ಜೈಲಿನಲ್ಲಿರುವ ಆಪ್ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ ಜಾಮೀನು ನಿರಾಕರಿಸಿದ ದಿಲ್ಲಿ ಹೈಕೋರ್ಟ್
ಹೊಸದಿಲ್ಲಿ: ಜಾರಿ ನಿರ್ದೇಶನಾಲಯ (ಈಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆಪ್ ಮಾಜಿ ಸಚಿವ ಸತ್ಯೇಂದ್ರ ಜೈನ್(Satyendar Jain) ಅವರಿಗೆ ದಿಲ್ಲಿ ಹೈಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಜೈನ್ ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಸಾಕ್ಷ್ಯವನ್ನು ಹಾಳುಮಾಡಬಹುದು ಎಂದು ಹೇಳಿದೆ.
ಕಳೆದ ವರ್ಷ ಮೇ 30 ರಂದು ಈಡಿಯಿಂದ ಬಂಧಿಸಲ್ಪಟ್ಟ ಸತ್ಯೇಂದ್ರ ಜೈನ್ ಕಳೆದ ವರ್ಷ ನವೆಂಬರ್ನಲ್ಲಿ ವಿಚಾರಣಾ ನ್ಯಾಯಾಲಯವು ತನ್ನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ಹೈಕೋರ್ಟ್ಗೆ ಮೊರೆ ಹೋಗಿದ್ದರು.
Next Story