Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಐವರು ಮುಸ್ಲಿಮರನ್ನು...

ಗುಜರಾತ್: ಐವರು ಮುಸ್ಲಿಮರನ್ನು ಕಟ್ಟಿಹಾಕಿ ಥಳಿಸಿದ್ದು ಶಾಂತಿ ಸೌಹಾರ್ದತೆ ಕಾಪಾಡುವ ಕ್ರಮ ಎಂದು ಸಮರ್ಥಿಸಿದ ಎಸ್ಪಿ

22 Feb 2023 4:21 PM IST
share
ಗುಜರಾತ್: ಐವರು ಮುಸ್ಲಿಮರನ್ನು ಕಟ್ಟಿಹಾಕಿ ಥಳಿಸಿದ್ದು ಶಾಂತಿ ಸೌಹಾರ್ದತೆ ಕಾಪಾಡುವ ಕ್ರಮ ಎಂದು ಸಮರ್ಥಿಸಿದ ಎಸ್ಪಿ

ಅಹ್ಮದಾಬಾದ್: ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಕಳೆದ ವರ್ಷದ ಫೆಬ್ರವರಿಯಲ್ಲಿ ಸಾರ್ವಜನಿಕವಾಗಿ ಮುಸ್ಲಿಂ ವ್ಯಕ್ತಿಗಳನ್ನು ಥಳಿಸಿದ  ಘಟನೆಯನ್ನು ಸಮರ್ಥಿಸಿಕೊಂಡಿರುವ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಶಾಂತಿ ಸೌಹಾರ್ದತೆ ಕಾಪಾಡಲು ಈ ಕ್ರಮಕೈಗೊಳ್ಳಲಾಗಿದೆ ಎಂದಿದ್ದಾರೆ.

ಗುಜರಾತ್‌ ಹೈಕೋರ್ಟಿಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಶ್‌ ಕುಮಾರ್‌ ಗಢಿಯಾ ಹೇಳಿದ್ದಾರೆ.

ಗುಜರಾತಿನ ಖೇಡಾ ಜಿಲ್ಲೆಯ ಉಂಢೇಲಾ ಗ್ರಾಮದಲ್ಲಿ ಅಕ್ಟೋಬರ್‌ 3 ರ ರಾತ್ರಿ ಮಸೀದಿ ಸಮೀಪದ ಗರ್ಬಾ ನೃತ್ಯ ಸ್ಥಳದ ಮೇಲೆ ಮುಸ್ಲಿಂ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿತ್ತು ಎಂದು ಆರೋಪಿಸಲಾಗಿತ್ತು. ಈ ಘಟನೆಗೆ ಕಾರಣರೆಂದು ಹೇಳಲಾದ ಐದು ಮಂದಿ ಮುಸ್ಲಿಂ ವ್ಯಕ್ತಿಗಳಾದ ಝಹೀರ್‌ ಮಿಯಾ ಮಲಿಕ್, ಮಕ್ಸೂದ್‌ ಬನೂ ಮಲಿಕ್‌, ಸಹದ್ ಮಿಯಾ ಮಲಿಕ್‌, ಶಕೀಲ್‌ ಮಿಯಾ ಮಲಿಕ್‌ ಮತ್ತು ಶಹೀದ್ ರಾಜ್ ಮಲಿಕ್ ರನ್ನು ಮರುದಿನ ಮಾರ್ಗಮಧ್ಯೆ ಎಳೆದು ತಂದು ಕಂಬವೊಂದಕ್ಕೆ ಕಟ್ಟಿ ಪೊಲೀಸರು ಥಳಿಸಿದ್ದಾಗ ನೆರೆದಿದ್ದ ಜನರು ಹರ್ಷೋದ್ಗಾರ ಮಾಡಿದ್ದರು.

ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆಯೂ ಪೊಲೀಸರು ಆ ವ್ಯಕ್ತಿಗಳಿಗೆ ಹೇಳುತ್ತಿರುವುದು ವೀಡಿಯೋದಲ್ಲಿ ಕಾಣಿಸಿತ್ತು.

