Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ನ್ಯಾಯದ ಕೊಲೆಯಾಗುತ್ತಿದೆ:...

ಸಾಮಾಜಿಕ ನ್ಯಾಯದ ಕೊಲೆಯಾಗುತ್ತಿದೆ: ಕರ್ನಾಟಕದ ಮೀಸಲಾತಿ ನೀತಿ ಟೀಕಿಸಿದ ಎಂ.ಕೆ.ಸ್ಟಾಲಿನ್

4 April 2023 10:43 AM IST
share
ಸಾಮಾಜಿಕ ನ್ಯಾಯದ ಕೊಲೆಯಾಗುತ್ತಿದೆ: ಕರ್ನಾಟಕದ ಮೀಸಲಾತಿ ನೀತಿ ಟೀಕಿಸಿದ ಎಂ.ಕೆ.ಸ್ಟಾಲಿನ್

ಚೆನ್ನೈ: ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯದ ಕೊಲೆಯಾಗುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ  ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್(MK Stalin) ಅವರು ಬಸವರಾಜ ಬೊಮ್ಮಾಯಿ ಸರಕಾರದ ಹೊಸ ಮೀಸಲಾತಿ ನೀತಿಯನ್ನು ತರಾಟೆಗೆ ತೆಗೆದುಕೊಂಡರು.

 ಸಾಮಾಜಿಕ ನ್ಯಾಯಕ್ಕಾಗಿ ಅಖಿಲ ಭಾರತ ಒಕ್ಕೂಟದ ಮೊದಲ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರಸ್ತುತ, ಬಿಜೆಪಿಗೆ ಯಾರು ಮತ ಹಾಕುತ್ತಾರೆ ಹಾಗೂ  ಯಾರು ಇಲ್ಲ ಎಂಬ ಆಧಾರದ ಮೇಲೆ ಹೆಚ್ಚು ಮೀಸಲಾತಿ ನೀಡಲಾಗುತ್ತಿದೆ ಎಂದು ಸ್ಟಾಲಿನ್  ಅಭಿಪ್ರಾಯಪಟ್ಟರು.

“ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಕರ್ನಾಟಕದಲ್ಲಿ ಏನು ಮಾಡಲಾಗಿದೆ ಎಂಬುದು ನಿಮಗೆಲ್ಲರಿಗೂ ತಿಳಿದಿರಬಹುದು. ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ಹಿಂಪಡೆಯಲಾಯಿತು. ಅವರನ್ನು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (ಇಡಬ್ಲ್ಯು ಎಸ್) ವರ್ಗಾಯಿಸಲಾಯಿತು. ಮುಸಲ್ಮಾನರಿಗೆ ಇದ್ದ ಮೀಸಲಾತಿಯನ್ನು ವಿಭಜಿಸಿ ಇನ್ನೆರಡು ಸಮುದಾಯಗಳಿಗೆ ನೀಡಿ ಅವರ ನಡುವೆ ಬಿರುಕು ಮೂಡಿಸಿದೆ. ಅಂತೆಯೇ, ಪರಿಶಿಷ್ಟ ಜಾತಿಗಳ ನಡುವೆಯೂ ಪಕ್ಷಪಾತವನ್ನು ತೋರಿಸಲಾಗಿದೆ. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ಮಾಡಲಾಗಿದೆ. ಬಿಜೆಪಿಗೆ ಮತ ಹಾಕುವವರು ಹಾಗೂ  ಮತ ಹಾಕದವರು ಎಂಬ ಕಾರಣಕ್ಕೆ ವರ್ಗೀಕರಣ ಮಾಡಲಾಗಿದೆ. ಕರ್ನಾಟಕದಲ್ಲಿ ಸ್ಪಷ್ಟವಾಗಿ ಸಾಮಾಜಿಕ ನ್ಯಾಯದ ಕೊಲೆಯಾಗುತ್ತಿದೆ’’ ಎಂದು ಸ್ಟಾಲಿನ್ ಹೇಳಿದ್ದಾರೆ.

"ಸಾಮಾಜಿಕ ನ್ಯಾಯವನ್ನು ಸಾಧಿಸುವ ಹೋರಾಟವು ಎಲ್ಲಾ ರಾಜ್ಯಗಳಿಗೆ ಸಂಬಂಧಿಸಿದೆ. ಪ್ರತಿಯೊಂದು ರಾಜ್ಯದಲ್ಲಿನ ವರ್ಗ ಹಾಗೂ ಜಾತಿಗಳ ಆಧಾರದ ಮೇಲೆ ಸಮಸ್ಯೆಗಳ ಮಟ್ಟದಲ್ಲಿ ವ್ಯತ್ಯಾಸಗಳಿರಬಹುದು. ಆದರೆ ಸಮಸ್ಯೆಯ ತಿರುಳು ಒಂದೇ ಆಗಿರುತ್ತದೆ.  ಅಧಿಕ ತಾರತಮ್ಯ, ಬಹಿಷ್ಕಾರ, ಅಸ್ಪೃಶ್ಯತೆ ಹಾಗೂ  ಗುಲಾಮಗಿರಿ, ಅನ್ಯಾಯ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಈ ವಿಷಗಳನ್ನು ಗುಣಪಡಿಸುವ ಔಷಧವೆಂದರೆ ಸಾಮಾಜಿಕ ನ್ಯಾಯ" ಎಂದು ಸ್ಟಾಲಿನ್ ಹೇಳಿದರು.

share
Next Story
X