Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ: ಪೌರತ್ವ ಸಾಬೀತುಪಡಿಸಲಾಗದವರನ್ನು...

ಅಸ್ಸಾಂ: ಪೌರತ್ವ ಸಾಬೀತುಪಡಿಸಲಾಗದವರನ್ನು ರಾಜ್ಯದ ಅತ್ಯಂತ ದೊಡ್ಡ ಬಂಧನ ಕೇಂದ್ರಕ್ಕೆ ರವಾನೆ

13 March 2023 10:52 PM IST
share
ಅಸ್ಸಾಂ: ಪೌರತ್ವ ಸಾಬೀತುಪಡಿಸಲಾಗದವರನ್ನು ರಾಜ್ಯದ ಅತ್ಯಂತ ದೊಡ್ಡ ಬಂಧನ ಕೇಂದ್ರಕ್ಕೆ ರವಾನೆ

ಗುವಾಹಟಿ, ಮಾ.13: ಅಸ್ಸಾಮಿನಲ್ಲಿ ಎನ್ಆರ್ಸಿಯಡಿ ‘ಘೋಷಿತ ವಿದೇಶಿಯರು ’ಎಂದು ಗುರುತಿಸಲಾಗಿರುವ ಎಲ್ಲ ವ್ಯಕ್ತಿಗಳನ್ನು ರಾಜ್ಯದಲ್ಲಿಯ ಅತ್ಯಂತ ದೊಡ್ಡ ಬಂಧನ ಕೇಂದ್ರವಾಗಿರುವ ಗೋಪಾಲಪುರ ಜಿಲ್ಲೆಯ ಮಟಿಯಾ ಟ್ರಾನ್ಸಿಟ್ ಕ್ಯಾಂಪ್ಗೆ ಸ್ಥಳಾಂತರಿಸಲಾಗಿದೆ.

ವಿದೇಶಿಯರೆಂದು ಗುರುತಿಸಲ್ಪಟ್ಟಿರುವ ಮತ್ತು ಗಡಿಪಾರಿಗೆ ಕಾಯುತ್ತಿರುವ ಅಥವಾ ತಮ್ಮ ಪೌರತ್ವ ಹಕ್ಕುಗಳ ಇತ್ಯರ್ಥಕ್ಕೆ ಕಾಯುತ್ತಿರುವ ಜನರನ್ನು ಇರಿಸಲು ಮಟಿಯಾ ಟ್ರಾನ್ಸಿಟ್ ಕ್ಯಾಂಪ್ನ್ನು ಬಳಸಲಾಗುತ್ತಿದೆ. ಈ ಪೈಕಿ ಹೆಚ್ಚಿನವರು ತಾವು ಭಾರತೀಯ ಪ್ರಜೆಗಳೆಂದು ಹೇಳಿಕೊಳ್ಳುತ್ತಿದ್ದಾರೆ. ಅಸ್ಸಾಮಿನ ವಿದೇಶಿಯರ ಬಂಧನ ಕಾರ್ಯವಿಧಾನಗಳು ತಮ್ಮನ್ನು ಶಂಕಿತರೆಂದು ಭಾವಿಸಿರುವುದರಿಂದ ಅಥವಾ ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಕಷ್ಟು ದಾಖಲೆಗಳನ್ನು ಒದಗಿಸಲು ಸಾಧ್ಯವಾಗದ್ದಕ್ಕೆ  ತಮ್ಮನ್ನು ಇಲ್ಲಿ ಕೂಡಿ ಹಾಕಲಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ರಾಜ್ಯ ಸರಕಾರದ ಅಧಿಸೂಚನೆಯಂತೆ ಬಂಧನ ಕೇಂದ್ರಗಳನ್ನು ಈಗ ಟ್ರಾನ್ಸಿಟ್ ಕ್ಯಾಂಪ್ ಹೆಸರಿನಲ್ಲಿ ಕರೆಯಲಾಗುತ್ತಿದೆ.
87 ಬಂಧಿತರ ಇತ್ತೀಚಿನ ತಂಡವನ್ನು ಸಿಲ್ಚಾರ್ ಬಂಧನ ಕೇಂದ್ರದಿಂದ ಮಟಿಯಾ ಟ್ರಾನ್ಸಿಟ್ ಕ್ಯಾಂಪ್ಗೆ ಸ್ಥಳಾಂತರಿಸಲಾಗಿದೆ. ಎಲ್ಲ ವರ್ಗಾವಣೆ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅಸ್ಸಾಮಿನಲ್ಲಿಯ ಆರು ಬಂಧನ ಕೇಂದ್ರಗಳು ಅಸ್ತಿತ್ವವನ್ನು ಕಳೆದುಕೊಳ್ಳಲಿವೆ ಎಂದು ರಾಜ್ಯದ ಬಂದಿಖಾನೆಗಳ ಐಜಿ ಪುಬಾಲಿ ಗೋಹೈನ್ ಸುದ್ದಿಸಂಸ್ಥೆಗೆ ತಿಳಿಸಿದರು.

ಈ ಆರು ಬಂಧನ ಕೇಂದ್ರಗಳಿಂದ ಸ್ಥಳಾಂತರ ಪ್ರಕ್ರಿಯೆ ಜ.27ರಂದು ಆರಂಭಗೊಂಡಿತ್ತು. ಪ್ರಸಕ್ತ ಮಟಿಯಾ ಕ್ಯಾಂಪ್ನಲ್ಲಿ 217 ಘೋಷಿತ ವಿದೇಶಿಯರಿದ್ದಾರೆ. ನ್ಯಾಯಾಲಯದ ತೀರ್ಪುಗಳು ಮತ್ತು ಗಡಿಪಾರಿನೊಂದಿಗೆ ಈ ಸಂಖ್ಯೆ ಆಗಾಗ್ಗೆ ಬದಲಾಗುತ್ತಿರುತ್ತದೆ. ಮೂರು ದಿನಗಳ ಹಿಂದೆ ಮೂವರು ಬಾಂಗ್ಲಾದೇಶಿಗಳನ್ನು ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ  ಎಂದು ಗೋಪಾಲಪುರ ಜಿಲ್ಲಾಧಿಕಾರಿ ಖನೀಂದ್ರ ಚೌಧುರಿ ತಿಳಿಸಿದರು.

share
Next Story
X