳನ್ನು ಕೊಲೀಜಿಯಮ್ ಪರಿಗಣಿಸಿತ್ತು: ಸುಪ್ರೀಂ

ಹೊಸದಿಲ್ಲಿ, ಫೆ. 11: ವಕೀಲೆ ಲಕ್ಷ್ಮಣ ಚಂದ್ರ( Lakshman Chandra) ವಿಕ್ಟೋರಿಯ ಗೌರಿಯನ್ನು ಮದ್ರಾಸ್ ಹೈಕೋರ್ಟ್(Madras High Court) ನ್ಯಾಯಾಧೀಶೆಯಾಗಿ ಶಿಫಾರಸು ಮಾಡುವಾಗ ಸುಪ್ರೀಂ ಕೋರ್ಟ್(Supreme Court) ಕೊಲೀಜಿಯಮ್ ಎಲ್ಲಾ ಸಾಂದರ್ಭಿಕ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡಿತ್ತು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಗೌರಿಯನ್ನು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶೆಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 7ರಂದು ವಜಾಗೊಳಿಸಿತ್ತು. ಆ ವಿಚಾರಣೆಗೆ ಸಂಬಂಧಿಸಿದ ವಿವರವಾದ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನೀಡಿದೆ.

ಸುಪ್ರೀಂ ಕೋರ್ಟ್ ಎರಡು ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿರುವಂತೆಯೇ, ಫೆಬ್ರವರಿ 7ರಂದು ವಕೀಲೆ ಗೌರಿ ನ್ಯಾಯಾಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಭಾರತೀಯ ಜನತಾ ಪಕ್ಷದ ಸದಸ್ಯೆಯಾಗಿರುವ ಹಾಗೂ ಕ್ರೈಸ್ತರು ಮತ್ತು ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ನೀಡಿರುವ ವಿಕ್ಟೋರಿಯ ಗೌರಿಯನ್ನು ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಿಸುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ವಕೀಲರು ಮತ್ತು ಕಾನೂನು ಪರಿಣತರು ಟೀಕಿಸಿದ್ದಾರೆ.

ಕೊಲೀಜಿಯಮ್‌ನ ಶಿಫಾರಸನ್ನು ರದ್ದುಪಡಿಸಲು ಅಥವಾ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೊಲೀಜಿಯಮ್‌ಗೆ ಸೂಚನೆ ನೀಡಲು ನಮ್ಮ ನ್ಯಾಯಾಂಗ ಪರಾಮರ್ಶೆಯ ಅಧಿಕಾರವನ್ನು ಬಳಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ(Sanjiv Khanna) ಮತ್ತು ಬಿ.ಆರ್. ಗವಾಯಿ(B.R. Gavai) ಅವರನ್ನೊಳಗೊಂಡ ನ್ಯಾಯಪೀಠವೊಂದು ಶುಕ್ರವಾರ ಹೇಳಿತು. ‘‘ಇದು ಕಾನೂನಿನ ಉಲ್ಲಂಘನೆಯಾಗುತ್ತದೆ. ಯಾಕೆಂದರೆ ಇದು ಕೊಲೀಜಿಯಮ್‌ನ ನಿರ್ಧಾರವನ್ನು ಮೌಲ್ಯಮಾಪನಕ್ಕೆ ಒಳಪಡಿಸಿ ಆ ನಿರ್ಧಾರದ ಜಾಗಕ್ಕೆ ವೈಯಕ್ತಿಕ ಅಥವಾ ಖಾಸಗಿ ಅಭಿಪ್ರಾಯವನ್ನು ತಂದಂತಾಗುತ್ತದೆ’’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಗೌರಿ ನೇಮಕಾತಿಯನ್ನು ವಿರೋಧಿಸಿ ಕೊಲೀಜಿಯಮ್‌ಗೆ ಮನವಿಗಳನ್ನು ಸಲ್ಲಿಸಲಾಗಿತ್ತಾದರೂ, ತನ್ನ ಶಿಫಾರಸನ್ನು ಹಿಂದೆ ಪಡೆಯುವುದು ಸೂಕ್ತವಲ್ಲ ಎಂಬ ಅಭಿಪ್ರಾಯಕ್ಕೆ ಕೊಲೀಜಿಯಮ್ ಬಂದಿತ್ತು ಎನ್ನುವ ಅಂಶವನ್ನೂ ಸುಪ್ರೀಂ ಕೋರ್ಟ್ ಗಮನಿಸಿತು.

‘‘ನ್ಯಾಯಾಧೀಶರ ವರ್ತನೆಯು ಸ್ವಾತಂತ್ರವನ್ನು ಪ್ರತಿಫಲಿಸಬೇಕು ಹಾಗೂ ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿರಬೇಕು. ಪ್ರಜಾಪ್ರಭುತ್ವವನ್ನು ರಕ್ಷಿಸುವ ಮತ್ತು ಬಲಗೊಳಿಸುವ ಹಾಗೂ ಮಾನವಹಕ್ಕುಗಳು ಮತ್ತು ಕಾನೂನಿನ ಆಡಳಿತವನ್ನು ಎತ್ತಿಹಿಡಿಯವು ಕೆಲಸದಲ್ಲಿ ನ್ಯಾಯಾಂಗವು ಪ್ರಮುಖ ಪಾತ್ರವಹಿಸುವುದರಿಂದ ಇದು ಅಗತ್ಯವಾಗಿದೆ’’ ಎಂಬುದಾಗಿಯೂ ಸುಪ್ರೀಂ ಕೋರ್ಟ್ ಹೇಳಿತು.

share
Next Story
X