Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶ ಕಟ್ಟಿದವರಿಗೆ ಅವಮಾನ: ಸಾವರ್ಕರ್‌...

ದೇಶ ಕಟ್ಟಿದವರಿಗೆ ಅವಮಾನ: ಸಾವರ್ಕರ್‌ ಜನ್ಮದಿನದಂದು ನೂತನ ಸಂಸತ್‌ ಉದ್ಘಾಟನೆಗೆ ವಿಪಕ್ಷಗಳು ಕಿಡಿ

20 May 2023 12:14 PM IST
share
ದೇಶ ಕಟ್ಟಿದವರಿಗೆ ಅವಮಾನ: ಸಾವರ್ಕರ್‌ ಜನ್ಮದಿನದಂದು ನೂತನ ಸಂಸತ್‌ ಉದ್ಘಾಟನೆಗೆ ವಿಪಕ್ಷಗಳು ಕಿಡಿ

ಹೊಸದಿಲ್ಲಿ: ದೇಶದ ಹೊಸ ಸಂಸತ್‌ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮೇ 28ರಂದು ಉದ್ಘಾಟಿಸಲಿದ್ದಾರೆಂಬ ಮಾಹಿತಿ ಹಾಗೂ ಆ ದಿನ ವಿನಾಯಕ್‌ ದಾಮೋದರ್‌ ಸಾವರ್ಕರ್‌ ಅವರ ಜನ್ಮದಿನವೆಂದು ತಿಳಿಯುತ್ತಲೇ ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದು ಸಂಸತ್‌ ಕಟ್ಟಡವನ್ನು ಆ ದಿನ ಉದ್ಘಾಟಿಸಲು ನಿರ್ಧರಿಸಿರುವ ಹಿಂದೆ ರಾಜಕೀಯ ಉದ್ದೇಶಗಳಿವೆ ಎಂದಿದ್ದಾರೆ.

ಅಷ್ಟೇ ಅಲ್ಲದೆ ಸಂಸತ್‌ ಕಟ್ಟಡವನ್ನು ಪ್ರಧಾನಿಯೇಕೆ ಉದ್ಘಾಟಿಸಬೇಕು, ರಾಷ್ಟ್ರಪತಿಗಳೇಕೆ ಉದ್ಘಾಟಿಸುತ್ತಿಲ್ಲ ಎಂದೂ ಹಲವರು ಪ್ರಶ್ನಿಸುತ್ತಿದ್ದಾರೆ.

ಟಿಎಂಸಿ ಸಂಸದ ಸುಖೇಂದು ಶೇಖರ್‌ ರೇ ಟ್ವೀಟ್‌ ಮಾಡಿ, ದೇಶದ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ವೇಳೆ ಈ ಉದ್ಘಾಟನೆ ಸೂಕ್ತವಾಗಿದೆಯಾದರೂ ಸಂವಿಧಾನವನ್ನು 1949ರಲ್ಲಿ ಅಂಗೀಕರಿಸಿದ ದಿನವಾದ ನವೆಂಬರ್‌ 26ರಂದು ಉದ್ಘಾಟಿಸಿದ್ದರೆ ಅತ್ಯಂತ ಸೂಕ್ತವಾಗುತ್ತಿತ್ತು ಎಂದಿದ್ದಾರೆ.

ಆದರೆ ಅದನ್ನು ಮೇ 28ರಂದು ಸಾವರ್ಕರ್‌ ಜನ್ಮದಿನದಂದು ಮಾಡಲಾಗುತ್ತಿದೆ. ಇದೆಷ್ಟು ಸರಿ?” ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಸಂಸದ ಜೈರಾಂ ರಮೇಶ್‌, “ನಮ್ಮ ದೇಶದ ಸ್ಥಾಪಕರಿಗೆಲ್ಲಾ ಸಂಪೂರ್ಣ ಅವಮಾನ. ಗಾಂಧಿ, ನೆಹರು, ಪಟೇಲ್‌, ಬೋಸ್‌, ಅಂಬೇಡ್ಕರ್‌ ಎಲ್ಲರ ಅವಗಣನೆ,” ಎಂದು ಬರೆದಿದ್ದಾರೆ.

