ಉತ್ತರ ಪ್ರದೇಶ: ಅಭಿವೃದ್ಧಿ ಕೆಲಸ ಕುರಿತು ಸಚಿವೆಯನ್ನು ಪ್ರಶ್ನಿಸಿದ ಪತ್ರಕರ್ತನನ್ನು ಬಂಧಿಸಿದ ಪೊಲೀಸರು
-

Photo: Twitter/@Benarasiyaa
ಲಕ್ನೋ: ಉತ್ತರ ಪ್ರದೇಶದ (Uttar Pradesh) ಸಂಭಲ್ ಎಂಬಲ್ಲಿ ಯುಟ್ಯೂಬ್ ನ್ಯೂಸ್ ಚಾನಲ್ ನಡೆಸುವ ವ್ಯಕ್ತಿಯೊಬ್ಬನನ್ನು ಸ್ಥಳೀಯ ಬಿಜೆಪಿ (BJP) ನಾಯಕನ ದೂರಿನ ಆಧಾರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಚಿವರೊಬ್ಬರ ಕಾರ್ಯಕ್ರಮದ ವೇಳೆ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ನಡೆಸಿದ್ದಾರೆ ಹಾಗೂ ತನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭಂ ರಾಘವ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಪತ್ರಕರ್ತ (Journalist) ಸಂಜಯ್ ರಾಣಾ ಅವರನ್ನು ಬಂಧಿಸಲಾಗಿದೆ ಎಂದು indianexpress.com ವರದಿ ಮಾಡಿದೆ.
ಮಾರ್ಚ್ 11 ರಂದು ರಾಜ್ಯದ ಮಾಧ್ಯಮಿಕ ಶಿಕ್ಷಣ ಸಚಿವೆ ಗುಲಾಬ್ ದೇವಿ ಅವರು ಬುಧ್ನಗರ್ ಖಂಡ್ವಾ ಗ್ರಾಮದಲ್ಲಿ ಚೆಕ್ ಡ್ಯಾಂ ಶಂಕುಸ್ಥಾಪನೆಗೆಂದು ಆಗಮಿಸಿದ್ದರು. ಈ ಸಂದರ್ಭ ರಾಣಾ ಅವರು ಸಚಿವೆಗೆ ಆಕೆ ಹಿಂದಿನ ವಿಧಾನಸಭಾ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಇರುವ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದರು.
ಈ ಕಾರ್ಯಕ್ರಮದ ನಂತರ ಶುಭಂ ರಾಘವ್ ಅವರು ಚಂದೌಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ನಡೆಸದಂತೆ ಕೇಳಿಕೊಂಡಿದ್ದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ್ದರು ಎಂದು ರಾಘವ್ ಆರೋಪಿಸಿದ್ದರು.
ಪತ್ರಕರ್ತನನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿರುವ ರಾಣಾ ತಾವು ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಪ್ರಶ್ನೆ ಕೇಳಿದ್ದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ವ್ಯಕ್ತಿಗೆ ಜಾಮೀನು ಸಿಕ್ಕರೂ ಜೈಲುಪಾಲು; ಕಾರಣವೇನು ಗೊತ್ತೇ?
In UP's Sambhal, Sanjay Rana, a reporter with a Youtube channel confronted UP govt MoS Gulab Devi with promises of development as against reality at a function on March 11. An FIR was registered and Rana was arrested based on the complaint of genel sec of BJYM. pic.twitter.com/IwkphNjX8T
— Piyush Rai (@Benarasiyaa) March 13, 2023
This is Sanjay Rana after the arrest. Not ready to concede an inch of his courage against the might of the state. pic.twitter.com/Ak4mVgPyn5
— Piyush Rai (@Benarasiyaa) March 13, 2023
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.