ಉತ್ತರಾಖಂಡ: ಕಂದಕಕ್ಕೆ ಬಿದ್ದ ಬಸ್, 22 ಮಂದಿಗೆ ಗಾಯ
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ರವಿವಾರ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಸ್ಸೂರಿ-ಡೆಹ್ರಾಡೂನ್ ರಸ್ತೆಮಾರ್ಗದಲ್ಲಿ ಬಸ್ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ನಂತರ ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸ್, ಅಗ್ನಿಶಾಮಕ ದಳ ಹಾಗೂ ಆಂಬುಲೆನ್ಸ್ ನಿಯೋಜಿಸಲಾಗಿದೆ ಎಂದು ಸುದ್ದಿಸಂಸ್ಥೆ ANI ಟ್ವೀಟಿಸಿದೆ.
"ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ ಹಾಗೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಮಸ್ಸೂರಿ ಪೊಲೀಸರು ತಿಳಿಸಿದ್ದಾರೆ.
ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Uttarakhand | Many feared injured after a roadways bus lost control and fell off the gorge on Mussoorie-Dehradun route. Rescue operation underway. Police, fire service team & ambulance on the spot.
— ANI UP/Uttarakhand (@ANINewsUP) April 2, 2023
More Details awaited. pic.twitter.com/LZWvg3riML