ಸ್ವಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಕಾರ್ಯಕ್ರಮದಲ್ಲಿ 36 ಮಂದಿಯ ಚಿನ್ನಾಭರಣ ಕಳವು
-

ಸ್ವಘೋಷಿತ ದೇವಮಾನವ ಧೀರೇಂದ್ರ ಕೃಷ್ಣ
ಮುಂಬೈ: ಸ್ವಯಂಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಅವರು ಮೀರಾ ರಸ್ತೆಯಲ್ಲಿನ ಸಲಸರ್ ಕೇಂದ್ರ ಉದ್ಯಾನವನದಲ್ಲಿ ಶನಿವಾರದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಕಾರ್ಯಕ್ರಮದಲ್ಲಿ ಅವರ 36 ಹಿಂಬಾಲಕರ ಚಿನ್ನಾಭರಣಗಳು ಕಳವಾಗಿರುವ ಘಟನೆ ನಡೆದಿದೆ ಎಂದು hindustantimes.com ವರದಿ ಮಾಡಿದೆ.
ಕಳವಾಗಿರುವ ಚಿನ್ನಾಭರಣಗಳ ಮೌಲ್ಯ ತೀರಾ ದುಬಾರಿಯಾಗಿದ್ದು, ಅವುಗಳ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಮೀರಾ ರಸ್ತೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ನೆರೆದಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲುಂಟಾಗಿ, ಓರ್ವ ಮಹಿಳೆ ಗಾಯಗೊಂಡಿದ್ದಾರೆ. ಇಷ್ಟು ದೊಡ್ಡ ಜನಸಂದಣಿಯನ್ನು ನಿಭಾಯಿಸುವಲ್ಲಿ ವಿಫಲವಾಗಿರುವುದರಿಂದ ಇಂತಹ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಇದರ ಬೆನ್ನಿಗೇ ರವಿವಾರದ ಕಾರ್ಯಕ್ರಮಕ್ಕೆ ಪೊಲೀಸರು ಪ್ರವೇಶ ದ್ವಾರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದರು. ಕಾರ್ಯಕ್ರಮದ ಸ್ಥಳದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉದ್ಭವವಾಗಿತ್ತು. ಹೀಗಿದ್ದೂ, ಅಲ್ಲಿ ನೆರೆದಿದ್ದ ಜನರಿಗೆ ಯಾವುದೇ ಗಂಭೀರ ಗಾಯಗಳಾಗದಂತೆ ಅವರ ಗಮನವನ್ನು ಬೇರೆಡೆಗೆ ತಿರುಗಿಸುವಲ್ಲಿ ಯಶಸ್ವಿಯಾದೆವು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಿನ್ನಾಭರಣ ಕಳವು ಕುರಿತು ದೂರು ದಾಖಲಿಸಿರುವವರ ಪೈಕಿ ಒಬ್ಬರಾದ ಮೀರಾ ರಸ್ತೆಯ ನಿವಾಸಿ ಸುನೀತಾ ಗೌಳಿ, "ನನ್ನ ಎರಡು ವರ್ಷದ ಮಗು ಹಲವಾರು ದಿನಗಳಿಂದ ಅಸ್ವಸ್ಥಗೊಂಡಿತ್ತು. ನಾನು ಶಾಸ್ತ್ರಿಯವರ ಕಾಯಿಲೆಗಳನ್ನು ತಪಾಸಣೆ ಮಾಡಿ ಗುಣಪಡಿಸುವ ಹಲವಾರು ವಿಡಿಯೊಗಳನ್ನು ನನ್ನ ಮೊಬೈಲ್ನಲ್ಲಿ ನೋಡಿದ್ದೆ. ಹೀಗಾಗಿ ನನ್ನ ಮಗಳ ಹೆಸರನ್ನು ಚೀಟಿಯಲ್ಲಿ ಬರೆಯಲು ನಿರ್ಧರಿಸಿದೆ. ನಾನು ನನ್ನ ಮಗಳ ಹೆಸರನ್ನು ಬಾಬಾ ಆಯ್ಕೆ ಮಾಡಿ, ಆಕೆಯ ಕಾಯಿಲೆಯನ್ನು ಗುಣಪಡಿಸುತ್ತಾರೆ ಎಂಬ ವಿಶ್ವಾಸ ಹೊಂದಿದ್ದೆ. ಅದರ ಬದಲು ನನ್ನ ಬಳಿಯಿದ್ದ ಒಂದೇ ಒಂದು ಚಿನ್ನಾಭರಣವಾದ ತಾಳಿಯ ಕಳವಾಗಿದೆ" ಎಂದು ಹೇಳಿದ್ದಾರೆ.
ಘಟನೆಯ ಕುರಿತು ಸಂಘಟಕರು ಈವರೆಗೆ ಯಾವುದೇ ವಿವರಣೆ ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಮೀರಾ ರಸ್ತೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು, "ನಾವು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಶಂಕಿತರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ನಾವು ಕಳವು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ" ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಶಾಂತಾಬೆನ್ ಮೀಠಾಲಾಲ್ ಜೈನ್ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಕೆಲವು ಮೂಢನಂಬಿಕೆ ವಿರೋಧಿ ಸಂಘಟನೆಗಳು ವಿರೋಧಿಸಿದ್ದವು. ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಈ ಸಂಘಟನೆಗಳ ಗುಂಪು ಶುಕ್ರವಾರ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಿದ್ದವು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.