ಅಬ್ದುಲ್ ಖಾದರ್
ಮಂಗಳೂರು, ಆ.5: ಕಲ್ಲಡ್ಕ ಸಮೀಪದ ಗೋಳ್ತಮಜಲಿನ ಮದಕ ನಿವಾಸಿ ಅಬ್ದುಲ್ ಖಾದರ್ (70) ಬುಧವಾರ ಬೆಳಗ್ಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲವು ದಿನಗಳಿಂದ ಅಸೌಖ್ಯದಿಂದಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪಶು ಸಂಗೋಪಣಾ ಇಲಾಖೆಯಲ್ಲಿ ನೌಕರರಾಗಿದ್ದ ಇವರು ಪತ್ನಿ ಮತ್ತು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Next Story