ಪೊಲೀಸರಿಂದ ಥಳಿತಕ್ಕೊಳಗಾದ ಐವರು ನಂತರ ಗುಜರಾತ್‌ ಹೈಕೋರ್ಟ್‌ ಕದ ತಟ್ಟಿ ತಾವು ಪೊಲೀಸ್‌ ದೌರ್ಜನ್ಯದ ಸಂತ್ರಸ್ತರೆಂದು ಹೇಳಿಕೊಂಡು 15 ಮಂದಿ ಪೊಲೀಸ್‌ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಇವರಲ್ಲಿ ಅಹ್ಮದಾಬಾದ್‌ ವಲಯದ ಐಜಿ, ಖೇಡಾ ಎಸ್ಪಿ, ಮಟರ್‌ ಪೊಲೀಸ್‌ ಠಾಣೆಯ 10 ಕಾನ್‌ಸ್ಟೇಬಲ್‌ಗಳು ಹಾಗೂ ಸ್ಥಘಳೀಯ ಕ್ರೈಂ ಬ್ರ್ಯಾಂಚಿನ ಒಬ್ಬ ಇನ್‌ಸ್ಪೆಕ್ಟರ್‌ ಹಾಗೂ ಇಬ್ಬರು ಎಸೈಗಳು ಸೇರಿದ್ದರು.

ರಾಜೇಂದ್ರ ಗಢಿಯಾ ಅವರು ಸಲ್ಲಿಸಿದ್ದ ಅಫಿಡವಿಟ್‌ಗಳ ಹೊರತಾಗಿ ಇಬ್ಬರು ಆರೋಪಿ ಪೊಲೀಸರು ಕೂಡ ಅಫಿಡವಿಟ್‌ ಸಲ್ಲಿಸಿದ್ದರು.

ಸಬ್‌ಇನ್‌ಸ್ಪೆಕ್ಟರ್‌ ಹೇತಲ್‌ಬೆನ್‌ ರಬರಿ ತಮ್ಮ ಅಫಿಡವಿಟ್‌ನಲ್ಲಿ ಘಟನೆಗೆ ಬೇಷರತ್‌ ಕ್ಷಮೆಯಾಚಿಸಿದ್ದರಲ್ಲದೆ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಮತೀಯ ಹಿಂಸಾಚಾರ ನಡೆಯದಂತೆ ತಡೆಯಲು ಈ ಕ್ರಮಕೈಗೊಳ್ಳಲಾಗಿತ್ತು ಎಂದಿದ್ದರು.

ಥಳಿತಕ್ಕೊಳಗಾದವರೊಬ್ಬರಿಗೆ 62 ವರ್ಷ ಎಂದು ಹೇಳಿ ಅರ್ಜಿದಾರರು ಅನುಕಂಪ ಗಿಟ್ಟಿಸಲು ಯತ್ನಿಸಿದ್ದರು ಹಾಗೂ ಆತ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂಬುದನ್ನು ಬಹಿರಂಗಪಡಿಸಿಲ್ಲ ಎಂದಿದ್ದರು.

ಇನ್ನೊಂದು ಅಫಿಡವಿಟ್‌ನಲ್ಲಿ ಇನ್‌ಸ್ಪೆಕ್ಟರ್‌ ಎ ವಿ ಪರ್ಮಾರ್‌  ನ್ಯಾಯಾಲಯಕ್ಕೆ ಮಾಹಿತಿ ನೀಡಿ ಅರ್ಜಿದಾರರು ಭಯ ಹಾಗೂ ಭೀತಿಯ ವಾತಾವರಣದಲ್ಲಿ ಗ್ರಾಮದಲ್ಲಿ ಸೃಷ್ಟಿಸಲು ಯತ್ನಿಸಿದ್ದರು ಎಂದು ಆರೋಪಿಸಿದ್ದರು.

ಡಿವೈಎಸ್ಪಿ ಒಬ್ಬರು ಈ ಪ್ರಕರಣದಲ್ಲಿ ಸಲ್ಲಿಸಿದ್ದ ಆಂತರಿಕ ವರದಿಯ ಆಧಾರದಲ್ಲಿ ದೈಹಿಕ ಹಲ್ಲೆ ಘಟನೆಯಲ್ಲಿ ಭಾಗಿಯಾಗಿದ್ದಾರೆಂದು ಹೊರನೋಟಕ್ಕೆ ಕಂಡುಬಂದ ಆರು ಆರೋಪಿ ಅಧಿಕಾರಿಗಳ ವಿರುದ್ಧ ಇಲಾಖಾ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು.

share
Next Story
X