Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿಕಿತ್ಸೆಗೆ ತಗಲುತ್ತಿದ್ದ ಅತಿಯಾದ...

ಚಿಕಿತ್ಸೆಗೆ ತಗಲುತ್ತಿದ್ದ ಅತಿಯಾದ ವೆಚ್ಚದಿಂದ ನೊಂದು ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆಗೈದ ಯುವಕ

22 March 2023 12:11 PM IST
share
ಚಿಕಿತ್ಸೆಗೆ ತಗಲುತ್ತಿದ್ದ ಅತಿಯಾದ ವೆಚ್ಚದಿಂದ ನೊಂದು ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆಗೈದ ಯುವಕ

ಹೊಸದಿಲ್ಲಿ: ತನ್ನ ಆರೋಗ್ಯ ಸಮಸ್ಯೆಯ ಚಿಕಿತ್ಸೆಗೆ ತಗಲುತ್ತಿದ್ದ ಅತಿಯಾದ ವೆಚ್ಚದಿಂದ ಬೇಸತ್ತ 24 ವರ್ಷದ ಯುವಕನೊಬ್ಬ ಹೋಟೆಲ್‌ ಕೊಠಡಿಯೊಂದರಲ್ಲಿ ಸಿಲಿಂಡರ್‌ ಒಂದನ್ನು ಬಳಸಿಕೊಂಡು ಆಮ್ಲಜನಕ ಓವರ್‌ಡೋಸ್‌ ಮಾಡಿಕೊಂಡು ಆತ್ಮಹತ್ಯೆಗೈದ ಘಟನೆ ರಾಜಧಾನಿಯಿಂದ ವರದಿಯಾಗಿದೆ.

ಮೃತ ಯುವಕನನ್ನು ನಿತೇಶ್‌ ಎಂದು ಗುರುತಿಸಲಾಗಿದೆ. ಉತ್ತರ ದಿಲ್ಲಿಯ ಆದರ್ಶ್‌ ನಗರ್‌ ಪ್ರದೇಶದ ಹೋಟೆಲ್‌ ಒಂದರಲ್ಲಿ ಮಂಗಳವಾರ ಕೊಠಡಿ ಪಡೆದುಕೊಂಡಿದ್ದ ನಿತೇಶ್‌ ತನ್ನೊಂದಿಗೆ ಸಣ್ಣ ಚೀಲವೊಂದನ್ನು ಕೊಠಡಿಗೆ ಒಯ್ದಿದ್ದ. ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಸುತ್ತಿಕೊಂಡು ಆತನ ಮೃತದೇಹ ಪತ್ತೆಯಾಗಿತ್ತು. ಆ ಪ್ಲಾಸ್ಟಿಕ್‌ ಚೀಲದೊಳಗೆ ಒಂದು ಟ್ಯೂಬ್‌ ಇದ್ದರೆ ಅದು ಸಣ್ಣ ಆಕ್ಸಿಜನ್‌ ಸಿಲಿಂಡರ್‌ ಒಂದಕ್ಕೆ ಸಂಪರ್ಕ ಹೊಂದಿತ್ತು.

ಆತಿಯಾಗಿ ಆಮ್ಲಜನಕ ಪಡೆದುಕೊಂಡಾಗ ಅದು ಹೃದಯ ಬಡಿತವನ್ನು ಅಪಾಯಕಾರಿಯಾಗಿ ಕಡಿಮೆಗೊಳಿಸಿ ಆಕ್ಸಿಜನ್‌ ಪಾಯ್ಸನಿಂಗ್‌ಗೆ ಕಾರಣವಾಗುತ್ತದೆ.

ಹೋಟೆಲ್‌ ಕೊಠಡಿಯಲ್ಲಿ  ಸುಸೈಡ್‌ ನೋಟ್‌ ಒಂದು ಪತ್ತೆಯಾಗಿದೆ. ಅದರಲ್ಲಿ ತನ್ನ ದೀರ್ಘಕಾಲೀನ ಕಾಯಿಲೆ, ಆಸ್ಪತ್ರೆ ವೆಚ್ಚದ ಕುರಿತು ಉಲ್ಲೇಖಿಸಲಾಗಿತ್ತಲ್ಲದೆ ಹೆತ್ತವರು ತನ್ನ ಚಿಕಿತ್ಸೆಗಾಗಿ ಇನ್ನಷ್ಟು ವೆಚ್ಚ ಮಾಡುವ ಮನಸ್ಸಿನಲ್ಲದೆ ಜೀವನ ಅಂತ್ಯಗೊಳಿಸಲು ನೋವಿಲ್ಲದ ವಿಧಾನಗಳಿಗಾಗಿ ಆನ್‌ಲೈನ್‌ನಲ್ಲಿ ಹುಡುಕಿದ್ದಾಗಿ ಆತ ಬರೆದಿದ್ದಾನೆ.

ಆನ್‌ಲೈನ್‌ನಲ್ಲಿ ಈ ಆಕ್ಸಿಜನ್‌ ವಿಧಾನ ಕಂಡುಕೊಂಡು ಆ ಕುರಿತು ಹಲವು ವೀಡಿಯೋಗಳನ್ನೂ ಆತ ವೀಕ್ಷಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್:‌ 100 ಕ್ಕೂ ಅಧಿಕ ಎಫ್‌ಐಆರ್‌, 6 ಮಂದಿಯನ್ನು ಬಂಧಿಸಿದ ದಿಲ್ಲಿ ಪೊಲೀಸ್

share
Next Story
X