Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಘಾತಕ್ಕೀಡಾದ ರೈಲು ಬೋಗಿಯಲ್ಲಿ...

ಅಪಘಾತಕ್ಕೀಡಾದ ರೈಲು ಬೋಗಿಯಲ್ಲಿ ದುರ್ವಾಸನೆಗೆ ಮೊಟ್ಟೆ ಕಾರಣ, ಹೊರತು ಮೃತದೇಹಗಳಲ್ಲ: ರೈಲ್ವೆ ಇಲಾಖೆ

10 Jun 2023 12:06 PM IST
share
ಅಪಘಾತಕ್ಕೀಡಾದ ರೈಲು ಬೋಗಿಯಲ್ಲಿ ದುರ್ವಾಸನೆಗೆ ಮೊಟ್ಟೆ ಕಾರಣ, ಹೊರತು ಮೃತದೇಹಗಳಲ್ಲ: ರೈಲ್ವೆ ಇಲಾಖೆ

ಭುವನೇಶ್ವರ: ಜೂನ್ 2ರಂದು ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವಿಗೀಡಾಗಿರುವ ಕೆಲವರ ಮೃತದೇಹಗಳು ಇನ್ನೂ ಯಶವಂತಪುರ-ಹೌರಾ ರೈಲು ಬೋಗಿಗಳಲ್ಲೇ ಇವೆ ಎಂಬ ಭಾರಿ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸ್ಪಷ್ಟನೆ ನೀಡಿರುವ ರೈಲ್ವೆ ಅಧಿಕಾರಿಯೊಬ್ಬರು, ಬೋಗಿಗಳಲ್ಲಿರುವುದು ಕೊಳೆತ ಮೊಟ್ಟೆಗಳೇ ಹೊರತು ಯಾವುದೇ ಮೃತದೇಹ ಉಳಿದಿಲ್ಲ ಎಂದು ಹೇಳಿದ್ದಾರೆ.

288 ಮಂದಿಯ ಸಾವಿಗೆ ಕಾರಣವಾಗಿದ್ದ ರೈಲು ಅಪಘಾತ ಸಂಭವಿಸಿದ ಬಹನಾಗಾ ಬಝಾರ್ ರೈಲ್ವೆ ನಿಲ್ದಾಣದ ಬಳಿ ವಾಸಿಸುತ್ತಿರುವ ಗ್ರಾಮಸ್ಥರು, ಅಪಘಾತದ ಸ್ಥಳದಲ್ಲಿ ಉಳಿದಿರುವ ಬೋಗಿಯಿಂದ ದುರ್ವಾಸನೆ ಬರುತ್ತಿದ್ದು, ಕೆಲವು ಮೃತದೇಹಗಳು ಇನ್ನೂ ಬೋಗಿಯಲ್ಲೇ ಉಳಿದಿರಬಹುದು ಎಂದು ದೂರಿದ್ದರು. ಆ ದೂರನ್ನು ಆಧರಿಸಿ ರಾಜ್ಯ ಸರ್ಕಾರದ ನೆರವಿನೊಂದಿಗೆ ರೈಲ್ವೆ ಇಲಾಖೆಯು ತಪಾಸಣಾ ಕಾರ್ಯ ಕೈಗೊಂಡಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಪೂರ್ವ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಆದಿತ್ಯ ಕುಮಾರ್ ಚೌಧರಿ, "ರೈಲ್ವೆ ನಿಲ್ದಾಣದಲ್ಲಿನ ದುರ್ವಾಸನೆಗೆ ಕೊಳೆತ ಮೊಟ್ಟೆಗಳು ಕಾರಣವೇ ಹೊರತು ಮನುಷ್ಯರ ಮೃತದೇಹಗಳಲ್ಲ. ನಾವು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದಿಂದ ಎರಡು ಬಾರಿ ಸ್ಥಳ ದೃಢೀಕರಣ ಪಡೆದಿದ್ದೇವೆ" ಎಂದು ಸ್ಪಷ್ಟಪಡಿಸಿದ್ದಾರೆ.

ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ನ ಪಾರ್ಸೆಲ್ ವಾಹನದಲ್ಲಿ ಸುಮಾರು ಮೂರು ಟನ್ ಮೊಟ್ಟೆಯನ್ನು ಸಾಗಿಸಲಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

"ಎಲ್ಲ ಮೊಟ್ಟೆಗಳು ಕೊಳೆಯುತ್ತಿದ್ದು, ಅದರಿಂದ ದುರ್ವಾಸನೆ ಬರುತ್ತಿದೆ. ಅಪಘಾತದ ಸ್ಥಳದಿಂದ ಮೂರು ಟ್ರ್ಯಾಕ್ಟರ್‌ಗಳಲ್ಲಿ ಆ ಮೊಟ್ಟೆಗಳನ್ನು ಹೊರ ತೆಗೆದು ಸಾಗಿಸಲಾಗಿದೆ" ಎಂದು ಚೌಧರಿ ಹೇಳಿದ್ದಾರೆ.

ಈ ನಡುವೆ, ಅಪಘಾತದಲ್ಲಿ ಸಂತ್ರಸ್ತರಾಗಿರುವ 661 ಮಂದಿಯ ಕುಟುಂಬಗಳಿಗೆ ಈವರೆಗೆ ರೂ. 22.66 ಕೋಟಿ ಮೊತ್ತದ ಪರಿಹಾರವನ್ನು ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮೃತಪಟ್ಟ ವ್ಯಕ್ತಿಗಳ ತಕ್ಷಣದ ವಾರಸುದಾರರು ಹಾಗೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರು ಪರಿಹಾರ ಮೊತ್ತವನ್ನು ಪಡೆದುಕೊಂಡಿದ್ದಾರೆ.

ಅಪಘಾತದಲ್ಲಿ ಸಾವಿಗೀಡಾಗಿರುವ ವ್ಯಕ್ತಿಗಳ ಕುಟುಂಬಗಳಿಗೆ ರೈಲ್ವೆ ಇಲಾಖೆಯು ತಲಾ ರೂ. 10 ಲಕ್ಷ ಪರಿಹಾರ ನೀಡಲಿದೆ ಎಂದು ಚೌಧರಿ ತಿಳಿಸಿದ್ದಾರೆ. ಈ ದುರಂತದಲ್ಲಿ ಸುಮಾರು 1200 ಮಂದಿ ಗಾಯಾಳುಗಳಾಗಿದ್ದಾರೆ.

share
Next Story
X