Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಜಿ ಪ್ರಮಾಣಪತ್ರದ ಕೊರತೆ ಜಿಎಸ್‌ಟಿ...

ಎಜಿ ಪ್ರಮಾಣಪತ್ರದ ಕೊರತೆ ಜಿಎಸ್‌ಟಿ ಪರಿಹಾರ ವಿಳಂಬಕ್ಕೆ ಕಾರಣ:ವಿತ್ತ ಸಚಿವೆ

13 Feb 2023 8:46 PM IST
share
ಎಜಿ ಪ್ರಮಾಣಪತ್ರದ ಕೊರತೆ ಜಿಎಸ್‌ಟಿ ಪರಿಹಾರ ವಿಳಂಬಕ್ಕೆ ಕಾರಣ:ವಿತ್ತ ಸಚಿವೆ

ಹೊಸದಿಲ್ಲಿ,ಫೆ.13: ಅಕೌಂಟಂಟ್ ಜನರಲ್ (ಎಜಿ)ರ ದೃಢೀಕೃತ ಪ್ರಮಾಣಪತ್ರದ ಅಲಭ್ಯತೆಯಿಂದಾಗಿ ಕೆಲವು ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಿಕೆಯಲ್ಲಿ ವಿಳಂಬವಾಗಿದೆ ಎಂದು ಸೋಮವಾರ ಸ್ಪಷ್ಟಪಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು,2017-18ರಿಂದ ಕೇರಳ ಒಂದೇ ಒಂದು ಪ್ರಮಾಣಪತ್ರವನ್ನು ಸಲ್ಲಿಸಿಲ್ಲ ಎಂದು ಬೆಟ್ಟು ಮಾಡಿದರು.

2022,ಮೇ 31ರವರೆಗೆ ಎಲ್ಲ ರಾಜ್ಯಗಳಿಗೆ ಪಾವತಿಸಬೇಕಿದ್ದ 86,912 ಕೋ.ರೂ.ಜಿಎಸ್‌ಟಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ ಅವರು,ಪರಿಹಾರವನ್ನು ಸಮಿತಿಯು ಬಿಡುಗಡೆ ಮಾಡುತ್ತದೆ,ಕೇಂದ್ರವಲ್ಲ ಎಂದು ಒತ್ತಿ ಹೇಳಿದರು.

ಸಂಸತ್ತಿನಲ್ಲಿ ಪೂರಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸೀತಾರಾಮನ್, ಕೇಂದ್ರ,ರಾಜ್ಯಗಳು ಮತ್ತು ಎಜಿ ನಡುವಿನ ಕಾನೂನಿಗನುಗುಣವಾಗಿ ಎಜಿ ಪ್ರಮಾಣೀಕರಣವು ಕಡ್ಡಾಯವಾಗಿದೆ ಮತ್ತು ಇದು ಒಪ್ಪಿತ ಪ್ರಕ್ರಿಯೆಯಾಗಿದೆ. ಅವುಗಳ ನಡುವೆ ಸಮಸ್ಯೆಯಿದ್ದರೆ ದೃಢೀಕೃತ ಪ್ರಮಾಣಪತ್ರವು ಕೇಂದ್ರವನ್ನು ತಲುಪುವುದು ವಿಳಂಬಗೊಳ್ಳುತ್ತದೆ ಎಂದು ತಿಳಿಸಿದರು.

ಎಜಿಯೊಂದಿಗೆ ವಿಷಯಗಳನ್ನು ಬಗೆಹರಿಸಿಕೊಳ್ಳಲು ರಾಜ್ಯಗಳು ಸ್ಪಲ್ಪ ಹೆಚ್ಚಿನ ದಕ್ಷತೆಯನ್ನು ಹೊಂದಿರಬೇಕು. ಕಾನೂನಿನಂತೆ ಎಜಿ ದೃಢೀಕೃತ ಪ್ರಮಾಣಪತ್ರವಿಲ್ಲದಿದ್ದರೆ ಪರಿಹಾರವನ್ನು ನೀಡಲಾಗುವುದಿಲ್ಲ ಎಂದ ಅವರು,ಎಜಿ ಪ್ರಮಾಣಪತ್ರವಿಲ್ಲದೆ,ಕೆಲವು ಮಿತಿಗಳನ್ನು ಮೀರಿ,ಮುಂದೆ ಸಾಗುವುದು ತನಗೆ ಕಷ್ಟವಾಗುತ್ತದೆ ಎಂದು ತಿಳಿಸಿದರು.

ಕೇರಳಕ್ಕೆ ತೀವ್ರ ತರಾಟೆ

ಕೇರಳ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡ ಸೀತಾರಾಮನ್, ಜಿಎಸ್‌ಟಿಯನ್ನು ಜಾರಿಗೊಳಿಸಿದಾಗಿನಿಂದ ರಾಜ್ಯ ಸರಕಾರವು ವಿತ್ತವರ್ಷ 2018ರಿಂದ 2021ರವರೆಗೆ ಒಂದೇ ಒಂದು ಎಜಿ ಪ್ರಮಾಣಪತ್ರವನ್ನು ಒದಗಿಸಿಲ್ಲ ಎಂದು ಹೇಳಿದರು.

ಎಜಿ ಪ್ರಮಾಣಪತ್ರವನ್ನು ಸಲ್ಲಿಸದಿದ್ದರೂ ಕೇಂದ್ರ ಸರಕಾರವು ಪರಿಹಾರವನ್ನು ಬಿಡುಗಡೆ ಮಾಡುತ್ತಿಲ್ಲವೆಂದು ನಿರಂತರವಾಗಿ ಆರೋಪಿಸಲಾಗುತ್ತಿದೆ ಎಂದು ಹೇಳಿದ ಅವರು, ಅಗತ್ಯವಿರುವುದನ್ನು ಮಾಡಲು ಮತ್ತು ಪ್ರಮಾಣಪತ್ರವನ್ನು ಒದಗಿಸಲು ರಾಜ್ಯ ಸರಕಾರವನ್ನು ಕೋರುವಂತೆ ಪೂರಕ ಪ್ರಶ್ನೆಯನ್ನು ಕೇಳಿದ್ದ ಕೇರಳ ಸಂಸದ ಎನ್.ಕೆ.ಪ್ರೇಮಚಂದ್ರನ್ ಅವರಿಗೆ ಸೂಚಿಸಿದರು.

share
Next Story
X