ಪಶ್ಚಿಮ ಬಂಗಾಳ: ರಾಜ್ಯದ ಏಕೈಕ ಕಾಂಗ್ರೆಸ್ ಶಾಸಕ ಟಿಎಂಸಿಗೆ ಸೇರ್ಪಡೆ
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕರಾಗಿದ್ದ ಬೇರಾನ್ ಬಿಸ್ವಾಸ್ ಸೋಮವಾರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರ್ಪಡೆಗೊಂಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಮಾತ್ರ ಹೋರಾಟ ಮಾಡಬಹುದು ಎಂದು ಅರಿವಾದ್ದರಿಂದ ಬಿಸ್ವಾಸ್ ಅವರು ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.
"ಇಂದು, ಅಭಿಷೇಕ್ ಬ್ಯಾನರ್ಜಿಯವರ ಸಮ್ಮುಖದಲ್ಲಿ, ಕಾಂಗ್ರೆಸ್ ಶಾಸಕ ಬೇರಾನ್ ಬಿಸ್ವಾಸ್ ನಮ್ಮೊಂದಿಗೆ ಸೇರಿಕೊಂಡರು. ನಾವು ಅವರನ್ನು ತೃಣಮೂಲ ಕಾಂಗ್ರೆಸ್ ಕುಟುಂಬಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ! ಬಿಜೆಪಿಯ ವಿಭಜಕ ಮತ್ತು ತಾರತಮ್ಯದ ರಾಜಕೀಯದ ವಿರುದ್ಧ ಹೋರಾಡುವ ನಿಮ್ಮ ಸಂಕಲ್ಪವನ್ನು ಬಲಪಡಿಸಲು, ನೀವು ಸರಿಯಾದ ವೇದಿಕೆಯನ್ನು ಆರಿಸಿದ್ದೀರಿ. ಒಟ್ಟಿಗೆ, ನಾವು ಗೆಲ್ಲುತ್ತೇವೆ!" ಎಂದು ಟಿಎಂಸಿ ಪಕ್ಷವು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹೇಳಿದೆ.
Next Story