ಜಪಾನ್‌ನಲ್ಲಿ ಪ್ರಧಾನಿ ಮೋದಿ ಅವರು ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿರುವುದನ್ನು ಉಲ್ಲೇಖಿಸಿದ ಜೈರಾಂ ರಮೇಶ್‌ “ಹಿರೋಶಿಮಾದಲ್ಲಿ ಗಾಂಧೀಜಿ ಅವರ ಪ್ರತಿಮೆ ಅನಾವರಣ ಹಾಗೂ 8 ದಿನಗಳ ನಂತರ ದೇಶದಲ್ಲಿ ಸಂಸತ್‌ ಕಟ್ಟಡವನ್ನು ಗಾಂಧೀಜಿ ಅವರನ್ನು ಜೀವನಪೂರ್ತಿ ವಿರೋಧಿಸಿದ್ದ ಹಾಗೂ ಮಹಾತ್ಮ ಅವರ ಹತ್ಯೆಗೈದ ಜನರ ಮೇಲೆ ಬಹಳಷ್ಟು ಪ್ರಭಾವ ಬೀರಿದ ವ್ಯಕ್ತಿಯ ಜನ್ಮದಿನದಂದು ಉದ್ಘಾಟಿಸಲಿದ್ದಾರೆ. “ ಎಂದು ರಮೇಶ್‌ ಬರೆದಿದ್ದಾರೆ.

ಸಾವರ್ಕರ್‌ ಜನ್ಮದಿನಾಚರಣೆಯಂದು ನೂತನ ಸಂಸತ್‌ ಕಟ್ಟಡ ಉದ್ಘಾಟನೆ ಎಂದು ಸರಕಾರ ಅಧಿಕೃತವಾಗಿ ಹೇಳಿಲ್ಲವಾದರೂ ಬಿಜೆಪಿ ಐಟಿ ಘಟಕ ಮುಖ್ಯಸ್ಥ ಅಮಿತ್‌ ಮಾಲವಿಯಾ ಅವರು ಶುಕ್ರವಾರ ಟ್ವೀಟ್‌ ಮಾಡಿ “ಪ್ರಧಾನಿ ಮೋದಿ ಅವರು ಮೇ 28ರಂದು ಸಂಸತ್‌ ಕಟ್ಟಡ ಉದ್ಘಾಟಿಸಲಿದ್ದಾರೆ. ಇದು ವಿನಾಯಕ್‌ ದಾಮೋದರ್‌ ಸಾವರ್ಕರ, ಭಾರತದ ಮಹಾನ್‌ ಸುಪುತ್ರ ಅವರ 140ನೇ ಜನ್ಮದಿನವೂ ಹೌದು,” ಎಂದು ಬರೆದಿದ್ದಾರೆ.

ಪ್ರಧಾನಿಯೇಕೆ ಸಂಸತ್‌ ಕಟ್ಟಡ ಉದ್ಘಾಟಿಸಬೇಕು ಎಂದು ಎಐಎಂಐಎಂ ಸಂಸದ ಅಸದುದ್ದೀನ್‌ ಉವೈಸಿ ಪ್ರಶ್ನಿಸಿದ್ದಾರೆ.

“ಮಾನ್ಯ ಲೋಕಸಭಾ ಸ್ಪೀಕರ್‌  ಅಥವಾ ರಾಜ್ಯಸಭಾ ಸಭಾಪತಿ ಉದ್ಘಾಟಿಸಬಹುದಾಗಿತ್ತು. ಅದು ಸಾವರ್ಜನಿಕ ಹಣದಿಂದ ನಿರ್ಮಿಸಲಾಗಿದೆ.  ತಮ್ಮ ಸ್ನೇಹಿತರು ಅವರ ಖಾಸಗಿ ನಿಧಿಯಿಂದ ಪ್ರವರ್ತಿಸಿದಂತೆ ಅವರೇಕೆ ವರ್ತಿಸುತ್ತಿದ್ದಾರೆ?” ಎಂದು ಉವೈಸಿ ಪ್ರಶ್ನಿಸಿದ್ದಾರೆ.

share
Next Story
X