Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಲಿಂಗಿ ವಿವಾಹಗಳಿಗೆ ಮಾನ್ಯತೆ ವಿಚಾರ:...

ಸಲಿಂಗಿ ವಿವಾಹಗಳಿಗೆ ಮಾನ್ಯತೆ ವಿಚಾರ: ಎ.18 ರಂದು ಅಂತಿಮ ವಾದ-ಪ್ರತಿವಾದ ಮಂಡನೆ

ಇದೊಂದು ಅತ್ಯಂತ ಮಹತ್ವದ ವಿಚಾರ ಎಂದ ಸುಪ್ರೀಂ ಕೋರ್ಟ್‌

13 March 2023 5:50 PM IST
share
ಸಲಿಂಗಿ ವಿವಾಹಗಳಿಗೆ ಮಾನ್ಯತೆ ವಿಚಾರ: ಎ.18 ರಂದು ಅಂತಿಮ ವಾದ-ಪ್ರತಿವಾದ ಮಂಡನೆ
ಇದೊಂದು ಅತ್ಯಂತ ಮಹತ್ವದ ವಿಚಾರ ಎಂದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಭಾರತದಲ್ಲಿ ಸಲಿಂಗಿ ವಿವಾಹಗಳಿಗೆ ಕಾನೂನು ಮಾನ್ಯತೆ ಒದಗಿಸುವ ಕುರಿತಂತೆ ಅಂತಿಮ ವಾದ-ಪ್ರತಿವಾದಗಳನ್ನು ಎಪ್ರಿಲ್‌ 18 ರಂದು ಪಂಚ-ಸದಸ್ಯರ ಸಾಂವಿಧಾನಿಕ ಪೀಠ ಆಲಿಸಲಿದೆ ಎಂದು ಸುಪ್ರೀಂ ಕೋರ್ಟ್‌ ಇಂದು ಹೇಳಿದೆ.

ಈ ವಿಚಾರ ಕುರಿತಂತೆ ಯಾವುದೇ ನಿರ್ಧಾರ ಸಮಾಜದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್‌, "ಇದೊಂದು ಅತ್ಯಂತ ಮಹತ್ವದ ವಿಚಾರ" ಎಂದು ಬಣ್ಣಿಸಿದೆ.

ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ಮತ್ತು ಯುಟ್ಯೂಬ್‌ನಲ್ಲಿ ನೇರ ಸ್ಟ್ರೀಮಿಂಗ್‌ ಮಾಡಲಾಗುವುದು.

"ಈ ಕುರಿತಾದ ತೀರ್ಪು ಸಮಾಜದ ಮೇಲೆ ದೊಡ್ಡ ಪರಿಣಾಮ ಬೀರುವುದರಿಂದ, ಯಾರದ್ದೇ ವಾದ ಮಂಡನೆ ವೇಳೆ ಸಮಯ ಕಡಿತಗೊಳಿಸಬೇಡಿ," ಎಂದು ತ್ರಿಸದಸ್ಯ ಪೀಠ ಹೇಳಿದೆ

"ಇಲ್ಲಿ ಎತ್ತಲಾಗಿರುವ ವಿಚಾರಗಳನ್ನು ಈ ನ್ಯಾಯಾಲಯದ ಪಂಚ ಸದಸ್ಯರ ಪೀಠವು ಸಂವಿಧಾನದ 145 (3) ವಿಧಿಯನ್ನು ಪರಿಗಣಿಸಿ ಇತ್ಯರ್ಥಪಡಿಸುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆದುದರಿಂದ ಇದನ್ನು ಸಾಂವಿಧಾನಿಕ ಪೀಠದ ಮುಂದಿಡಬೇಕೆಂದು ಸೂಚಿಸುತ್ತೇವೆ," ಎಂದು ತ್ರಿಸದಸ್ಯ ನ್ಯಾಯಪೀಠ ಹೇಳಿದೆ.

ಭಾರತದ ಕುಟುಂಬ ಪದ್ಧತಿಯಾನುಸಾರ ಸಲಿಂಗಿ ವಿವಾಹ ಸರಿಯಾಗದು ಎಂದು ಕೇಂದ್ರ ಈ ಹಿಂದೆ ತನ್ನ ವಾದ ಮಂಡನೆಯಲ್ಲಿ ತಿಳಿಸಿತ್ತು. ಐಪಿಸಿಯ ಸೆಕ್ಷನ್‌ 377 ಅನ್ವಯ ಸಲಿಂಗ ಕಾಮವನ್ನು ಅಪರಾಧೀಕರಣದಿಂದ ಮುಕ್ತಗೊಳಿಸಲಾಗಿದೆಯಾದರೂ  ಅರ್ಜಿದಾರರು ಸಲಿಂಗಿ ವಿವಾಹಗಳು ಮೂಲಭೂತ ಹಕ್ಕು ಮತ್ತು ದೇಶದ ಕಾನೂನಿನಡಿಯಲ್ಲಿ ಮಾನ್ಯಗೊಳಿಸಬೇಕು ಎಂದು ಕೇಳಲು ಸಾಧ್ಯವಿಲ್ಲ ಎಂದು ಕೇಂದ್ರ ಹೇಳಿದೆ.

ಸಲಿಂಗಿ ವ್ಯಕ್ತಿಗಳು ಸಂಗಾತಿಗಳಾಗಿ ಜೊತೆಯಾಗಿ ವಾಸಿಸಿ ದೈಹಿಕ ಸಂಬಂಧ ಹೊಂದುವುದು ಭಾರತೀಯ ಕುಟುಂಬ ಪದ್ಧತಿಯ ಅನುಸಾರ ಸರಿಯಲ್ಲ ಹಾಗೂ ಪ್ರಸ್ತುತ ಕಾನೂನು ಚೌಕಟ್ಟಿನ ಕುರಿತಂತೆ ಎಲ್‌ಜಿಬಿಟಿಕ್ಯು+ ಜೋಡಿಗಳು ಮಂಡಿಸಿರುವ ವಾದಗಳನ್ನು ತಿರಸ್ಕರಿಸಬೇಕು ಎಂದು ಕೇಂದ್ರ ಹೇಳಿದೆ.

ಸಲಿಂಗಿ ವಿವಾಹಗಳನ್ನು ಮಾನ್ಯಗೊಳಿಸಬೇಕೆಂದು ಕೋರಿ ಕನಿಷ್ಠ ನಾಲ್ಕು ಸಲಿಂಗಿ ಜೋಡಿಗಳು ಇತ್ತೀಚೆಗೆ ನ್ಯಾಯಾಲಯದ ಮೊರೆ ಹೋಗಿವೆ.

share
Next Story
X