ಕಾಂಗ್ರೆಸ್ಗೆ ಗುಡ್ಬೈ ಹೇಳಿದ ಆಂಧ್ರದ ಮಾಜಿ ಸಿಎಂ
ಹೊಸದಿಲ್ಲಿ: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
"ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು, ಪಕ್ಷವನ್ನು ಆಂಧ್ರಪ್ರದೇಶದಲ್ಲಿ ನಾಶಮಾಡಿದವರು ಇದೀಗ ಬಿಜೆಪಿಗಾಗಿ ಕಾಂಗ್ರೆಸ್ ತೊರೆಯುತ್ತಿದ್ದಾರೆ" ಎಂದು ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಮಾಣಿಕ್ಯಂ ಟಾಗೋರ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿರುವ ಕಿರಣ್ ಕುಮಾರ್, "ಭಾರತ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ನೀಡಿರುವ ರಾಜೀನಾಮೆಯನ್ನು ದಯವಿಟ್ಟು ಸ್ವೀಕರಿಸಿ" ಎಂದು ಬರೆದಿದ್ದಾರೆ.
ಆಂಧ್ರಪ್ರದೇಶವನ್ನು ಆಂಧ್ರ ಹಾಗೂ ತೆಲಂಗಾಣ ಎಂದು ವಿಭಜಿಸಿದ ಯುಪಿಎ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿ 2014ರಲ್ಲಿ ಕಿರಣ್ ಕುಮಾರ್ ರಾಜೀನಾಮೆ ನೀಡಿದ್ದರು.
Next Story